• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತದ ವಿರುದ್ಧ ಪಾಕ್ ಸೈನ್ಯದ ಮಾರ್ಗದರ್ಶನದಲ್ಲೇ ಉಗ್ರ ಸಂಘಟನೆಗಳಾದ ಎಲ್ ಇಟಿ, ಜೆಇಎಂ, ಹಿಜ್ಬುಲ್ ಜಂಟಿ ತರಬೇತಿ?

TNN Correspondent Posted On June 11, 2018


  • Share On Facebook
  • Tweet It

ದೆಹಲಿ: ಭಯೋತ್ಪಾದಕ ತವರು ರಾಷ್ಟ್ರ, ಭಾರತದ ವಿರುದ್ಧ ಸದಾ ಹಲ್ಲು ಮಸೆಯುತ್ತಾ ಉಗ್ರನ್ನು ಸಾಕುತ್ತಿರುವ ಪಾಕಿಸ್ತಾನ ನಿರಂತರವಾಗಿ ಹೊಸ ಹೊಸ ಕುತಂತ್ರಗಳನ್ನು ಮಾಡುತ್ತಿದೆ. ಹೇಗಾದರೂ ಮಾಡಿ ಭಾರತವನ್ನು ಹಣಿಯಲೇ ಬೇಕು ಎಂದು ನಿರ್ಧರಿಸಿರುವ ಪಾಕಿಸ್ತಾನ ಸರ್ಕಾರ ಹಾವು ಮುಂಗೂಸಿಯಂತೆ ತಮ್ಮ ತಮ್ಮ ವೈಮನಸ್ಸಿನಿಂದ ಹೊಡೆದಾಡುತ್ತಿದ್ದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್ ಇ ತಯ್ಯಬ್ಬಾ, ಜೈಷ್ ಇ ಮಹ್ಹಮದ್ಮ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ನ ಉಗ್ರರಿಗೆ ಪಾಕಿಸ್ತಾನದ ಸೈನ್ಯದ ಮಾರ್ಗದರ್ಶನದಲ್ಲೇ ತರಬೇತಿ ನೀಡಲಾಗುತ್ತಿದೆ ಎಂದು ರಾಷ್ಟ್ರೀಯ ತನಿಖಾ ದಳದ ವಶದಲ್ಲಿರುವ ಉಗ್ರ ಆಶಿಕ್ ಬಾಬಾ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.

ಜೈಷ್ ಇ ಮಹಮ್ಮದ್, ಲಷ್ಕರ್ ಈ ತಯ್ಯಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿ ಮೂರು ಉಗ್ರ ಸಂಘಟನೆಗಳು ಪಾಕಿಸ್ತಾನದ ಸೈನ್ಯದ ಮಾರ್ಗರ್ದಶನದಲ್ಲೇ ಕಾರ್ಯ ನಿರ್ವಹಿಸುತ್ತಿವೆ. ಅಲ್ಲದೇ ಈ ಮೂರು ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ಸಹ ಸಾಥ್ ನೀಡುತ್ತಿದೆ ಎಂದು ವಿಚಾರಣೆ ವೇಳೆ ಆಶಿಕ್ ಬಾಬಾ ಹೇಳಿದ್ದಾನೆ.

ಭಾರತದಲ್ಲಿ ಉಗ್ರರ ಪ್ರತಿನಿಧಿಯಾಗಿ ಉಗ್ರ ಅಬ್ದುಲ್ಲಾ ಎಂಬಾತನನ್ನು ನೇಮಕ ಮಾಡಿದ್ದು, ಆತನ ನೇತೃತ್ವದಲ್ಲೇ ಭಾರತ ವಿರೋಧಿ ಚಟುವಟಿಕೆಗಳಿಗಾಗಿ ನೇಮಿಸಲಾಗಿದೆ. ಆತ ಭಾರತದ ಗಡಿಯಲ್ಲಿ ತನ್ನ ದುಷ್ಕೃತ್ಯ ನಡೆಸಲು ಸಿದ್ಧತೆ ನಡೆಸುತ್ತಿದ್ದಾನೆ ಎಂದು ಆಶಿಕ್ ತಿಳಿಸಿದ್ದಾನೆ.

ಎಂಟು ಸೈನಿಕರನ್ನು ಬಲಿ ಪಡೆದುಕೊಂಡಿದ್ದ 2017ರ ಪುಲ್ವಾಮಾ ಪೊಲೀಸ್ ಡೇರೆಯ ಮೇಲೆ ದಾಳಿಯ ಮಾಸ್ಟರ್ ಮೈಂಡ್ ಜೈಷ್ ಎ ಮಹಮ್ಮದ್ ಸಂಘಟನೆಯ ಮುಫ್ತಿ ವಕ್ಕಾಸ್ ಎಂಬುದನ್ನು ರಾಷ್ಟ್ರಿಯ ತನಿಖಾ ದಳದ ಎದುರು ಬಾಯಿ ಬಿಟ್ಟಿದ್ದಾನೆ ಎಂದು ಟೈಮ್ಸ್ ಆಫ್ ಇಂಡಿ ವರದಿ ಮಾಡಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search