• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರಿನ ಅನ್ನಪೂರ್ಣ ಲಾಡ್ಜ್ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ: 6 ಯುವತಿಯರ ರಕ್ಷಣೆ

Tulunadu News Posted On June 23, 2018
0


0
Shares
  • Share On Facebook
  • Tweet It

ಮಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಸಾಮಾಜಿಕ ಸೇವಾಸಂಸ್ಥೆ ಹಾಗು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಈ ಜಾಲದಲ್ಲಿ ಸಿಲುಕಿದ್ದ ಬಾಂಗ್ಲಾದೇಶ ಮೂಲದ 6 ಮಂದಿ ಯುವತಿಯರನ್ನು ರಕ್ಷಿಸಲಾಗಿದೆ.

ಇಂದು ಮುಂಜಾನೆ ಮಂಗಳೂರಿನ ಪಂಪ್ ವಲ್ ಬಳಿ ಇರುವ ಅನ್ನಪೂರ್ಣ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ವಿದೇಶಿ ಯುವತಿಯರನ್ನು ಕೂಡಿಹಾಕಿ ಅವರಿಂದ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೈಸೂರಿನ ಒಡನಾಡಿ ಸೇವಾಸಂಸ್ಥೆಯ ಸ್ವಯಂ ಸೇವಕರಿಗೆ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ್ದ ಒಡನಾಡಿ ಸೇವಾಸಂಸ್ಥೆಯ ಸ್ವಯಂ ಸೇವಕರು ಮಂಗಳೂರು ಪೊಲೀಸರ ನೆರವಿನೊಂದಿಗೆ ಲಾಡ್ಜ್ ಮೇಲೆ ದಾಳಿ ನಡೆಸಿದ್ದರು. ಲಾಡ್ಜ್ ನಲ್ಲಿ ವ್ಯಾಪಕ ಶೋಧಕಾರ್ಯ ನಡೆಸಿದ ಪೊಲೀಸರಿಗೆ ಆಚ್ಚರಿ ಕಾದಿತ್ತು. ಲಾಡ್ಜ್ ನ ಕೊಠಡಿಯೊಂದರ ಶೌಚಾಲಯದಲ್ಲಿ ಗುಪ್ತ ದಾರಿಯೊಂದನ್ನು ಪೊಲೀಸರು ಪತ್ತೆಮಾಡಿದ್ದರು. ಆ ಗುಪ್ತದಾರಿಯ ಮೂಲಕ ಪ್ರವೇಶಿಸಿದ ಪೊಲೀಸರು ರಹಸ್ಯ ಕೊಠಡಿಯಲ್ಲಿ ಕೂಡಿ ಹಾಕಲಾಗಿದ್ದ 6 ಮಂದಿ ಬಾಂಗ್ಲಾ ದೇಶ ಮೂಲದ ಯುವತಿಯರನ್ನು ರಕ್ಷಿಸಿದ್ದಾರೆ. ಈ ದಾಳಿಯ ಸಂದರ್ಭದಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲದ ಕಿಂಗ್ ಪಿನ್ ಶಿವರಾಮ ಪೂಜಾರಿ ಎಂಬಾತ ತಪ್ಪಿಸಿಕೊಂಡಿದ್ದು, ಲಾಡ್ಜ್ ನಲ್ಲಿದ್ದ 15 ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ದಾಳಿ ಸಂದರ್ಭದಲ್ಲಿ ಯುವತಿಯರ ಬಳಿಇದ್ದ ಬಾಂಗ್ಲಾ ಕರೆನ್ಸಿ, ಐಡಿ ಕಾರ್ಡ್ ನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search