• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲು ಭಾರತ ಯಾವ ರಾಷ್ಟ್ರದಿಂದ ಸ್ಪೈಕ್ ಕ್ಷಿಪಣಿ ತರಿಸಿಕೊಳ್ಳುತ್ತಿದೆ ಗೊತ್ತಾ?

TNN Correspondent Posted On June 2, 2018


  • Share On Facebook
  • Tweet It

ನವದೆಹಲಿ: ಆ ಹೇಡಿ ಪಾಕಿಸ್ತಾನವನ್ನು ಎಂದಿಗೂ ನಂಬುವಂತಿಲ್ಲ. ಮಗ್ಗುಲಲ್ಲೇ ಕುಳಿತು ಶಾಂತಿ ಮಾತುಕತೆ ನಡೆಸಿ, ಹಿಂಬಾಗಿಲಿನಿಂದ ಉಗ್ರರು, ಸೈನಿಕರನ್ನು ಬಿಟ್ಟು ಉಪಟಳ ಮಾಡುತ್ತಿದೆ. ಇಂದಿಗೂ ಜಮ್ಮು-ಕಾಶ್ಮೀರದಲ್ಲಿ ಇಂತಹುದೇ ಉಪಟಳ ಮಾಡುತ್ತದೆ. ಆದರೆ ಭಾರತೀಯ ಸೈನಿಕರು ಸುಮ್ಮನಿರಬೇಕಿಲ್ಲ, ದಾಳಿ ಮಾಡಲು ಯತ್ನಿಸಿದ, ಮಾಡಿದ ಉಗ್ರರು, ಪಾಕಿ ಸೈನಿಕರನ್ನು ಹೊಡೆದುರುಳಿಸುತ್ತಿದ್ದಾರೆ.

ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲು ಭಾರತ ಮಹತ್ತರ ನಿರ್ಧಾರವೊಂದನ್ನು ಕೈಗೊಂಡಿದ್ದು, ಶತ್ರುರಾಷ್ಟ್ರದ ಯುದ್ಧ ಟ್ಯಾಂಕರ್ ಗಳನ್ನು ಕ್ಷಣ ಮಾತ್ರದಲ್ಲಿ ಹೊಡೆದುರುಳಿಸುವ ಟ್ಯಾಂಕ್ ನಿರೋಧಕ ಸ್ಕೈಪ್ ಕ್ಷಿಪಣಿಗಳನ್ನು ಆಮದು ಮಾಡಿಕೊಳ್ಳಲು ಮುಂದಾಗಿದೆ.

ಈ ಕುರಿತು ಭಾರತ ಹಾಗೂ ಇಸ್ರೇಲ್ ನಡುವೆ ಮಹತ್ತರ ಮಾತುಕತೆ ಮುಗಿದಿದ್ದು, ಶೀಘ್ರದಲ್ಲೇ ಉಭಯ ರಾಷ್ಟ್ರಗಳ ನಡುವಿನ ಒಪ್ಪಂದ ಪ್ರಕಟವಾಗಲಿದೆ. ಈ ಸ್ಪೈಕ್ ಕ್ಷಿಪಣಿಗಳ ತಯಾರಿಕೆಯಲ್ಲಿ ಇಸ್ರೇಲ್ ಮುನ್ನಡೆಯಲ್ಲಿರುವ ಕಾರಣ ಹಾಗೂ ಇಸ್ರೇಲ್ ಜತೆ ಭಾರತದ ಸಂಬಂಧ ಉತ್ತಮವಾಗಿರುವ ಕಾರಣದಿಂದ ಇಸ್ರೇಲ್ ನಿಂದ ಖರೀದಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಟ್ಯಾಂಕ್ ನಿರೋಧಕ ಸ್ಪೈಕ್ ಕ್ಷಿಪಣಿಗಳು ಆಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ಶತ್ರುರಾಷ್ಟ್ರಗಳ ಯುದ್ಧದ ಟ್ಯಾಂಕರ್ ಗಳನ್ನು ಕ್ಷಣಮಾತ್ರದಲ್ಲೇ ಹೊಡೆದುರುಳಿಸುವ ಶಕ್ತಿ ಹೊಂದಿವೆ. ಭಾರತಕ್ಕೆ ಪ್ರಸ್ತುತ ಇಂತಹ 8 ಸಾವಿರ ಕ್ಷಿಪಣಿಗಳ ಅವಶ್ಯವಿದ್ದು, ಮುಂದಿನ ಮೂರು ವರ್ಷದಲ್ಲಿ ಇಸ್ರೇಲ್ ಭಾರತಕ್ಕೆ ಬಹುತೇಕ ಕ್ಷಿಪಣಿ ಪೂರೈಸಲಿದೆ ಎಂದು ಮೂಲಗಳು ತಿಳಿಸಿವೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search