• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಿಎಂ ಕುಮಾರಸ್ವಾಮಿಗೆ ಪ್ರಧಾನಿ ಮೋದಿ ಫಿಟ್ನೆಸ್ ಸವಾಲು

TNN Correspondent Posted On June 13, 2018


  • Share On Facebook
  • Tweet It

ದೆಹಲಿ: ಸದಾ ಕುತೂಹಲಕಾರಿ ನಡೆಗಳನ್ನು ಇಡುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಇದೀಗ ಮತ್ತೊಮ್ಮೆ ವಿರೋಧ ಪಕ್ಷಗಳೇ ನಿಬ್ಬೆರಗಾಗುವಂತ ನಡೆಯನ್ನು ಅನುಸರಿಸಿದ್ದಾರೆ. ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋರ್ ಆರಂಭಿಸಿದ್ದ ‘ಹಮ್ ಫಿಟ್ ತೋ ಇಂಡಿಯಾ ಫಿಟ್’ ಚಾಲೇಂಜ್ ಅಭಿಯಾನ ಪ್ರಧಾನಿ ಮೋದಿ ಅವರನ್ನು ತಲುಪಿದೆ. ಕ್ರಿಕೆಟಿಗ ವಿರಾಟ್ ಕೋಹ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದ ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿದ್ದು, ತಾವು ವ್ಯಾಯಾಮ ಮಾಡುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

Here are moments from my morning exercises. Apart from Yoga, I walk on a track inspired by the Panchtatvas or 5 elements of nature – Prithvi, Jal, Agni, Vayu, Aakash. This is extremely refreshing and rejuvenating. I also practice
breathing exercises. #HumFitTohIndiaFit pic.twitter.com/km3345GuV2

— Narendra Modi (@narendramodi) June 13, 2018

ಅಚ್ಚರಿದಾಯಕ ಬೆಳವಣಿಗೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಫಿಟ್ನೆಸ್ ಚಾಲೆಂಜ್ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಈ ಟ್ವೀಟ್ ರಾಷ್ಟ್ರರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಮೋದಿಯ ಹೊಸ ನಡೆಯ ಬಗ್ಗೆ ಗೌಪ್ಯ ಚರ್ಚೆಗಳು ಆರಂಭವಾಗಿವೆ.

ಭಾರತದ ತಂಡದ ಕ್ರಿಕೆಟಿಗ ವಿರಾಟ್ ಕೋಹ್ಲಿಯವರ ಚಾಲೆಂಜ್ ಸ್ವೀಕರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಾವು ವ್ಯಾಯಾಮ ಮಾಡುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಅಲ್ಲದೇ ಕರ್ನಾಟಕ ಸಿಎಂ ಮತ್ತು ಅಂತಾರಾಷ್ಟ್ರೀಯ ಟೆಬಲ್ ಟೆನ್ನಿಸ್ ಆಟಗಾ  ಮಾನಿಕ್ ಬಾತ್ರಾ ಅವರಿಗೆ ಸವಾಲು ಹಾಕಿದ್ದಾರೆ.

I am delighted to nominate the following for the #FitnessChallenge:

Karnataka’s CM Shri @hd_kumaraswamy.

India’s pride and among the highest medal winners for India in the 2018 CWG, @manikabatra_TT.

The entire fraternity of brave IPS officers, especially those above 40.

— Narendra Modi (@narendramodi) June 13, 2018

ಮೋದಿ ಫಿಟ್ನೆಸ್ ಗುಟ್ಟು ಬಯಲು, ಮಾದರಿಯಾದ ನಮೋ ನಡೆ

ನಿರಂತರ ಪ್ರಯಾಣ, ಬಿಡುವಿಲ್ಲದ ಕಾರ್ಯಕ್ರಮಗಳ ಮಧ್ಯೆ ಸದಾ ಚಟುವಟಿಕೆಯಿಂದ ಇರುವ ಪ್ರಧಾನಿ ನರೇಂದ್ರ ಮೋದಿ ಅವರ ಫಿಟ್ನೆಸ್ ನ ಹಿಂದೆ ಇರುವ ಕೆಲವು ಅಂಶಗಳು ಇದೀಗ ಅವರು ಟ್ವೀಟ್ ಮಾಡಿರುವ ವಿಡಿಯೋ ಮೂಲಕ ಬಯಲಾಗಿವೆ. ನಿಸರ್ಗದ ಪಂಚತತ್ವಗಳನ್ನು ಅಳವಡಿಸಿಕೊಳ್ಳಲಾಗಿದೆ. ಪೃಥ್ವಿ, ಅಗ್ನಿ, ಜಲ, ವಾಯು, ಆಕಾಶ ಎಂಬ ಪಂಚತತ್ವಗಳು ನಮ್ಮನ್ನು ಕಾಯುತ್ತವೇ ಎಂಬ ಸಂದೇಶವನ್ನು ಮೋದಿ ಜನರಿಗೆ ನೀಡಿದ್ದಾರೆ. ಅಲ್ಲದೇ ಯೋಗ, ವ್ಯಾಯಾಮ ಧ್ಯಾನ, ಪ್ರಾಣಾಯಾಮಗಳ ಮಹತ್ವವನ್ನು ಒಂದೇ ವಿಡಿಯೋದಲ್ಲಿ ಮನದಟ್ಟಾಗುವಂತೆ ಸಾರಿ ಹೇಳಿದ್ದಾರೆ, ಈ ಮೂಲಕ ದೇಶವಾಸಿಗಳಿಗೆ ಫಿಟ್ನೆಸ್ ನ ಮಹತ್ವ ಸಾರಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search