• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಅಕ್ರಮ ಮರಳುಗಾರಿಕೆಗೆ ಮೂಲರಪಟ್ನದ ಸೇತುವೆ ಕುಸಿತ ಆರೋಪ : ಮಾಜಿ ಸಚಿವ ರಮಾನಾಥ ರೈ ಸಹಿತ ಗಣಿ ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಪರಿಸರ ಪ್ರೇಮಿಗಳು!

Tulunadu News Posted On June 26, 2018
0


0
Shares
  • Share On Facebook
  • Tweet It

ಮಂಗಳೂರು: ಕರಾವಳಿ ಜಿಲ್ಲೆಯಾದ್ಯಂತ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಬಲಿಯಾಗಿದ್ದ ಮೂಲರಪಟ್ನದ ಸೇತುವೆ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆಯಲ್ಲಿ ಕುಸಿದು ಬಿದ್ದಿದೆ. ಈ ಅಕ್ರಮ ಮರಳುಗಾರಿಕೆಯ ಕುರಿತು ಅನೇಕ ಸಮಯದಿಂದ ಹೋರಾಟ ಮಾಡಿಕೊಂಡು ಬಂದಿರುವ ಪರಿಸರ ಪ್ರೇಮಿಗಳು ಇದೀಗ ಮಾಜಿ ಅರಣ್ಯ ಸಚಿವ ರಮಾನಾಥ ರೈ ಹಾಗೂ ಗಣಿ ಅಧಿಕಾರಿಗಳ ವಿರುದ್ಧ ಸಿಡಿದೆದ್ದಿದ್ದಾರೆ. ಮಾತ್ರವಲ್ಲದೇ ಈ ಸೇತುವೆ ಕುಸಿತಕ್ಕೆ ಅಧಿಕಾರಿಗಳು ಮತ್ತು ಮಾಜಿ ಸಚಿವರೇ ನೇರ ಕಾರಣ ಎಂದು ಆರೋಪಿಸಿದ್ದಾರೆ. ಪರಿಸರ ಪ್ರೇಮಿಗಳ ಆರೋಪ ಮಾಡಿರುವ ವಿಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಘಟನೆಯ ವಿವರ: ಬಂಟ್ವಾಳ-ಕುಪ್ಪೆಪದವು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಮೂಲರಪಟ್ನ ಎಂಬಲ್ಲಿ ಫಲ್ಗುಣಿ ನದಿಗೆ ಕಟ್ಟಲಾಗಿದ್ದ ಸೇತುವೆ ಏಕಾಏಕಿ ಕುಸಿದು ಬಿದ್ದಿದೆ.ಸುಮಾರು 35 ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಈ ಸೇತುವೆ ಕುಸಿಯುವ ಭೀತಿಯನ್ನು ಸ್ಥಳಿಯ ನಿವಾಸಿಗಳು ವ್ಯಕ್ತಪಡಿಸಿದ್ದರು . ಈ ವಿಚಾರವನ್ನು ಸ್ಥಳೀಯರು ಜಿಲ್ಲಾಡಳಿತದ ಗಮನಕ್ಕೂ ತಂದಿದ್ದರು. ಫಲ್ಗುಣಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯಿಂದ ಸೇತುವೆ ಶಿಥಿಲಗೊಂಡಿದೆ ಎಂದು ಆರೋಪಿಸಲಾಗಿತ್ತು.

ಫಲ್ಲುಣಿ ನದಿಯಲ್ಲಿ ಇಂದು ನೀರಿನ ಹರಿವು ಹೆಚ್ಚಾಗುತ್ತಿದ್ದಂತೆ ಇಂದು ಏಕಾಏಕಿ ಸೇತುವೆ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನಗಳ ಸೇತುವೆಯಲ್ಲಿ ಸಂಚರಿಸದೇ ಇದ್ದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಈ ಸೇತುವೆ ಕೆಳ ಭಾಗದಲ್ಲಿ ಅಕ್ರಮವಾಗಿ ಮರಳುಗಾರಿಕೆಯೂ ನಡೆಯುತ್ತಿದ್ದು, ಹಲವು ಬಾರಿ ಈ ಅಕ್ರಮಕ್ಕೆ ಕಡಿವಾಣ ಹಾಕಲಾಗಿದ್ದರೂ ರಾಜಕೀಯ ಪ್ರಭಾವ ಬಳಸಿ ಅಕ್ರಮ ಮರಲುಗಾರಿಕೆಯನ್ನು‌ ನಡೆಸಲಾಗುತ್ತಿತ್ತು ಎಂದು ದೂರಲಾಗಿದೆ . ಸೇತುವೆ ಕುಸಿದು ಬೀಳಲು ಇದು ಪ್ರಮುಖ ಕಾರಣ ಎನ್ನಲಾಗುತ್ತಿದೆ.
ಸೇತುವೆ ಕುಸಿದಿರುವ ಸ್ಥಳಕ್ಕೆ ಜಿಲ್ಲಾಡಳಿತ ಅಧಿಕಾರಿಗಳು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಸೇತುವೆ ಯ ಎರಡೂ ತುದಿಗಳಲ್ಲಿ ಪೊಲೀಸ್ ಭಧ್ರತೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮುರಿದ ಸೇತುವೆ ಸನಿಹ ಬರದಂತೆ ತಡೆಹಿಡಿಯಲಾಗುತ್ತಿದೆ

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search