• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜೆಎನ್ ಯು ನಲ್ಲಿ ಉಪನ್ಯಾಸ ಏರ್ಪಡಿಸಿ, ನಕ್ಸಲರನ್ನು ಸೃಷ್ಟಿಸಲು ಭೀಮಾಕೋರೆಗಾಂವ್ ಗಲಭೆ ಆರೋಪಿಗಳ ಪ್ಲಾನ್

TNN Correspondent Posted On June 15, 2018


  • Share On Facebook
  • Tweet It

ಪುಣೆ: ಮಹಾರಾಷ್ಟ್ರದಲ್ಲಿ ನಡೆದ ಭೀಮಾಕೋರೆಗಾಂವ್ ಗಲಭೆ ಆರೋಪಿಗಳಿಂದ ದೇಶಕ್ಕೆ ಮಾರಕವಾಗುವಂತ ಆಘಾತಕಾರಿ ವಿಷಯಗಳು ಹೊರ ಹೊಮ್ಮುತ್ತಿದ್ದು, ವಿಚಾರಣೆಯಲ್ಲಿ ಇಡೀ ಗಲಭೆಯ ಹಿಂದಿನ ವ್ಯವಸ್ಥಿತ ಸಂಚು ಬಯಲಾಗುತ್ತಿದೆ. ಇದೀಗ ಗಲಭೆ ಆರೋಪದಲ್ಲಿ ಬಂಧಿಸಲಾಗಿರುವ ವ್ಯಕ್ತಿಗಳೇ ಆಘಾತಕಾರಿ ವಿಷಯವೊಂದನ್ನು ಹೊರ ಹಾಕಿದ್ದು, ದೆಹಲಿಯ ಪ್ರತಿಷ್ಟಿತ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕಗಳನ್ನು ಏರ್ಪಡಿಸಿ, ಯುವ ವಿದ್ಯಾರ್ಥಿಗಳನ್ನು ತಮ್ಮ ಕಾರ್ಯಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಪ್ರೇರಣೆ ನೀಡಲು ಸಂಚು ರೂಪಿಸಿದ್ದರು ಎಂದು ತಿಳಿಸಿದ್ದಾರೆ ಎಂದು ಪುಣೆ ಪೊಲೀಸರು ಹೇಳಿದ್ದಾರೆ.

ಗುರುವಾರ ನಾಲ್ವರು ಆರೋಪಿಗಳಾದ ಸುಧೀರ್ ದಾವಲೆ, ಮಹೇಶ್ ರೌತ್, ಶೋಮಾ ಸೇನ್, ರೋನಾ ವಿಲ್ಸನ್ ರನ್ನು ಕೋರ್ಟ್ ಗೆ ಹಾಜರು ಪಡಿಸಿದ್ದು, ಈ ವೇಳೆ ‘ಮೃತ ನಕ್ಸಲರ ಸ್ಮರಣೆ’ (ಪೊಲೀಸರಿಂದ ಹತರಾದ ನಕ್ಸಲರ) ಹೆಸರಲ್ಲಿ ದೆಹಲಿಯ ಜವಾಹರ್ ಲಾಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸವನ್ನು ಏರ್ಪಡಿಸಿ, ವಿದ್ಯಾರ್ಥಿಗಳನ್ನು ನಕ್ಸಲ ಚಟುವಟಿಕೆಗೆ ತಳ್ಳುವ ಷಡ್ಯಂತ್ರ ನಡೆಸಲು ಯೋಜನೆ ರೂಪಿಸಿದ್ದರು ಎಂಬ ಮಾಹಿತಿ ಹೊರ ಹಾಕಿದ್ದಾರೆ. ಜೆಎನ್ ಯು ವಿದ್ಯಾರ್ಥಿಗಳನ್ನು  ನಿಷೇಧಿತ ನಕ್ಸಲರ ‘ಸಿಪಿಐ (ಮಾವೋಇಸ್ಟ್) ಬಂಡಾಯಕಾರರ’ ಸಂಘಟನೆಗೆ ಸೇರಿಸುವ ಉದ್ದೇಶ ಇದರ ಹಿಂದೆ ಹೊಂದಲಾಗಿತ್ತು ಎನ್ನಲಾಗಿದೆ.

ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಯಬೇಕು. ಇಂತಹ ಪ್ರಯತ್ನಗಳು ಭಾರತದ ರಕ್ಷಣಾ ವ್ಯವಸ್ಥೆಗೆ ಆಘಾತಕಾರಿಯಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.

ಪಬ್ಲಿಕ್ ಪ್ರಾಸಿಕೂಟರ್ ಉಜ್ವಲ್ ಪವಾರ್ ಈ ಕುರಿತು ಮಾಹಿತಿ ನೀಡಿದ್ದು ‘ಪೊಲೀಸ್ ಎನ್ ಕೌಂಟರ್ ನಲ್ಲಿ ಮೃತಪಟ್ಟಿರುವ ನಕ್ಸಲ್  ನವೀನ್ ಬಾಬು ಸ್ಮರಣೆಯಲ್ಲಿ ಉಪನ್ಯಾಸ ಏರ್ಪಡಿಸಿ, ನಕ್ಸಲರ ಮಾರ್ಗದರ್ಶನಂತೆ ವಿದ್ಯಾರ್ಥಿಗಳನ್ನು ಪ್ರಚೋದನೆಗೆ ಒಳಪಡಿಸಿ, ದೇಶವಿರೋಧಿ ಚಟುವಟಿಕೆಗಳಿಗೆ ಭಾಗಿಯಾಗುವಂತೆ ಮಾಡುವ ಹುನ್ನಾರ ಹೊಂದಿದ್ದರು ಎಂದು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search