• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕರಾವಳಿಯಲ್ಲಿ ಬಹಳ ದಿನಗಳವರೆಗೆ ಮೀನುಗಳು ಕೆಡದಂತೆ ಕೆಮಿಕಲ್ ಲೇಪಿಸಿ ಮಾರುಕಟ್ಟೆಗಳಲ್ಲಿ ಮಾರಾಟ ಆರೋಪ!

Tulunadu News Posted On June 25, 2018


  • Share On Facebook
  • Tweet It

ಮಂಗಳೂರು : ಹಣ್ಣುಗಳು ಕೆಡದಂತೆ, ತರಕಾರಿಗಳು ತಾಜಾ ಕಾಣುವಂತೆ ಮಾಡಲು ಕೆಮಿಕಲ್ ಲೇಪನ ಮಾಡಿ ಮಾರಾಟ ಮಾಡುವ ಘಟನೆಗಳು ಈಗಾಗಲೇ ಬಯಲಾಗಿವೆ. ಈಗ ಮೀನಿನ ಸರದಿ. ಹೌದು ಇಂತಹದೊಂದು ಆರೋಪ ಕೆಲವು ದಿನಗಳಿಂದ ಕೇಳಿಬರುತ್ತಿದೆ. ಬಹಳ ದಿನಗಳವರೆಗೆ ಮೀನುಗಳು ಕೆಡದಂತೆ ಕೆಮಿಕಲ್ ಲೇಪಿಸಿ ತಂದು ಮಾರುಕಟ್ಟೆಗಳಲ್ಲಿ ಮಾರಟ ಮಾಡಲಾಗುತ್ತಿದೆ ಎಂಬ ಆರೋಪ ಕರಾವಳಿಯಲ್ಲಿ ಕೇಳಿಬರುತ್ತಿದೆ. ಇದು ಮೀನು ಪ್ರಿಯರಲ್ಲಿ ಆತಂಕ ಮೂಡಿಸಿದೆ. ಈ ಕುರಿತ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಿಂಗಳುಗಟ್ಟಲೆ ಹಾಳಾಗದಂತೆ ಹಣ್ಣುಗಳಿಗೆ ಕೆಮಿಕಲ್ ಹಾಕಿ ಮಾರಾಟ ಮಾಡುವಂತೆ ಈಗ ಮೀನಿಗೂ ವಿಷಕಾರಿ ಅಮೋನಿಯಾ ಬೆರೆಸಿ ವಾರಗಟ್ಟಲೆ ಮಾರಾಟವಾಗುವಂತೆ ನೋಡಿಕೊಳ್ಳುವ ದಂಧೆ ಕರಾವಳಿಯ ಎಲ್ಲೆಡೆ ಆರಂಭವಾಗಿದೆ ಎಂದು ಆರೋಪಿಸಲಾಗಿದೆ. ವಾರಗಟ್ಟಲೆ ಐಸ್ ನಲ್ಲಿಟ್ಟ ಮೀನುಗಳನ್ನು ಗಿರಾಕಿಗಳಿಗೆ ಫ್ರೆಶ್ ಎಂದು ತೋರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ವಿಡಿಯೋದಲ್ಲಿ ತೋರಿಸಲಾಗಿದೆ. ಕೆಮಿಕಲ್ ಲೇಪನದ ಕುರಿತು ಗ್ರಾಹಕ ಹಾಗೂ ಮೀನು ಚಿಲ್ಲರೆ ಮಾರಾಟಗಾರನ ನಡುವೆ ನಡೆದ ವಾಗ್ವಾದ ಈ ವಿಡಿಯೋದಲ್ಲಿದೆ. ಅದರ ಪ್ರಕಾರ “ಈ ಕೆಮಿಕಲ್ ನಾವು ಹಾಕುವುದಿಲ್ಲ ಬೇರೆ ಯಾರೋ ಹಾಕುತ್ತಾರೆ ” ಎಂದು ಮೀನು ಮಾರಾಟಗಾರ ಸಮಜಾಯಿಸಿ ನೀಡುತ್ತಾನೆ. ಆದರೆ ಕೆಮಿಕಲ್ ಹಾಕುವವರು ಯಾರು ಎಂಬುದನ್ನು ಮೀನು ಮಾರಾಟಗಾರ ಹೇಳಲು ಹಿಂದೇಟು ಹಾಕುವ ಪ್ರಸಂಗ ಈ ವಿಡಿಯೋದಲ್ಲಿದೆ.

ಮೀನಿಗೆ ಅಮೋನಿಯ ಹಾಕುವುದರಿಂದ ಅದು ಬೇಗ ಹಾಳಾಗುವುದಿಲ್ಲ. ಮೀನು ಸ್ವಲ್ಪ ಹಳದಿ ಬಣ್ಣ ಅಥವಾ ಬಿಳಿಚಿದಂತೆ ಕಾಣುವುದು. ತಾಜಾ ಮೀನಿನಲ್ಲಿ ಕಣ್ಣು ಹಾಗೂ ಕಿವಿರಿನ ಬಳಿ ಸ್ವಲ್ಪ ರಕ್ತ ಇರುತ್ತದೆ. ಅಮೋನಿಯಾ ಹಾಕಿದ ಮೀನಿನಲ್ಲಿ ಇದು ಕಾಣುವುದಿಲ್ಲ ಹಾಗೂ ಈ ಭಾಗಗಳು ಬಿಳಿಯಾಗಿರುತ್ತವೆ. ಅದರಲ್ಲೂ ಮುಖ್ಯವಾಗಿ ಅಮೋನಿಯ ಹಾಕಿದ ಮೀನಿಗೆ ನೊಣ ಕುಳಿತುಕೊಳ್ಳುವುದಿಲ್ಲ. ಆದರೆ ಇಂತಹ ಅಮೋನಿಯಾ ಬೆರೆಸಿ ಮಾರುವ ಮೀನಿನ ಸೇವನೆಯಿಂದ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ. ಈ ಕುರಿತು ಆರೋಗ್ಯ ಇಲಾಖೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೂಡ ಕೇಳಿಬರುತ್ತಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search