• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಫಲಿಸಿತು ಯುವ ಬ್ರಿಗೇಡ್ ಶ್ರಮ, ಒಂದೇ ದಿನದಲ್ಲಿ ನೇತ್ರಾವತಿ ನದಿ ಸ್ವಚ್ಛಗೊಳಿಸಿದ ಕಾರ್ಯಕರ್ತರು!

TNN Correspondent Posted On June 7, 2018


  • Share On Facebook
  • Tweet It

ಮಂಗಳೂರು: ನೀರು ಜೀವಜಲ ಎನ್ನುತ್ತೇವೆ, ವೇದಿಕೆ ಮೇಲೆ ಕುಳಿತು ಜಲಮೂಲ ಉಳಿಸಬೇಕು, ಮಿತವಾಗಿ ನೀರು ಬಳಸಬೇಕು ಎಂದು ಭಾಷಣ ಬಿಗಿಯುತ್ತೇವೆ, ನೀರಿನ ಸಂರಕ್ಷಣೆ ಕುರಿತು ತಾಸುಗಟ್ಟಲೇ ಹೇಳುತ್ತೇವೆ… ಆದರೆ ವಾಸ್ತವದಲ್ಲಿ ಬಹುತೇಕ ಜನ ನೀರಿನ ರಕ್ಷಣೆ ಮಾಡದಿರುವುದರಿಂದ, ಸರ್ಕಾರವೂ ಕೆರೆ-ಕಟ್ಟೆ ಹೂಳೆತ್ತುವುದನ್ನು ಸಮರ್ಪಕವಾಗಿ ಮಾಡದ ಕಾರಣ ನೀರು ಮಾನವನಿಗೆ ದುಬಾರಿಯಾಗುತ್ತಲೇ ಇದೆ.

ಆದರೂ ನೀರಿನ ಸಂರಕ್ಷಣೆಯನ್ನು ರಾಜ್ಯದಲ್ಲಿ ಪ್ರಾಮಾಣಿಕವಾಗಿ ಮಾಡುತ್ತಿರುವ ಸಂಸ್ಥೆಯೆಂದರೆ ಅದು ಯುವ ಬ್ರಿಗೇಡ್. ಯುವ ಉತ್ಸಾಹಿಗಳ ತಂಡ ಕಟ್ಟಿರುವ ಚಕ್ರವರ್ತಿ ಸೂಲಿಬೆಲೆ ಅವರು ರಾಜ್ಯದ ಹಲವು ಬಾವಿ, ಕಲ್ಯಾಣಿಗಳನ್ನು ಸ್ವಚ್ಛಗೊಳಿಸುವ ಮೂಲಕ ಮಾದರಿಯಾಗಿದ್ದಾರೆ.

ಇಂತಹ ತಂಡವೊಂದು ಇತ್ತೀಚೆಗೆ ಧರ್ಮಸ್ಥಳದ ಬಳಿ ಇರುವ ನೇತ್ರಾವತಿ ನದಿಯನ್ನು ಸ್ವಚ್ಛಗೊಳಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಲ್ಲದೆ ನೂರಾರು ಜನ ನೀರಿನ ಸಂರಕ್ಷಣೆ ಹಾಗೂ ನದಿಗಳ ಸ್ವಚ್ಛತೆ ಬಗ್ಗೆ ಯೋಚನೆ ಮಾಡುವಂತೆ ಮಾಡಿದ್ದಾರೆ.

ಹೌದು, ಒಂದು ದಿನ ನದಿಯ ಎರಡು ಭಾಗದಲ್ಲಿ ಸುಮಾರು 500 ಯುವ ಬ್ರಿಗೇಡ್ ಸ್ವಯಂ ಕಾರ್ಯಕರ್ತರು ನೇತ್ರಾವತಿ ನದಿಯನ್ನು ಸ್ವಚ್ಛಗೊಳಿಸಲು ಶ್ರಮಿಸಿದ್ದಾರೆ. ಸುಮಾರು 8 ತಾಸು ಯುವ ಕಾರ್ಯಕರ್ತರು ಮಾಡಿದ ಶ್ರಮದಿಂದ ನದಿಯಲ್ಲಿದ್ದ 30ಕ್ಕೂ ಅಧಿಕ ಟನ್ ತ್ಯಾಜ್ಯವನ್ನು ಹೊರತೆಗೆಯಲಾಗಿದೆ.

ಅಷ್ಟೇ ಅಲ್ಲ, 500 ಕಾರ್ಯಕರ್ತರು ಬಂದು ನೇತ್ರಾವತಿ ನದಿ ನೀರು ಸ್ವಚ್ಛಗೊಳಿಸಿದ್ದು, ಈ ಭಾಗದಲ್ಲಿ ಸಾವಿರಾರು ಜನರ ಮೇಲೆ ಪ್ರಭಾವ ಬೀರಿದೆ. ಸುಮಾರು 5000 ಯುವಕರು ನದಿ ಸ್ವಚ್ಛಗೊಳಿಸುವ ಕಾರ್ಯದಲ್ಲಿ ಪಾಲ್ಗೊಳ್ಳುವ ಆಸಕ್ತಿ ತೋರಿದ್ದಾರೆ ಎಂದು ತಿಳಿದುಬಂದಿದೆ. ಇಂತಹವರ ಸಂತತಿ ಸಾವಿರವಾಗಲಿ ಎಂಬುದೇ ನಮ್ಮ ಆಶಯ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search