• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನಿಟ್ಟಡೆ ಗ್ರಾಮದಲ್ಲಿ ಜೀವದ ಹಂಗು ತೊರೆದು ಗೆಳೆಯನನ್ನು ರಕ್ಷಿಸಿದ ಬಾಲಕ

Tulunadu News Posted On June 23, 2018
0


0
Shares
  • Share On Facebook
  • Tweet It

ಬೆಳ್ತಂಗಡಿ : ನೀರು ಪಾಲಾಗುವ ವೇಳೆ ತನ್ನ ಗೆಳೆಯನನ್ನು ಪುಟ್ಟ ಬಾಲಕನೊಬ್ಬ ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ನಿಟ್ಟಡೆ ಗ್ರಾಮದ ಫಂಡಿಜೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಆದಿತ್ಯ ಹಾಗೂ ಆತನ ಗೆಳೆಯ ಅದೇ ಶಾಲೆಯ 5ನೇ ತರಗತಿಯ ಸುಜಯ ನಿನ್ನೆ ಸಂಜೆ ಶಾಲೆಯಿಂದ ಮನೆಗೆ ಮರಳುತ್ತಿದ್ದರು. ದಂಬೆ ಎಂಬಲ್ಲಿ ತೊರೆಯೊಂದು ಹರಿಯುತ್ತಿದ್ದು, ಇದನ್ನು ದಾಟಿ ಹೋಗಲು ನಿರ್ಮಿಸಿರುವ ಅಡಿಕೆ ಮರದ ಕಾಲು ಸೇತುವೆ ಬಳಿ ಸುಜಯ್ ನ ಹಿಂದೆ ಬರುತ್ತಿದ್ದ ಆದಿತ್ಯನ ಕಾಲು ಆಕಸ್ಮಾತ್ ಜಾರಿದೆ. ತಕ್ಷಣ ಇದನ್ನು ಗಮನಿಸಿದ ಸುಜಯ ಆತನನ್ನು ರಕ್ಷಿಸಲು ಯತ್ನಿಸಿದ್ದಾನೆ.

ಆದಿತ್ಯನ ಒಂದು ಕಾಲನ್ನು ಸುಜಯ ಹಿಡಿದುಕೊಂಡು ಮೇಲೆತ್ತಲು ಯತ್ನಿಸಿದ್ದಾನೆ . ಈ ಹಂತದಲ್ಲಿ ಆದಿತ್ಯನ ಇಡೀ ಶರೀರ ಸಂಕದ ಕೆಳಗೆ ನೇತಾಡತೊಡಗಿತ್ತು. ಶಾಲೆಯ ಬ್ಯಾಗ್ , ಕೊಡೆಯೊಂದಿಗೆ ಆದಿತ್ಯನನ್ನು ಮೇಲೆತ್ತೆಲು ಸುಜಯಗೆ ಆಗಲಿಲ್ಲ. ಆದರೆ ಆ ಕ್ಷಣ ಗೆಳೆಯನನ್ನು ಬದುಕಿಸಲು ರಕ್ಷಣೆಗಾಗಿ ಬೊಬ್ಬೆ ಹೊಡೆದಿದ್ದಾನೆ. ಬಾಲಕರ ಬೊಬ್ಬೆ ಕೇಳಿ ಕೂಡಲೇ ಅಣತಿ ದೂರದ ಮನೆಯ ಜಯಾನಂದ ಸಾಠೆ ಹಾಗೂ ಆದಿತ್ಯನ ತಂದೆ ರತ್ನಾಕರ ಹೆಬ್ಬಾರ್ ಹಾಗೂ ಇತರರು ತಕ್ಷಣ ಸ್ಥಳಕ್ಕೆ ಬಂದು ಆದಿತ್ಯನನ್ನು ಮೇಲೆತ್ತಿದ್ದಾರೆ. ಸುಮಾರು ನಾಲ್ಕೈದು ನಿಮಿಷಗಳ ಕಾಲ ಸುಜಯ ಆದಿತ್ಯನನ್ನು ಹಿಡಿದುಕೊಂಡಿದ್ದು ಮಿತ್ರನ ರಕ್ಷಣೆ ಮಾಡಿದ್ದಾನೆ. ಸುಜಯನ ಸಮಯ ಪ್ರಜ್ಞೆಯಿಂದಾಗಿ ಆದಿತ್ಯನ ಪ್ರಾಣ ಉಳಿಯುವಂತಾಗಿದೆ. ಬಾಲಕನ ಸಾಹಸಕ್ಕೆ ಎಲ್ಲೆಡೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ

0
Shares
  • Share On Facebook
  • Tweet It




Trending Now
ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
Tulunadu News July 4, 2025
ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
Tulunadu News July 4, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
  • Popular Posts

    • 1
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 2
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • 3
      ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • 4
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 5
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search