• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆರೆಸ್ಸೆಸ್ ಮುಖಂಡರ ಹತ್ಯೆ ಆರೋಪಿಗಳು ಯಾವ ದೇಶದಲ್ಲಿ ತರಬೇತಿ ಪಡೆದು ಬಂದಿದ್ದಾರೆ ಗೊತ್ತಾ?

TNN Correspondent Posted On May 31, 2018


  • Share On Facebook
  • Tweet It

ನವದೆಹಲಿ: ಇತ್ತೀಚೆಗೆ ದೇಶದಲ್ಲಿ ಆರೆಸ್ಸೆಸ್ ಹಾಗೂ ಹಿಂದೂ ಕಾರ್ಯಕರ್ತರ ಹತ್ಯೆಗಳು ಜಾಸ್ತಿಯಾಗುತ್ತಿವೆ. ಕೇರಳ ಸೇರಿ ಹಲವು ರಾಜ್ಯಗಳಲ್ಲಿ ಆರೆಸ್ಸೆಸ್ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತದೆ. ಕರ್ನಾಟಕದಲ್ಲೇ 22ಕ್ಕೂ ಅಧಿಕ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿರುವುದು ಆತಂಕ ಸೃಷ್ಟಿಸಿದೆ.

ಆದರೆ ಹೀಗೆ ಹಿಂದೂಗಳನ್ನು ಹತ್ಯೆ ಮಾಡಿದವರು ಎಲ್ಲಿ ತರಬೇತಿ ಪಡೆದಿದ್ದಾರೆ ಎಂಬುದು ಈಗ ಮತ್ತಷ್ಟು ಆತಂಕಕ್ಕೀಡುಮಾಡಿದೆ. ಹೌದು, ಇತ್ತೀಚೆಗೆ ಆರೆಸ್ಸೆಸ್ ಕಾರ್ಯಕರ್ತ ನರೇಶ್ ಕುಮಾರ್ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಈ ಹತ್ಯೆಯ ಆರೋಪಿಗಳನ್ನು ಬಂಧಿಸಿದ್ದ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಇವರು ಇಟಲಿಯಲ್ಲಿ ತರಬೇತಿ ಪಡೆದು ಬಂದಿದ್ದಾರೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಪಂಜಾಬಿನಲ್ಲಿ 2016ರಿಂದ 17ರ ಅವಧಿಯಲ್ಲಿ ಸುಮಾರು 8 ಎಂಟು ಎರೆಸ್ಸೆಸ್ ಮುಖಂಡರನ್ನು ಹತ್ಯೆ ಮಾಡಲಾಗಿದ್ದು, ಈ ಎಲ್ಲ ಕೃತ್ಯಗಳ ಹಿಂದೆಯೂ ಹೀಗೆ ಇಟಲಿಯಿಂದ ತರಬೇತಿ ಪಡೆದವರ ಕೈವಾಡ ಇದೆ. ಇವರು ಇಟಲಿಯಲ್ಲಿ ಕೊಲೆ ಮಾಡುವ ಕುರಿತು ತರಬೇತಿ ಪಡೆದು ಭಾರತದಲ್ಲಿ ಆರೆಸ್ಸೆಸ್ ಮುಖಂಡರನ್ನು ಕೊಲೆ ಮಾಡಲಾಗಿದೆ ಎಂದು ನರೇಶ್ ಕುಮಾರ್ ಹತ್ಯೆಯ ಪ್ರಮುಖ ಆರೋಪಿ ಎನ್ಐಎ ಅಧಿಕಾರಿಗಳಿಗೆ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಈ ಕೊಲೆ ಪಿತೂರಿಯಲ್ಲಿ ಖಲಿಸ್ತಾನ್ ಲಿಬರೇಷನ್ ಫೋರ್ಸ್ ಸೇರಿ ಹಲವು ಸಂಘಟನೆಗಳು ಬೆಂಬಲ ನೀಡಿವೆ. ಪಾಕಿಸ್ತಾನ, ಆಸ್ಟ್ರೇಲಿಯಾ, ಲಂಡನ್, ಫ್ರಾನ್ಸ್ ಹಾಗೂ ಇಟಲಿಯಲ್ಲಿ ಕುಳಿತು ಹಿಂದೂ ಸಂಘಟನೆಗಳ ಮುಖಂಡರ ಹತ್ಯೆಗೂ ಪಿತೂರಿ ಮಾಡಲಾಗಿತ್ತು ಎಂದು ವಿಚಾರಣೆಯಿಂದ ತಿಳಿದುಬಂದಿದೆ. ಈ ಕುರಿತು ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search