• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ಅರ್ಜುನ್ ಅಮೃತಾ ಮದುವೆ ಹೇಗಿತ್ತು? ಇಲ್ಲಿದೆ ಅರ್ಜುನ್ ಅಮೃತಾಳ ಜಾತಕ!

TNN Correspondent Posted On July 21, 2017
0


0
Shares
  • Share On Facebook
  • Tweet It

ನಾಯಕಿ ನಾಯಕನ ಬಗ್ಗೆ ಅಪಾರ್ಥ ಮಾಡಿಕೊಳ್ಳುವುದರ ಮೂಲಕ ಸಿನಿಮಾಗೆ ಚಾಲನೆ ಸಿಗುತ್ತದೆ. ಹೀಗೆ ಮೆಲ್ಲನೆ ಸಾಗುವ ಸಿನಿಮಾ ಬೇರೆ ಬೇರೆ ವಿಷಯಗಳನ್ನು ಮೆಲುಕು ಹಾಕುವುದರ ಮೂಲಕ ಪ್ರೇಕಕ್ಷರಲ್ಲಿ ಕುತೂಹಲವನ್ನು ಹೆಚ್ಚು ಮಾಡುತ್ತಾ ಸಾಗುತ್ತದೆ. ಸಿನಿಮಾದಲ್ಲಿ ಕಾಮಿಡಿ, ಬೇಜಾರು, ಖುಷಿ ಎಲ್ಲದರ ಮಿಶ್ರಣವನ್ನು ಸರಿಯಾಗಿ ಒಂದು ಪ್ಯಾಕೇಜ್ ನಲ್ಲಿ ಕೊಡುವುದರ ಮೂಲಕ ಚಿತ್ರದ ನಿರ್ದೇಶಕ ರಘು ಶೆಟ್ಟಿ ಯಶಸ್ವಿಯಾಗಿದ್ದಾರೆ. ಮದುವೆ ಹೇಗೆ ನಡೆಯುತ್ತದೆ? ಯಾರಾ ಮದುವೆ ನಡೆಯುತ್ತದೆ? ಅರ್ಜುನ್ ಅಮೃತಾಳನ್ನು ಮದುವೆ ಆಗುವನೆ ಎಂಬುವ ಕುತೂಹಲವೇ ಚಿತ್ರದ ಕಥಾವಸ್ತು!
ಕೇವಲ ಕಾಮಿಡಿ ಮಾತ್ರವಲ್ಲ ಯಾವುದೇ ಪಾತ್ರವನ್ನು ಸರಿಯಾಗಿ ನಿಭಾಯಿಸಬಲ್ಲೇ ಎಂದು ನಮ್ಮ ತುಳು ಚಿತ್ರ ರಂಗದ ಕುಸುಲ್ದರಸೆ ನವೀನ್ ಡಿ ಪಡೀಲ್ ಏಸ ಚಿತ್ರದ ನಂತರ ಮತ್ತ್ಮೊಮ್ಮೆ ಸಾಬೀತು ಪಡಿಸಿದ್ದಾರೆ.  ಚಿತ್ರದಲ್ಲಿ ಭೋಜ್ ರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಸತೀಶ್ ಬಂದಾಳೆ, ಉಮೇಶ್ ಮಿಜಾರ್ ಅವರ ಕಾಮಿಡಿ ಚೆನ್ನಾಗಿ ಮೂಡಿ ಬಂದಿದ್ದು ನಿಮ್ಮನ್ನು ನಗಿಸುವುದರಲ್ಲಿ ಎರಡು ಮಾತಿಲ್ಲ. ಚಿತ್ರದ ನಾಯಕ ಅನೂಪ್ ಸಾಗರ್ ನಾಯಕಿ ಆರಾಧ್ಯ ಶೆಟ್ಟಿ ಚೆನ್ನಾಗಿ ನಟಿಸಿದ್ದು ತುಳು ಸಿನಿಮಾ ರಂಗದ ಭರವಸೆಯ ಜೋಡಿ ಎಂದು ಭೇಷ್ ಅನ್ನಿಸಿ ಕೊಂಡಿದ್ದಾರೆ.
ಚಿತ್ರದ ಹಾಡುಗಳು ಹಾಗೂ ಅದರ ಚಿತ್ರೀಕರಣ ಬಹಳಷ್ಟು ಸುಂದರವಾಗಿ ಮೂಡಿಬಂದಿದ್ದು ಚಿತ್ರದ ಕ್ಯಾಮರ ತಂಡದ ಕೆಲಸ ಮೆಚ್ಚಲೇ ಬೇಕು. ಚಿತ್ರದಲ್ಲಿ ನಾಯಕನ ಸ್ನೇಹಿತನಾಗಿ ಕಾಣಿಸಿಕೊಳ್ಳುವ ಅನುರಾಗ್ ಬಂಗೇರ ಉತ್ತಮವಾಗಿ ಅಭಿನಯಿಸಿದ್ದು ತಮ್ಮ ಸಿನಿಮಾ ರಂಗದ ಪ್ರಯಾಣದ ಜವಾಬ್ದಾರಿಯನ್ನು ಹೆಚ್ಚಿಸಿಕೊಂಡಿದ್ದಾರೆ.  ನಾಯಕ-ನಾಯಕಿಯ ಹಾಗೂ ಚಿತ್ರದ ಎಲ್ಲ ಕಲಾವಿದರ ಉಡುಪುಗಳ ವೈವಸ್ಥೆ ಹಾಗೂ ಅದರ ಅಂದ-ಚೆಂದವನ್ನು ಡಿಸೈನರ್ ಮಂತ್ರದ ಜೀವನ ಗಟ್ಟಿ ಹೆಚ್ಚಿಸಿಕೊಟ್ಟಿದಾರೆ.
ಒಟ್ಟಿನಲ್ಲಿ ಕಾಮಿಡಿ ಮಾತ್ರವಲ್ಲದೆ ಸಂತೋಷ, ಬೇಜಾರು, ಸಂಭ್ರವನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. ತುಳು ಚಿತ್ರರಂಗದಲ್ಲಿ ಕಾಮಿಡಿ ಮಾತ್ರವಲ್ಲದೆ ಇಂತಹ ಸಿನಿಮಾಗಳು ಹೆಚ್ಚಾಗಿ ಬರಬೇಕು ಎನ್ನುವುದು ಸಿನಿಪ್ರಿಯರ ಅನಿಸಿಕೆ. ಪ್ರೇಕ್ಷಕರ ಪ್ರಕಾರ ಸಿನಿಮಾ ಸ್ವಲ್ಪ ಮಟ್ಟಿಗೆ ನಿಧಾನವಾದರು ಸಿನಿಮಾದಲ್ಲಿ ಹೊಸತನವಿದೆ ಅನ್ನುವ ಮಾತು ಕೇಳಿ ಬರುತ್ತಿದೆ. ಅರ್ಜುನ್-ಅಮೃತಾ ಮದುವೆ ನೋಡಲು ಹೋದವರಿಗೆ ಯಾರಾ ಮದುವೆ ನೋಡಲು ಸಿಗುತ್ತದೆ ಅನ್ನುವುದೇ ಚಿತ್ರದ ಕ್ಲೈಮ್ಯಾಕ್ಸ್! ಅಂತು-ಇಂತು ಇಷ್ಟು ದಿನದಿಂದ ಸಿನಿ ಪ್ರಿಯರಲ್ಲಿ ಕುತೂಹಲ ಮೂಡಿಸಿದ್ದ ಚಿತ್ರ ಇಂದು ತೆರೆ ಕಂಡಿದೆ.
0
Shares
  • Share On Facebook
  • Tweet It




Trending Now
ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
Tulunadu News September 10, 2025
ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
Tulunadu News September 10, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
  • Popular Posts

    • 1
      ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • 2
      ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • 3
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 4
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • 5
      ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!

  • Privacy Policy
  • Contact
© Tulunadu Infomedia.

Press enter/return to begin your search