• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವೈಷ್ಣೋದೇವಿ ಯಾತ್ರಿಕರ ಜೀವ ಉಳಿಸಿ, ತನ್ನ ಜೀವ ಬಿಟ್ಟ ಆ ಯೋಧನಿಗೆ ಪ್ರಧಾನಮಂತ್ರಿ ಪದಕದ ಗೌರವ!

TNN Correspondent Posted On June 8, 2018
0


0
Shares
  • Share On Facebook
  • Tweet It

ನವದೆಹಲಿ: ನಮ್ಮ ಇಂದಿನ ನೆಮ್ಮದಿಯ ಜೀವನಕ್ಕಾಗಿ ತಮ್ಮ ಸುಂದರ ನಾಳೆಗಳನ್ನು ಬಲಿ ಕೊಡುವವರು ಸೈನಿಕರು. ಅಂತಹ ಸೈನಿಕರ ಶೌರ್ಯ ಹಾಗೂ ತ್ಯಾಗವನ್ನು ಪ್ರತಿ ಸರ್ಕಾರವೂ ಸ್ಮರಿಸಿದರೆ, ಪ್ರೋತ್ಸಾಹಿಸಿದರೆ, ನೆನಪಿಸಿದರೆ ಮಾತ್ರ ಸೈನಿಕರಿಗೆ ಗೌರವ ಕೊಟ್ಟಂತೆ.

ಹೀಗೆ ಸೈನಿಕರ ತ್ಯಾಗ ಸ್ಮರಿಸುವ ಹಾಗೂ ಅವರ ಶೌರ್ಯ ಪ್ರಶಂಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ಮುಂದಾಗಿದ್ದು, ಕಳೆದ ವರ್ಷ ವೈಷ್ಣೋದೇವಿ ಯಾತ್ರೆಗೆ ತೆರಳಿ ಭೂಕುಸಿತಕ್ಕೆ ಸಿಲುಕಿ ಪ್ರಾಣಾಪಾಯದಲ್ಲಿದ್ದ ಯಾತ್ರಿಕರನ್ನು ರಕ್ಷಿಸಿ, ತನ್ನ ಪ್ರಾಣವನ್ನೇ ಬಿಟ್ಟ ಸಿಆರ್ ಪಿಎಫ್ ಯೋಧನಿಗೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಪೊಲೀಸ್ ಮೆಡಲ್ ನೀಡಿದೆ.

ಹೌದು, 2016ರ ಆಗಸ್ಟ್ 14ರಂದು ಭೂಕುಸಿತದಿಂದ ಮಣ್ಣಿನೊಳಗೆ ಸಿಲುಕಿದವರನ್ನು ರಕ್ಷಿಸಿ, ತನ್ನ ಪ್ರಾಣವನ್ನೇ ಕಳೆದುಕೊಂಡ ಸಿಆರ್ ಪಿಎಫ್ ಮುಖ್ಯ ಪೇದೆ ಹರ್ವಿಂದರ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಮೆಡಲ್ ನೀಡಲಾಗಿದೆ ಎಂದು ಅರೆ ಸೈನಿಕ ಪಡೆಯ ವಕ್ತಾರರೊಬ್ಬರು ಮಾಹಿತಿ ಮಾಹಿತಿ ನೀಡಿದ್ದಾರೆ.

ಯಾತ್ರಿಕರ ಜೀವ ಉಳಿಸಲು ಹರ್ವಿಂದರ್ ಸಿಂಗ್ ತೋರಿದ ಧೈರ್ಯ, ಸಾಹಸ ಹಾಗೂ ಆತ ಜನರಿಗಾಗಿ ಮಾಡಿದ ಪರಮೋಚ್ಚ ತ್ಯಾಗ ಸ್ಮರಿಸಿ ಈ ಮೆಡಲ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ವೈಷ್ಣೋದೇವಿ ಯಾತ್ರೆ ಕೈಗೊಂಡಾಗ ಭೂಕುಸಿತ ಉಂಟಾಗಿದ್ದು, ಕೆಲವು ಮಹಿಳೆಯರು ಹಾಗೂ ಮಕ್ಕಳು ಮಣ್ಣಿನಲ್ಲಿ ಸಿಲುಕಿದ್ದರು. ಇದನ್ನು ಗಮನಿಸಿದ್ದ ಹರ್ವಿಂದರ್ ಸಿಂಗ್ ಅವರನ್ನು ಕಾಪಾಡಿದ್ದರು. ಆದರೆ ದುರದೃಷ್ಟವಶಾತ್ ಮಣ್ಣು ಹಾಗೂ ಕಲ್ಲು ಮೈಮೇಲೆ ಬಿದ್ದ ಕಾರಣ ಹರ್ವಿಂದರ್ ಸಿಂಗ್ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದರು.

0
Shares
  • Share On Facebook
  • Tweet It




Trending Now
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Tulunadu News December 22, 2025
ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
Tulunadu News December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
  • Popular Posts

    • 1
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 2
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 3
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 4
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 5
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!

  • Privacy Policy
  • Contact
© Tulunadu Infomedia.

Press enter/return to begin your search