• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲ್ಲು ತೂರಾಟಗಾರರಿಂದ ಸೈನಿಕರ ರಕ್ಷಣೆಗೆ ದೇಹರಕ್ಷಕ ಅಸ್ತ್ರ ನೀಡಲು ಕೇಂದ್ರ ಸರ್ಕಾರದ ನಿರ್ಧಾರ

TNN Correspondent Posted On June 17, 2018
0


0
Shares
  • Share On Facebook
  • Tweet It

ದೆಹಲಿ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪ್ರತ್ಯೇಕತವಾದಿಗಳು, ಭಯೋತ್ಪಾಕರ ಕುತಂತ್ರದಿಂದ ಸೈನಿಕರ ಮೇಲೆ ಕಲ್ಲು ತೂರಾಟ ಪ್ರಕರಣಗಳು ಹೆಚ್ಚುತ್ತಿದ್ದು, ಸೈನಿಕರಿಗೆ ಹಾನಿಯಾಗುತ್ತಿರುವುದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಸೈನಿಕರ ರಕ್ಷಣೆಗಾಗಿ ಇಡೀ ದೇಹವನ್ನು ಕಲ್ಲುಗಳಿಂದ ರಕ್ಷಿಸುವ ದೇಹರಕ್ಷಕ ಧಿರಿಸುಗಳನ್ನು ಕೇಂದ್ರ ಸರ್ಕಾರ ನೀಡಲು ನಿರ್ಧರಿಸಿದೆ. ಈ ಮೂಲಕ ಜಮ್ಮು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸುತ್ತಿರುವವ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಡಿ ಇಟ್ಟಿದೆ.

ಸೈನಿಕರ ರಕ್ಷಣೆಗಾಗಿ ಸಿದ್ಧಪಡಿಸಿರುವ ಈ ಧಿರಿಸುಗಳ ಮೇಲೆ ‘ಕಲ್ಲು ತೂರಾಟ, ಕೆರೋಸಿನ್ ದಾಳಿ, ಪೆಟ್ರೋಲ್ ಬಾಂಬ್ ದಾಳಿ, ಕೆಮಿಕಲ್ ದಾಳಿ ಸೇರಿ ನಾನಾ ತರಹದ ದಾಳಿಗಳಿಂದ ರಕ್ಷಣೆ ನೀಡುತ್ತವೆ. ಅಲ್ಲದೇ ಕಣಿವೆಯಲ್ಲಿರುವ ಮೈಕೊರೆಯುವ ಚಳಿಯಿಂದಲೂ ಈ ಧಿರಿಸುಗಳು ರಕ್ಷಣೆ ನೀಡಲಿದ್ದು, ಮೈನಸ್ 20 ಸೆಲ್ಸಿಯಸ್ ನಿಂದ 55 ಸೆಲ್ಸಿಯಸ್ ವರೆಗೆ ಚಳಿಯಿಂದ 5 ಗಂಟೆವರೆಗೆ ರಕ್ಷಣೆ ನೀಡಲಿದೆ.

ಕಾಶ್ಮೀರದ ಗಲಭೆ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಸಿಆರ್ ಫಿಎಫ್ ಸೈನಿಕರಿಗೆ ಇಡೀ ದೇಹವನ್ನು ರಕ್ಷಿಸುವ ಈ ಧಿರಿಸುಗಳನ್ನು ನೀಡಲು ನಿರ್ಧರಿಸಲಾಗಿದೆ. ಸಿಆರ್ ಫಿಎಫ್ ಜಮ್ಮು ಕಾಶ್ಮೀರದಲ್ಲಿ ಗಲಭೆ ನಿಯಂತ್ರಿಸಲು ಮತ್ತು ತುರ್ತು ಸಂದರ್ಭದಲ್ಲಿ ಕಾರ್ಯಾಚರಣೆಗೆ ಇಳಿಯುತ್ತಿದ್ದು, ಸಿಆರ್ ಫಿಎಫ್ ಪಡೆಗೆ ಆರಂಭದಲ್ಲಿ ನೀಡಲಾಗುತ್ತಿದೆ. ಅಲ್ಲದೇ ಜಮ್ಮು ಕಾಶ್ಮೀರದ ಪೊಲೀಸರು ಮತ್ತು ಬಿಎಸ್ ಎಫ್ ಯೋಧರಿಗೆ ವಿತರಿಸಲಾಗುವುದು ಎಂದು ಕೇಂದ್ರ ಗೃಹ ಇಲಾಖೆ ಮೂಲಗಳು ತಿಳಿಸಿವೆ.

ಆರು ಕೆ.ಜಿ.ತೂಕದ ಈ ಧಿರಿಸುಗಳು ಮೂರು ಬೇರೆ ಬೇರೆ ರೀತಿಯ ಸೈಜ್ ಗಳನ್ನು ಹೊಂದಿವೆ. ಮುಖ, ಎದೆ, ತೋಳು,  ಹೊಟ್ಟೆ, ತೊಡೆ ಸೇರಿ ದೇಹದ ಸೂಕ್ಷ್ಮ ಅಂಗಗಳನ್ನು ಈ ನೂತನ ಧಿರಿಸುಗಳು ರಕ್ಷಿಸುತ್ತವೆ ಎಂದು ಮೂಲಗಳು ತಿಳಿಸಿವೆ. ಪ್ರಸಕ್ತ 2018ರ ವರ್ಷದಲ್ಲಿ ಕಲ್ಲು ತೂರಾಟಗಾರರಿಂದ ಸುಮಾರು 3000 ಸಿಆರ್ ಫಿಎಫ್ ಸೈನಿಕರು ಗಾಯಗೊಂಡಿದ್ದಾರೆ. ಆದ್ದರಿಂದ ಸೈನಿಕರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರಿಗೆ ಇಡೀ ದೇಹವನ್ನು ರಕ್ಷಿಸುವ ಧಿರಿಸುಗಳನ್ನು ನೀಡಲು ಮುಂದಾಗಿದೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search