• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಧರೆಂದರೆ ನರೇಂದ್ರ ಮೋದಿ ಅವರಿಗೆ ಹೇಗೆ ಮನ ಮಿಡಿಯುತ್ತದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ ನೋಡಿ!

TNN Correspondent Posted On June 26, 2018
0


0
Shares
  • Share On Facebook
  • Tweet It

ನವದೆಹಲಿ: ನರೇಂದ್ರ ಮೊದಿ ಅವರು ಪ್ರಧಾನಿಯಾದ ಬಳಿಕ ದೇಶದ ಯೋಧರು ಹೆಚ್ಚಿನ ಸ್ವಾತಂತ್ರ್ಯ, ಭದ್ರತೆ ಸೇರಿ ಹಲವು ಸೌಲಭ್ಯ ಹೊಂದಿದ್ದಾರೆ. ಅದರಲ್ಲೂ ನರೇಂದ್ರ ಮೋದಿ ಅವರಂತೂ ಯೋಧರೆಂದರೆ ಸಾಕು ವಿಶೇಷ ಕಾಳಜಿ ಪ್ರದರ್ಶಿಸುತ್ತಾರೆ. ಅದೇ ಕಾರಣಕ್ಕೆ ನರೇಂದ್ರ ಮೋದಿ ಅವರು ಪ್ರತಿ ದೀಪಾವಳಿಯನ್ನು ಗಡಿಗೆ ತೆರಳಿ ಯೋಧರೊಂದಿಗೆ ಆಚರಿಸುತ್ತಾರೆ.

ಇಂತಹ ನರೇಂದ್ರ ಮೋದಿ ಅವರು ಈಗ ತಾವು ಯೋಧರ ಬಗ್ಗೆ ಎಂಥಹ ಕಾಳಜಿ ಎಂಬುದನ್ನು ಸ್ವಾಭಾವಿಕವಾಗಿ ವ್ಯಕ್ತಪಡಿಸಿದ ರೀತಿ ಎಲ್ಲರ ಮನಸ್ಸನ್ನೂ ಸೆಳೆಯುವಂತಿದೆ. ಆ ಮೂಲಕ ಮೋದಿ ಅವರು ಸೈನಿಕರ ಬಗ್ಗೆ ಎಂತಹ ಕಾಳಜಿ ಹೊಂದಿದ್ದಾರೆ ಎಂಬುದು ಸಾಬೀತಾಗಿದೆ.

ಹೌದು, ಸೋಮವಾರ ಹೊಸದಿಲ್ಲಿಗೆ ಸೆಶೆಲ್ಲೆಸ್ ಅಧ್ಯಕ್ಷ ಡ್ಯಾನಿ ಫೌರ್ ಆಗಮಿಸಿದ್ದು, ರಾಷ್ಟ್ರಪತಿ ಭವನದಲ್ಲಿ ಅವರಿಗೊಂದು ಗೌರವ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸಹ ಉಪಸ್ಥಿತಿಯಿದ್ದರು. ಹೀಗೆ ದ್ವೀಪರಾಷ್ಟ್ರ ಅಧ್ಯಕ್ಷರಿಗೆ ಗೌರವ ಸಲ್ಲಿಸುವ ವೇಳೆ ವಾಯುಪಡೆಯ ಸಿಬ್ಬಂದಿಯೊಬ್ಬರು ಬಿಸಿಲಿನ ತಾಪ ತಾಳಲಾರದೆ ಕುಸಿದು ಬಿದ್ದಿದ್ದಾರೆ. ಬಳಿಕ ವಾಯುಪಡೆಯ ಸಿಬ್ಬಂದಿಯೇ ಅವರನ್ನು ಮೇಲೆ ಎಬ್ಬಿಸಿ, ವಿರಾಮ ನೀಡಿದ್ದಾರೆ.

ಹೀಗೆ ಸಮಾರಂಭ ಮುಗಿದ ಬಳಿಕ ಹಲವು ಗಣ್ಯರು ಕಾರ್ಯಕ್ರಮ ನಡೆದ ಸ್ಥಳದಿಂದ ನಿರ್ಗಮಿಸಿದ್ದಾರೆ. ಆದರೆ ನರೇಂದ್ರ ಮೋದಿ ಅವರು ಮಾತ್ರ ವಾಯುಪಡೆ ಸಿಬ್ಬಂದಿ ಬಳಿ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ಅಲ್ಲದೆ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಬೇಕು ಎಂದು ಸಲಹೆ ಸಹ ನೀಡಿದ್ದಾರೆ.

ಹೇಳಿ ಒಂದು ದೇಶದ ಪ್ರಧಾನಿಯಾದವರು, ಸೇನಾ ಸಿಬ್ಬಂದಿಯೊಬ್ಬರು ಕುಸಿದು ಬಿದ್ದಿದ್ದನ್ನು ಮರೆತು ಗಣ್ಯರೊಂದಿಗೆ ತೆರಳಬಹುದಿತ್ತು. ಆದರೆ ಮೋದಿ ಅವರು ಹಾಗಲ್ಲ, ಅವರಿಗೆ ಯೋಧರ ಮೇಲೆ ಇನ್ನಿಲ್ಲದ ಪ್ರೀತಿ, ಕಾಳಜಿ. ಅದು ಆಗಾಗ ಹೀಗೆ ಸ್ವಾಭಾವಿಕವಾಗಿ ವ್ಯಕ್ತವಾಗುತ್ತದೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search