• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಂಜಾನ್ ನಿಮಿತ್ತ ಸ್ಥಗಿತವಾಗಿದ್ದ ಕಾರ್ಯಾಚರಣೆ ಆರಂಭ, ಕಾಶ್ಮೀರದಲ್ಲಿ ಅಸಲಿ ಆಟ ‘ಆಪರೇಷನ್ ಆಲ್ ಔಟ್’ ಶುರು?

TNN Correspondent Posted On June 17, 2018


  • Share On Facebook
  • Tweet It

ದೆಹಲಿ: ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ನಿಮಿತ್ತ ಕಾಶ್ಮೀರದಲ್ಲಿ ಭಾರತೀಯ ಸೇನೆ ಕೈಗೊಳ್ಳುತ್ತಿದ್ದ ಕಾರ್ಯಾಚರಣೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿತ್ತು. ಮುಸ್ಲಿಮರು ನೆಮ್ಮದಿಯಿಂದ ಹಬ್ಬ ಆಚರಿಸಲು ಅವಕಾಶ ನೀಡಿತ್ತು. ಆದರೆ ಕಿಡಿಗೇಡಿ ಪಾಕಿ ಭಯೋತ್ಪಾದಕರು, ಸೈನಿಕರು ಭಾರತದ ನಿರ್ಧಾರವನ್ನೆ ದೌರ್ಬಲ್ಯವೆಂದು ತಿಳಿದು ದಾಳಿ ಮಾಡಿ, ಭಾರತೀಯ ಸೇನೆಯಿಂದ ಸರಿಯಾದ ಏಟನ್ನು ತಿಂದಿದ್ದಾರೆ.

ಇದೀಗ ರಂಜಾನ್ ಮಾಸ ಮುಕ್ತಾಯವಾಗಿದ್ದು ಕೇಂದ್ರ ಸರ್ಕಾರ ರಂಜಾನ್ ನಿಮಿತ್ತ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಹೇರಿದ್ದ ಸೇನಾ ಕಾರ್ಯಾಚರಣೆ ಸ್ಥಗಿತದ ನಿರ್ಧಾರವನ್ನು ಹಿಂಪಡೆದಿದೆ. ಅಲ್ಲದೇ ಕಣಿವೆಯಲ್ಲಿ ಭಯೋತ್ಪಾದಕರ, ಪ್ರತ್ಯೇಕವಾದಿಗಳ, ಪಾಕಿ ಉಗ್ರ ಸೈನಿಕರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಕೇವಲ ಒಂದು ತಿಂಗಳು ಸೇನೆ ಕಾರ್ಯಾಚರಣೆ ಸ್ಥಗಿತಗೊಳಿಸಿದಕ್ಕೆ ಆಟಾಟೋಪ ನಡೆಸಿದವರ ವಿರುದ್ಧ ಇದೀಗ ರಕ್ಷಣಾ ಪಡೆಗಳು ತಿರುಗಿ ಬೀಳಲಿದ್ದು, ಆಪರೇಷನ್ ಆಲ್ ಔಟ್ ಆರಂಭಿಸುವ ಚಿಂತನೆ ಕೇಂದ್ರ ಸರ್ಕಾರ ನಡೆಸಿದೆ ಎನ್ನಲಾಗಿದೆ.

ಸೈನಿಕ ಕಾರ್ಯಾಚರಣೆ ಆರಂಭಿಸುವ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದು, ಕಣಿವೆಯನ್ನು ಭಯೋತ್ಪಾದಕ ಮುಕ್ತ ಮಾಡಲು ಸೈನಿಕ ಕಾರ್ಯಾಚರಣೆ ಆರಂಭಿಸಲಾಗುತ್ತಿದೆ. ಕೇಂದ್ರ ಸರ್ಕಾರ ಎಲ್ಲರಿಗೂ ನೆಮ್ಮದಿಯ ಜೀವನ ನೀಡಲು ಭಯಸುತ್ತಿದ್ದು, ಭಾರತದ ಸೌರ್ವಭೌಮತ್ವವನ್ನು ರಕ್ಷಿಸಲು ಸೈನ್ಯಕ್ಕೆ ಕಾರ್ಯಾಚರಣೆ ನಡೆಸಲು ಅಧಿಕಾರ ನೀಡಲಾಗುತ್ತಿದೆ. ಕಾಶ್ಮೀರದಲ್ಲಿ ಭಯೋತ್ಪಾದನೆ ನಿಯಂತ್ರಣದ ಕಾರ್ಯಾವನ್ನು ರಕ್ಷಣಾ ಪಡೆಗಳು ಮುಂದುವರಿಸಲಿವೆ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

The Security Forces are being directed to take all necessary actions as earlier to prevent terrorists from launching attacks and indulging in violence and killings.

— Rajnath Singh (@rajnathsingh) June 17, 2018

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search