• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಿಎಸ್ಟಿ ಯಶಸ್ಸು ನಿಷ್ಠೆಗೆ ಸಂದ ಜಯ, ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮೋದಿ ಹೇಳಿಕೆ

TNN Correspondent Posted On June 24, 2018


  • Share On Facebook
  • Tweet It

ಹೊಸದಿಲ್ಲಿ: ಸಾಮಾನ್ಯವಾಗಿ ಯಾವುದೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಯೋಜನೆಯು ಜಾರಿಯಾದ 5-7 ವರ್ಷದಲ್ಲಿ ಪ್ರತಿಫಲ ನೀಡುತ್ತದೆ. ಆದರೆ ಭಾರತದಲ್ಲಿ ಒಂದೇ ವರ್ಷದಲ್ಲಿ ಜಿಎಸ್ಟಿ ಯಶಸ್ವಿಯಾಗಿದ್ದು, ಇದು ಸರ್ಕಾರದ ನಿಷ್ಠೆಗೆ ಸಂದ ಜಯ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಂದು ದೇಶ, ಒಂದು ತೆರಿಗೆ ಎಂಬುದು ಪ್ರತಿ ಭಾರತೀಯನ ಕನಸಾಗಿತ್ತು. ಅದರಲ್ಲೂ ನಾವು ಜಿಎಸ್ಟಿ ಜಾರಿಗೆ ತರಲು ಹೊರಟಾಗಿ ಪ್ರತಿ ರಾಜ್ಯಗಳು ಸಹಕಾರ ನೀಡಿವೆ. ಜಿಎಸ್ಟಿ ಯಶಸ್ಸಿನ ಹೆಗ್ಗಳಿಕೆ ಈ ರಾಜ್ಯಕ್ಕೂ ಸಲ್ಲಬೇಕು. ಇದು ಪ್ರಜಾಪ್ರಭುತ್ವದ ಸೌಂದರ್ಯವಾಗಿದೆ, ನಿಷ್ಠೆಗೆ ಸಂದ ಜಯವಾಗಿದೆ ಎಂದು ವರ್ಣಿಸಿದ್ದಾರೆ.

ಶಾಮ್ ಪ್ರಸಾದ್ ಮುಖರ್ಜಿಯವರು ಶಿಕ್ಷಣ ಪ್ರೇಮಿಯಾಗಿದ್ದರು. ಅವರು ಕೋಲ್ಕತ್ತಾ ವಿಶ್ವವಿದ್ಯಾಲಯದ ಅತಿ ಕಿರಿಯ ವಯಸ್ಸಿನ ಉಪಕುಲಪತಿಯಾಗಿದ್ದರು. ಮುಖರ್ಜಿಯವರ ಆಹ್ವಾನದ ಮೇರೆಗೆ ರವೀಂದ್ರ ನಾಥ ಟ್ಯಾಗೋರ್ ಅವರು ವಿವಿಯಲ್ಲಿ ಆಯೋಜಿಸಿದ್ದ ಘಟಿಕೋತ್ಸವದಲ್ಲಿ ಮಾತನಾಡಿದ್ದರು ಎಂದು ಮೋದಿ ಸ್ಮರಿಸಿದ್ದಾರೆ.

ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸಕ್ಕೆ ಹಲವು ವರ್ಷಗಳ ಶ್ರಮವಿದೆ. ಜಲಿಯನ್ ವಾಲಾಭಾಗ್ ಹತ್ಯಾಕಾಂಡ ನಡೆದು ಮುಂದಿನ ವರ್ಷಕ್ಕೆ ನೂರು ವರ್ಷ ತುಂಬುತ್ತದೆ. ಆದರೆ ದೇಶವನ್ನು ಯಾವಾಗಲೂ ಮುನ್ನಡೆಸುವುದು, ಅಭಿವೃದ್ಧಿಯತ್ತ ಸಾಗಿಸುವುದು ಶಾಂತಿಯೇ ಎಂದು ಮೋದಿ ಅಭಿಪ್ರಾಯಪಟ್ಟರು.

ಪ್ರಸಕ್ತ ಸಾಲಿನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ವಿಯಾಗಿದ್ದು, ಯೋಗ ಎಲ್ಲರನ್ನೂ ಒಗ್ಗೂಡಿಸುತ್ತಿದೆ. ಅದರಲ್ಲೂ ಈ ಬಾರಿ ಸೌದಿ ಅರೇಬಿಯಾದಲ್ಲಿ ಮಹಿಳೆಯರ ನೇತೃತ್ವದಲ್ಲಿ ಯೋಗ ಕಾರ್ಯಕ್ರಮಗಳು ನಡೆದಿವೆ. ನಮ್ಮ ಯೋಧರೂ ಸಹ ಸಿಯಾಚಿನ್, ಸಮುದ್ರದಲ್ಲಿ ಯೋಗ ಮಾಡುವ ಮೂಲಕ ಸ್ಫೂರ್ತಿ ತುಂಬಿದ್ದಾರೆ ಎಂದು ಮೋದಿ ತಿಳಿಸಿದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search