• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಮೆರಿಕ ಡ್ರೋನ್ ದಾಳಿಗೆ ತಾಲೀಬಾನ್‌ ಮುಖ್ಯಸ್ಥ ಮುಲ್ಲಾ ಫಸ್ಲುಲ್ಲಾ ಬಲಿ

TNN Correspondent Posted On June 15, 2018


  • Share On Facebook
  • Tweet It

ದೆಹಲಿ: ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದಕ ಸಂಘಟನೆ ತಾಲಿಬಾನ್ನ ಮುಖ್ಯಸ್ಥ ಮುಲ್ಲಾಫಸ್ಲುಲ್ಲಾ ಅಮೆರಿಕದ ಡ್ರೋನ್ ದಾಳಿಗೆ ಬಲಿಯಾಗಿರುವ ಶುಭ ಸುದ್ದಿಯೊಂದು ಅಮೆರಿಕಾದ ಸೇನಾಪಡೆ ನೀಡಿದೆ. ಅಮೆರಿಕಾದ ಸೈನ್ಯ ಅಫಘಾನಿಸ್ತಾನದಲ್ಲಿ ಗುರುವಾರ ನಡೆಸಿದ ಡ್ರೋನ್ ದಾಳಿಯಲ್ಲಿ ಮುಲ್ಲಾ ಫಸ್ಲುಲ್ಲಾ ಖಲ್ಲಾಸ್ ಆಗಿರುವ ಸುದ್ದಿಯನ್ನು ಅಮೆರಿಕ ಬಹಿರಂಗಪಡಿಸಿದೆ. ಈ ಮೂಲಕ ವಿಶ್ವಶಾಂತಿಕೆ ಕಂಟಕವಾಗಿರುವ ಮಹತ್ವದ ಭಯೋತ್ಪಾದಕ ಸಂಘಟನೆಯ ಮುಖಂಡನೊಬ್ಬನನ್ನು ಹತ್ಯೆ ಮಾಡಿರುವ ಶ್ರೇಯಸ್ಸು ಅಮೆರಿಕ ಪಡೆದಿದೆ.

ಅಮೆರಿಕದ ಸೈನ್ಯ ನಡೆಸಿದ ಭಯೋತ್ಪಾದನ ನಿಗ್ರಹ ದಾಳಿಯಲ್ಲಿ, ತಹ್ರಿಕ್‌ -ಇ-ತಾಲಿಬಾನ್‌ ಪಾಕಿಸ್ತಾನ್‌ (ಟಿಟಿಪಿ) ಮುಖ್ಯಸ್ಥ ಫಸ್ಲುಲ್ಲ ಹಾಗೂ ಆತನ ಸಹಚರರು ಹತರಾಗಿದ್ದಾರೆ ಎಂಬ ಮಾಹಿತಿ ಅಮೆರಿಕ ಸೇನಾಪಡೆ ಅಧಿಕೃತವಾಗಿ ಹೊರಹಾಕಿದೆ.

ಅಫಘಾನಿಸ್ತಾನದ ಕುನ್ನಾರ್‌ ಪ್ರಾಂತ್ಯದಲ್ಲಿ ಭಯೋತ್ಪಾದನಾ ಸಂಘಟನೆಗಳ ಮುಖ್ಯಸ್ಥರನ್ನು ಗುರಿಯಾಗಿಸಿಕೊಂಡು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮುಲ್ಲಾಫಸ್ಲುಲ್ಲಾ ಖಾನ್ ಹತರಾಗಿದ್ದಾರೆ ಎಂದು ಅಫಘಾನಿಸ್ತಾನದಲ್ಲಿರುವ ಅಮೆರಿಕದ ಲೆಫ್ಟಿನೆಂಟ್‌ ಕ.ಮಾರ್ಟಿನ್ ಮೆಕ್‌ಡೊನೆಲ್‌ ತಿಳಿಸಿದ್ದಾರೆ.

2014ರಲ್ಲಿ ತಾಲಿಬಾನ್ ಸಂಘಟನೆಯ ಮುಲ್ಲಾಫಸ್ಲುಲ್ಲಾ ಪಾಕಿಸ್ತಾನದಲ್ಲಿನ ಸೈನಿಕ ಶಾಲೆ ಮೇಲೆ ದಾಳಿ ನಡೆಸಿ,130 ಮಕ್ಕಳನ್ನು ಬಲಿಪಡೆದುಕೊಂಡಿದ್ದ ಮತ್ತು 2012ರಲ್ಲಿ ನೋಬೆಲ್‌ ಪ್ರಶಸ್ತಿ ವಿಜೇತೆ ಮಲಾಲ ಯುಸಫ್‌ ಝಾಯಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಎಂಬ ಮಾಹಿತಿ ತಿಳಿದು ಬಂದಿದೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search