• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಹಾ ಮಾರುವವರು ಪ್ರಧಾನಿಯಾದರು, ಈಗ ಚಹಾ ಮಾರುವವರ ಪುತ್ರಿ ಯೋಧೆಯಾದ ಹೆಮ್ಮೆಯ ಕತೆ ಕೇಳಿ…

TNN Correspondent Posted On June 25, 2018
0


0
Shares
  • Share On Facebook
  • Tweet It

ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಯಾವ ಉನ್ನತ ಸಾಧನೆಯಾದರೂ ಮಾಡಬಹುದು. ಟೀ ಮಾರುವವರೊಬ್ಬರು ಪ್ರಧಾನಿಯಾಗಬಹುದು. ಯೋಗಿಯೊಬ್ಬರು ಮುಖ್ಯಮಂತ್ರಿಯಾಗಬಹುದು. ಸಮುದ್ರದ ದಂಡೆಯಲ್ಲಿ ನಿಂತು ಪಾನಿಪೂರಿ ಮಾರುವವರು ದೇಶದ ನಂಬರ್ ಒನ್ ಉದ್ಯಮಿಯಾಗಬಹುದು. ಇಂತಹ ಹಲವು ಉದಾಹರಣೆಗಳಿಗೆ ಭಾರತ ಸಾಕ್ಷಿಯಾಗಿದೆ.

ಈಗ ಇಂತಹುದೇ ಸಾಕ್ಷಿಯೊಂದು ಲಭಿಸಿದ್ದು, ಮಧ್ಯಪ್ರದೇಶದಲ್ಲಿ ಟೀ ಮಾರುವ ವ್ಯಕ್ತಿಯೊಬ್ಬರ ಮಗಳು ವಾಯುಸೇನೆಗೆ ಆಯ್ಕೆಯಾಗುವ ಮೂಲಕ ದೇಶದ ಕೀರ್ತಿ ಹೆಚ್ಚಿಸಿದ್ದಾಳೆ. ಹೌದು, 24 ವರ್ಷದ ಅಂಚಾಲ್ ಗಂಗ್ವಾಲ್ ಅಂತಹ ಸಾಧನೆ ಮೆರೆದಿದ್ದಾರೆ.

ಇತ್ತೀಚೆಗೆ ವಾಯುಸೇನೆ ಹಾರಾಟ ವಿಭಾಗಕ್ಕೆ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಅಂಚಾಲ್ ಗಂಗ್ವಾಲ್ ಆಯ್ಕೆಯಾಗಿದ್ದಾರೆ. ಆ ಮೂಲಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಧ್ಯಪ್ರದೇಶದ ಏಕೈಕ ಮಹಿಳೆ ಎನಿಸಿದ್ದಾರೆ.

ತಂದೆ ಸುರೇಶ್ ಗಂಗ್ವಾಲ್ ಹಾಗೂ ಕುಟುಂಬ ಮಧ್ಯಪ್ರದೇಶದ ಮಿಮುಜ್ ಜಿಲ್ಲೆಯಲ್ಲಿ ವಾಸಿಸುತ್ತಿದ್ದು, ಸುರೇಶ್ ಗಂಗ್ವಾಲ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಚಹಾದ ಅಂಗಡಿ ನಡೆಸುತ್ತಿದ್ದಾರೆ. ಅಲ್ಲದೆ ಮಗಳು ಮಾಡಿರುವ ಸಾಧನೆ ಕಂಡು ಈಗ ಚಹಾದ ಅಂಗಡಿ ಬರುವ ಗ್ರಾಹಕರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಸುರೇಶ್ ತಿಳಿಸಿದ್ದಾರೆ.

ಈ ಕುರಿತು ಅಂಚಾಲ್ ಗಂಗ್ವಾಲ್ ಸಹ ಮಾತನಾಡಿದ್ದು, 2013ರಲ್ಲಿ ಉತ್ತರಾಖಂಡದಲ್ಲಿ ಉಂಟಾದ ಪ್ರಕೃತಿ ವಿಕೋಪದ ವೇಳೆ ಭಾರತೀಯ ರಕ್ಷಣಾ ಪಡೆ ನಡೆಸಿದ ರಕ್ಷಣಾ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದೆ. ನಾನಾಗ ಪಿಯುಸಿಯಲ್ಲಿದ್ದು, ಹಲವು ಬಾರಿ ವಾಯುಸೇನೆ ಪರೀಕ್ಷೆ ಬರೆದು ಈಗ ಉತ್ತೀರ್ಣಳಾಗಿದ್ದೇನೆ ಎಂದು ನಗೆ ಬೀರುತ್ತಾರೆ.

ಹಾಗಂತ ಪರೀಕ್ಷೆಯೇನೂ ಸರಳವಾಗಿರಲಿಲ್ಲ. ದೇಶಾದ್ಯಂತ ಸುಮಾರು 6 ಲಕ್ಷ ಅಭರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ ಆಯ್ಕೆಯಾಗಿದ್ದು ಕೇವಲ 22 ಮಂದಿ. ಅದರಲ್ಲಿ ಅಂಚಾಲ್ ಸಹ ಒಬ್ಬರಾಗಿದ್ದಾರೆ ಎಂಬುದು ವಿಶೇಷ. ಆಲ್ ದಿ ಬೆಸ್ಟ್ ಅಂಚಾಲ್.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search