• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಇಫ್ತಾರ್ ಕೂಟವನ್ನು ಕಪಟತನದ ಪರಮಾವಧಿ ಎಂದು ಯಾರು ವಿಶ್ಲೇಷಿಸಿದ್ದಾರೆ ಗೊತ್ತಾ?

TNN Correspondent Posted On June 15, 2018
0


0
Shares
  • Share On Facebook
  • Tweet It

ಹೈದರಾಬಾದ್: ಕಾಂಗ್ರೆಸ್ ಇತ್ತೀಚೆಗೆ ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಆಯೋಜಿಸಿತ್ತು. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಸಹ ಆಯೋಜಿಸಿದ್ದರು. ಕೆಲವರು ಇದು ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್ ಪ್ರತಿವರ್ಷ ಮಾಡುವ ನಾಟಕ ಎಂಬೆಲ್ಲ ಟೀಕೆಗಳು ವ್ಯಕ್ತವಾಗಿದ್ದವು. ಜನರೂ ಇದೆಲ್ಲ ಸಾಮಾನ್ಯ ಎಂದು ಸುಮ್ಮನಾಗಿದ್ದರು.

ಆದರೆ ಕಾಂಗ್ರೆಸ್ ಆಯೋಜಿಸಿರುವ ಇಫ್ತಾರ್ ಕೂಟವನ್ನು ಮುಸ್ಲಿಂ ನಾಯಕರೇ ಟೀಕಿಸಿದ್ದು, ಕಾಂಗ್ರೆಸ್ ಇಫ್ತಾರ್ ಕೂಟ ಆಯೋಜಿಸಿದ್ದು ಕಪಟತನದ ಪರಮಾವಧಿ ಎಂದು ಎಐಎಂಐಎಂ ಮುಖ್ಯಸ್ಥ, ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ವಿಶ್ಲೇಷಿಸಿದ್ದಾರೆ.

ಕಾಂಗ್ರೆಸ್ಸಿಗೆ ಮುಸ್ಲಿಮರ ಏಳಿಗೆ ಬೇಕಾಗಿರಲಿಲ್ಲ. ಈ ಇಫ್ತಾರ್ ಕೂಟ ಆಯೋಜಿಸಿರುವುದು ಕಪಟತನದಿಂದ ಕೂಡಿದೆ. ಆಯಾ ಧರ್ಮದ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಹೀಗೆ ಮಾಡಿದೆ. ಹಿಂದೂಗಳು ಹಾಗೂ ಮುಸ್ಲಿಮರು ಸೇರಿ ಯಾವುದೇ ಧರ್ಮೀಯರ ಮತ ಸೆಳೆಯಲು ಇಂತಹ ಧಾರ್ಮಿಕ ಕಾರ್ಯಕ್ರಮ ಆಯೋಜಿಸುತ್ತದೆ ಎಂದು ಓವೈಸಿ ಟೀಕಿಸಿದ್ದಾರೆ.

ಅದರಲ್ಲೂ ಇತ್ತೀಚೆಗಷ್ಟೇ ಪ್ರಣಬ್ ಮುಖರ್ಜಿಯವರು ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆ ಮೂಲಕ ಅವರು ಹಿಂದೂಗಳು ಪರ ಎಂಬ ಸಂದೇಶ ಬಿಂಬಿತವಾಗಿತ್ತು. ಆದರೆ ಇದು ಎಲ್ಲಿ ಮುಸ್ಲಿಮರ ಮುನಿಸಿಗೆ ಕಾರಣವಾಗುತ್ತೋ ಎಂಬ ಕಾರಣದಿಂದ ಪ್ರಣಬ್ ಮುಖರ್ಜಿಯವರನ್ನು ಇಫ್ತಾರ್ ಕೂಟಕ್ಕೆ ಆಹ್ವಾನಿಸಿ, ರಾಹುಲ್ ಗಾಂಧಿ ಪಕ್ಕದಲ್ಲೇ ಕೂರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಹೀಗೆ ಇಫ್ತಾರ್ ಕೂಟಕ್ಕೆ ಪ್ರಣಬ್ ಮುಖರ್ಜಿಯವರನ್ನು ಆಹ್ವಾನಿಸುವ ಮೂಲಕ ಕಾಂಗ್ರೆಸ್ ಮತಗಳಿಗಾಗಿ ಸಮತೋಲನ ಕಾಯ್ದುಕೊಳ್ಳಲು ಪ್ರಯತ್ನಿಸಿದೆ. ಇದರಿಂದಲೇ ಕಾಂಗ್ರೆಸ್ ಎಂತಹ ಕಪಟಿ ಎಂದು ಗೊತ್ತಾಗುತ್ತದೆ ಎಂದು ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search