• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಕ್ರಮವಾಗಿ ಮಸೀದಿ, ಮದರಸಾ ನಿರ್ವಹಣೆ, ಉತ್ತರ ಪ್ರದೇಶದಲ್ಲಿ ಕಟ್ಟಡ ಜಪ್ತಿ ಮಾಡಿದ ಜಿಲ್ಲಾಡಳಿತ!

TNN Correspondent Posted On June 12, 2018
0


0
Shares
  • Share On Facebook
  • Tweet It

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮಸೀದಿಗಳು ಹಾಗೂ ಅಕ್ರಮ ಕಸಾಯಿಗಳಿಗೆ ಬೀಗ ಹಾಕಿಸುವ ಮೂಲಕ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದರು, ಅಲ್ಲದೆ ಮಸೀದಿಗಳಲ್ಲಿ ಬರೀ ಧರ್ಮಬೋಧನೆ ಬದಲಿಗೆ ಎನ್ಸಿಇಆರ್ಟಿ ಪಠ್ಯ ಬೋಧಿಸುವಂತೆ ಆದೇಶಿಸಿ ಮುಸ್ಲಿಮರ ಶೈಕ್ಷಣಿಕ ಏಳಿಗೆಗೆ ಕಾರಣರಾಗಿದ್ದರು.

ಆದರೂ ಕೆಲವೆಡೆ ಅಕ್ರಮವಾಗಿ ಮದರಸಾಗಳನ್ನು ನಿರ್ವಹಣೆ ಮಾಡಲಾಗುತ್ತಿದೆ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಜಿಲ್ಲಾಡಳಿತ ಸಿದ್ಧಾರ್ಥ ನಗರದ ಕಟ್ಟಡವೊಂದರಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದೆ ಎನ್ನಲಾದ ಮದರಸಾ/ಮಸೀದಿಗೆ ಬೀಗ ಜಡಿದಿದ್ದಾರೆ.

ಸಿದ್ಧಾರ್ಥ ನಗರದ ಕಟ್ಟಡವೊಂದರಲ್ಲಿ ವಸತಿಗಾಗಿ ಸರ್ಕಾರದಿಂದ ಅನುಮತಿ ಪಡೆದು ಈಗ ಅಕ್ರಮವಾಗಿ ಮಸೀದಿ ಹಾಗೂ ಮದರಸಾ ನಡೆಸಲಾಗುತ್ತಿದೆ. ನೆಲಮಹಡಿಯಲ್ಲಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಕಪಿಲವಸ್ತು ಬಿಜೆಪಿ ಶಾಸಕ ಶ್ಯಾಮ್ ಧಣಿ ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟಡ ಪರಿಶೀಲಿಸಿದ್ದು, ಈಗ ಬೀಗ ಜಡಿದಿದ್ದಾರೆ. ಅಲ್ಲದೆ ಈ ಕುರಿತು ಪ್ರಕರಣ ಸಹ ದಾಖಲಾದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕ ಹಸ್ಮುಲ್ಲಾ ಹಾಗೂ ಆತನ ಮೊಮ್ಮಕ್ಕಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಮಾಲೀಕ ಹಸ್ಮುಲ್ಲಾ, ಆತನ ಮೊಮ್ಮಕ್ಕಳಾದ ಸೈಫುದ್ದೀನ್ ಹಾಗೂ ಕಮ್ರುದ್ದೀನ್ ಎಂಬುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಾಯಿದೆಯ ಸೆಕ್ಷನ್ 295 ಹಾಗೂ 295 ಎ ಅನ್ವಯ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಆದಾಗ್ಯೂ ಕಟ್ಟಡದ ಮಾಲೀಕ ಈ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಸಾರ್ವಜನಿಕರಿಗಾಗಿ ಮಸೀದಿ ನಡೆಸಲಾಗುತ್ತಿದೆ. ಮದರಸಾ ನಡೆಸುವ ಕುರಿತು ಉತ್ತರ ಪ್ರದೇಶ ಮದರಸಾ ಬೊರ್ಡ್ ನಿಂದ ಅನುಮತಿ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಆದರೆ ಸರಿಯಾದ ದಾಖಲೆ ಸಿಗದ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಚಿತ್ರಕೃಪೆ-ಅಂತರ್ಜಾಲ

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search