• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಸ್ಲಿಂ ರಾಷ್ಟ್ರಗಳಲ್ಲೇ ಯೋಗ ಇದ್ದರೂ ಹೀನಾ ಖಾನ್ ಗೇಕೆ ವಿರೋಧ ಮುಸ್ಲಿಂ ಮೂಲಭೂತವಾದಿಗಳೇ?

TNN Correspondent Posted On June 23, 2018


  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ 2015ರ ಜೂನ್ 21ರಂದು ಮೊದಲ ಬಾರಿಗೆ ವಿಶ್ವ ಯೋಗ ದಿನ ಆಚರಿಸಲಾಯಿತು. ಸುಮಾರು 47 ರಾಷ್ಟ್ರಗಳು ಯೋಗದಿನಕ್ಕೆ ಬೆಂಬಲ ಸೂಚಿಸಿದವು. ಈ ಬಾರಿಯೂ ಪಾಕಿಸ್ತಾನ, ಬಾಂಗ್ಲಾದೇಶ, ಸೌದಿ ಅರೇಬಿಯಾ ಸೇರಿ ಹಲವು ಮುಸ್ಲಿಂ ರಾಷ್ಟ್ರಗಳಲ್ಲಿ ಯೋಗ ದಿನ ಆಚರಿಸಲಾಯಿತು. ಲಕ್ಷಾಂತರ ಜನ ಯೋಗ ಮಾಡುವ ಮೂಲಕ ಬೆಂಬಲ ಸೂಚಿಸಿದರು.

ಆದರೆ ಭಾರತದಲ್ಲಿರುವ ಮುಸ್ಲಿಂ ಮೂಲಭೂತವಾದಿಗಳು ಮಾತ್ರ ಯೋಗ ಮಾಡಲು ವಿರೋಧಿಸುತ್ತಿದ್ದಾರೆ. ಮುಸ್ಲಿಮರು ಯೋಗ ಮಾಡುವುದು ಇಸ್ಲಾಮೇತರ ಎಂಬ ಅಸಹಿಷ್ಣುತೆ ಪ್ರದರ್ಶಿಸುತ್ತಿದ್ದಾರೆ. ಆ ಮೂಲಕ ಮುಸ್ಲಿಮರು ಆರೋಗ್ಯವಂತ ಜೀವನ ಸಾಗಿಸಲು ಅಡ್ಡಗಾಲು ಹಾಕುತ್ತಿದ್ದಾರೆ. ಮೌಢ್ಯ ಮೆರೆಯುತ್ತಿದ್ದಾರೆ.

ಕಳೆದ ಗುರುವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ನಟಿ ಹೀನಾ ಖಾನ್ ಯೋಗ ಮಾಡುತ್ತಿರುವ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದರು. ಅಲ್ಲದೆ ಹೀಗೆ ಯೋಗ ಮಾಡುವುದರಿಂದ ಮನಸ್ಸಿನಲ್ಲಿ ಆವರಿಸುವ ಶಾಂತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂಬ ಒಕ್ಕಣೆ ಸಹ ಬರೆದಿದ್ದರು.

ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲೇ ಹಲವು ಮುಸ್ಲಿಂ ಮೂಲಭೂತವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಹೀನಾ ಖಾನ್ ಮುಸ್ಲಿಮಳೇ ಅಲ್ಲ, ಅವರು ಮುಸ್ಲಿಮರಾಗಿದ್ದರೆ ಹೀಗೆ ಮಾಡುತ್ತಿರಲಿಲ್ಲ, ಹೀಗೆ ಯೋಗ ಮಾಡುವ ಬದಲು ಐದು ಬಾರಿ ನಮಾಜು ಮಾಡಬೇಕಿತ್ತು, ನಮಾಜೇ ಮುಸ್ಲಿಮರಿಗೆ ಯೋಗ ಎಂಬಂತಹ ಹಲವು ಟೀಕೆ ಮಾಡಿದ್ದಾರೆ.

ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿದೆ. ಜಗತ್ತಿನಾದ್ಯಂತ ಕೋಟ್ಯಂತರ ಜನ ಯೋಗ ಮಾಡುತ್ತಿದ್ದಾರೆ. ಮುಸ್ಲಿಂ ರಾಷ್ಟ್ರಗಳೂ ಆರೋಗ್ಯದ ಹಿತದೃಷ್ಟಿಯಿಂದ ಯೋಗಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ಆದರೆ ಭಾರತದಲ್ಲಿ ಮಾತ್ರ ಮುಸ್ಲಿಂ ಮೂಲಭೂತವಾದಿಗಳಿಂದಾಗಿ ಮುಸ್ಲಿಮರು ಯೋಗ ಮಾಡಿದರೆ ಟೀಕೆಗಳು ವ್ಯಕ್ತವಾಗುತ್ತಿವೆ. ಇವರೆಲ್ಲ ಎಚ್ಚೆತ್ತುಕೊಳ್ಳುವುದು ಯಾವಾಗ?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search