• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ವಿರೋಧಿಗಳೇ ಎಸ್ಸಿ, ಎಸ್ಟಿಯವರಿಗೆ ಅಮಿತ್ ಶಾ ಎಂತಹ ಭರವಸೆ ನೀಡಿದ್ದಾರೆ ಗೊತ್ತಾ?

TNN Correspondent Posted On June 11, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಎಂದರೆ ಸಾಕು, ಇವರೆಲ್ಲ ಮೇಲ್ವರ್ಗಕ್ಕೆ ಸೇರಿದವರು, ಮೇಲ್ವರ್ಗದ ಪರ ಇರುವವರು, ಎಸ್ಸಿ, ಎಸ್ಟಿ ವಿರೋಧಿಗಳು ಎಂಬ ಮಿಥ್ಯೆ ಇದೆ ಹಾಗೂ ಅದನ್ನು ವ್ಯವಸ್ಥಿತವಾಗಿ ಕೆಲವರು ಸಾರಿಕೊಂಡು ಬರುತ್ತಿದ್ದಾರೆ.

ಆದರೆ ನರೇಂದ್ರ ಮೋದಿ ಅವರು ಮಾತ್ರ ಎಂದಿಗೂ ಜಾತಿ, ಧರ್ಮ, ಮತ ನೋಡದೆ ಎಲ್ಲರ ಏಳಿಗಾಗಿ ಹಗಲು, ರಾತ್ರಿ ಶ್ರಮಿಸುತ್ತಿದ್ದಾರೆ. ಅದು ಒಬ್ಬ ನಾಯಕನಿಗೆ ಇರಬೇಕಾದ, ಅದರಲ್ಲೂ ಭಾರತದಂತಹ ಜಾತ್ಯತೀತ ರಾಷ್ಟ್ರದಲ್ಲಿ ಒಬ್ಬ ಪ್ರಧಾನಿಗೆ ಇರಬೇಕಾದಂತಹ ಪ್ರಮುಖ ಗುಣವಾಗಿದೆ.

ಇತ್ತೀಚೆಗೆ ಎಸ್ಸಿ, ಎಸ್ಟಿ ಸಮುದಾಯದ ದೌರ್ಜನ್ಯ ವಿರೋಧ ಕಾಯಿದೆ ಜಾರಿ ಮಾಡಲು ಹೊರಟಾಗ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಮೋದಿ ಅವರು ಎಸ್ಸಿ, ಎಸ್ಟಿ ಕಾಯಿದೆ ದೌರ್ಬಲ್ಯಗೊಳಿಸುತ್ತಾರೆ ಎಂದೇ ಕೆಲವರು ಗುಲ್ಲೆಬ್ಬಿಸಿದ್ದರು. ಆದರೆ ಕೊನೆಗೆ ಕಾಯಿದೆ ಜಾರಿಗೆ ಸುಪ್ರೀಂ ಕೋರ್ಟೇ ಒಪ್ಪಿಗೆ ಸೂಚಿಸಿದಾಗ ಎಸ್ಸಿ, ಎಸ್ಟಿ ಸಮುದಾಯದವರು ಮೋದಿ ಕುರಿತು ನಂಬಲು ಶುರು ಮಾಡಿದರು.

ಇಂತಹ ನರೇಂದ್ರ ಮೋದಿ ಸರ್ಕಾರದ ಕುರಿತು ಅಮಿತ್ ಶಾ ಅವರು ಮಾತನಾಡಿದ್ದು, ಬಿಜೆಪಿ ಅಧಿಕಾರದಲ್ಲಿ ಇರುವವರೆಗೂ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯಿದೆ ಹಾಗೂ ಮೀಸಲಾತಿಗೆ ಯಾವುದೇ ಧಕ್ಕೆಯಾಗುವುದಿಲ್ಲ. ದೇಶದಲ್ಲಿರುವ ಎಸ್ಸಿ, ಎಸ್ಟಿ ಸಮುದಾಯ ಈ ಕುರಿತು ಚಿಂತೆ ಮಾಡುವ ಅವಶ್ಯಕತೆಯೇ ಇಲ್ಲ ಎಂದು ಭರವಸೆ ನೀಡಿದ್ದಾರೆ. ಆ ಮೂಲಕ ಕೆಲವರು ಹಬ್ಬಿಸಿದ್ದ ಗಾಳಿ ಸುದ್ದಿಗೆ ಮಂಗಳ ಹಾಡಿದ್ದಾರೆ.

2019ರ ಚುನಾವಣೆ ಸಮೀಪಿಸುತ್ತಿರುವುದರಿಂದ ಕಾಂಗ್ರೆಸ್ ಸುಖಾಸುಮ್ಮನೆ ಗಾಳಿ ಸುದ್ದಿ ಹಬ್ಬಿಸುತ್ತಿದೆ. ಎಸ್ಸಿ, ಎಸ್ಟಿ ಕಾಯಿದೆ ದುರ್ಬಲಗೊಳಿಸುವುದು, ಮೀಸಲಾತಿ ರದ್ದುಗೊಳಿಸುವ ಕುರಿತು ಬಿಜೆಪಿ ನಿಲುವು ಹೊಂದಿದೆ ಎಂದು ಜನರನ್ನು ದಾರಿತಪ್ಪಿಸಲು ಕಾಂಗ್ರೆಸ್ ಮುಂದಾಗಿದೆ. ಆದರೆ ದೇಶದ ಎಸ್ಸಿ, ಎಸ್ಟಿ ಸಮುದಾಯದವರು ಒಂದು ನೆನಪಿಟ್ಟುಕೊಳ್ಳಿ, ಬಿಜೆಪಿ ಅಧಿಕಾರದಲ್ಲಿ ಇರುವವರೆಗೂ ಎಸ್ಸಿ, ಎಸ್ಟಿ ಕಾಯಿದೆ ಹಾಗೂ ಮೀಸಲಾತಿಗೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಘೋಷಿಸಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search