• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿಯ ತೆಗಳುವವರೇ ಕೇಳಿ, 4 ವರ್ಷದಲ್ಲಿ ಅಲ್ಪಸಂಖ್ಯಾತರಿಗೆ ನೀಡುವ ಅನುದಾನ ಶೇ.62ರಷ್ಟು ಹೆಚ್ಚಿಸಲಾಗಿದೆ!

TNN Correspondent Posted On June 5, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಎಂದರೆ ಮುಸ್ಲಿಂ ವಿರೋಧಿ, ಅಲ್ಪಸಂಖ್ಯಾತರ ವಿರೋಧಿ ಎನ್ನುವವರು ತುಂಬ ಜನರಿದ್ದಾರೆ. ಅಲ್ಪಸಂಖ್ಯಾತರನ್ನು ಗುತ್ತಿಗೆ ಪಡೆದವರಂತೆ ಆಡುವ ಕಾಂಗ್ರೆಸ್ ಮೋದಿ ಅವರನ್ನು ತೆಗಳಲು ಇದೊಂದೇ ಅಸ್ತ್ರವನ್ನೇ ಬಳಸುತ್ತದೆ.

ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತ್ರ ಹಾಗಲ್ಲ. ಸರ್ವ ಜನಾಂಗದವರು, ಸರ್ವ ಸಮುದಾಯದವರನ್ನು ಒಗ್ಗೂಡಿ ಅಭಿವೃದ್ಧಿ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಹಲವು ಯೋಜನೆ, ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಇದನ್ನು ಮೋದಿ ಅವರನ್ನು ತೆಗಳುವ ದೃಷ್ಟಿಯಿಂದ, ಅಲ್ಪಸಂಖ್ಯಾತರ ಮತಪಡೆದೂ ಅವರನ್ನು ಅಭಿವೃದ್ಧಿಗೊಳಿಸದ ಕಾಂಗ್ರೆಸ್ಸಿಗರು ಸುಖಾಸುಮ್ಮನೆ ತೆಗಳುತ್ತಾರೆ.

ಆದರೆ ಮೋದಿ ಸರ್ಕಾರ ಕಳೆದ ನಾಲ್ಕು ವರ್ಷದಲ್ಲಿ ಅಲ್ಪಸಂಖ್ಯಾತರ ಏಳಿಗೆಗಾಗಿ ಹಲವು ಯೋಜನೆ ಜಾರಿಗೊಳಿಸಿದ್ದಾರೆ. ಅಷ್ಟೇ ಅಲ್ಲ, ಇದುವರೆಗೆ ಅಲ್ಪಸಂಖ್ಯಾತರ ಏಳಿಗೆಗೆ ನೀಡುತ್ತಿದ್ದ ಅನುದಾನವನ್ನು ಶೇ.62ರಷ್ಟು ಹೆಚ್ಚಿಸಲಾಗಿದೆ. ಪ್ರಸಕ್ತ ಸಾಲಿನ ಬಜೆಟ್ಟಿನಲ್ಲಿ ಇದುವರೆಗೂ ಅಲ್ಪಸಂಖ್ಯಾತರ ಏಳಿಗೆಗೆ ಮೀಸಲಿಡಲಾಗದಂತಹ ಹಣ, ಎಂದರೆ ಕೇಂದ್ರ ಸರ್ಕಾರ ಬರೋಬ್ಬರಿ 4,700 ಕೋಟಿ ರೂಪಾಯಿಗಳನ್ನು ಮೀಸಲಿಡುವ ಮೂಲಕ ಇತಿಹಾಸ ಬರೆಯಿತು.

ಇದುವರೆಗೂ ಯಾವುದೇ ಸರ್ಕಾರ ಅಲ್ಪಸಂಖ್ಯಾತರ ಏಳಿಗೆಗಾಗಿ ಮೀಸಲಿಟ್ಟರಿಲಿಲ್ಲ. ಈ ಹಣದಲ್ಲಿ ಪ್ರಸ್ತುತ 45 ಲಕ್ಷ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯುತ್ತಿದ್ದಾರೆ. ಕೌಶಲ ಅಭಿವೃದ್ಧಿಗೊಳಿಸುತ್ತಿದ್ದಾರೆ. ಅಷ್ಟೇ ಅಲ್ಲ, ಮುಸ್ಲಿಮ್ ಮಹಿಳೆಯರು ಪುರುಷರ ಸಹಾಯವಿಲ್ಲದೆ ಹಜ್ ಯಾತ್ರೆ, ಅಂದರೆ ಸ್ವತಂತ್ರವಾಗಿ ಹಜ್ ಯಾತ್ರೆ ಕೈಗೊಳ್ಳಲು ಅನುಕೂಲ ಮಾಡಿದ್ದಾರೆ. ಆ ಮೂಲಕ ಮಹಿಳೆಯರೂ ಸ್ವಾವಲಂಬಿಯಾಗಿ ಯಾತ್ರೆ ಕೈಗೊಳ್ಳುವ ಅವಕಾಶ ಮಾಡಿದ್ದಾರೆ. ಇದೇ ಕಾರಣಕ್ಕೆ ಪ್ರಸಕ್ತ ವರ್ಷದಲ್ಲಿ 1300 ಮುಸ್ಲಿಂ ಮಹಿಳೆಯರು ಸ್ವತಂತ್ರವಾಗಿ ಯಾತ್ರೆ ಕೈಗೊಳ್ಳಲಿದ್ದಾರೆ.

ಅಷ್ಟೇ ಅಲ್ಲ, ಹಜ್ ಸಬ್ಸಿಡಿ ರದ್ದುಗೊಳಿಸಿ, ಆ ಹಣವನ್ನು ಮುಸ್ಲಿಂ ಮಹಿಳೆಯರ ಶಿಕ್ಷಣಕ್ಕಾಗಿ ಬಳಸಲು ಮುಂದಾಗಿದ್ದಾರೆ. ತ್ರಿವಳಿ ತಲಾಖ್ ರದ್ದುಗೊಳಿಸಿ ಮುಸ್ಲಿಂ ಮಹಿಳೆಯರು ನರಕ ಅನುಭವಿಸುವುದನ್ನು ತಪ್ಪಿಸಲು ಮುಂದಾಗಿದ್ದಾರೆ. ಕೌಶಲ ಅಭಿವೃದ್ಧಿಗಾಗಿ ಮೌಲಾನಾ ಆಜಾದ್  ನ್ಯಾಷನಲ್ ಅಕಾಡೆಮಿ ಸ್ಥಾಪಿಸಿದ್ದಾರೆ. ಗರಿಬ್ ನವಾಜ್ ಕೌಶಲ ಅಭಿವೃದ್ಧಿ ಸಂಸ್ಥೆ ಸ್ಥಾಪಿಸಿದ್ದಾರೆ. ಹೇಳಿ ಮೋದಿ ಸರ್ಕಾರ ಅಲ್ಪಸಂಖ್ಯಾತರ ವಿರೋಧಿಯಾಗಿದ್ದಾರೆ ಇಷ್ಟೆಲ್ಲ ಮಾಡುತ್ತಿತ್ತಾ?

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search