• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಅಕ್ರಮ ಮರಳುಗಾರಿಕೆಗೆ ಮೂಲರಪಟ್ನದ ಸೇತುವೆ ಕುಸಿತ ಆರೋಪ : ಮಾಜಿ ಸಚಿವ ರಮಾನಾಥ ರೈ ಸಹಿತ ಗಣಿ ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಪರಿಸರ ಪ್ರೇಮಿಗಳು!

Tulunadu News Posted On June 26, 2018
0


0
Shares
  • Share On Facebook
  • Tweet It

ಮಂಗಳೂರು: ಕರಾವಳಿ ಜಿಲ್ಲೆಯಾದ್ಯಂತ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಬಲಿಯಾಗಿದ್ದ ಮೂಲರಪಟ್ನದ ಸೇತುವೆ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆಯಲ್ಲಿ ಕುಸಿದು ಬಿದ್ದಿದೆ. ಈ ಅಕ್ರಮ ಮರಳುಗಾರಿಕೆಯ ಕುರಿತು ಅನೇಕ ಸಮಯದಿಂದ ಹೋರಾಟ ಮಾಡಿಕೊಂಡು ಬಂದಿರುವ ಪರಿಸರ ಪ್ರೇಮಿಗಳು ಇದೀಗ ಮಾಜಿ ಅರಣ್ಯ ಸಚಿವ ರಮಾನಾಥ ರೈ ಹಾಗೂ ಗಣಿ ಅಧಿಕಾರಿಗಳ ವಿರುದ್ಧ ಸಿಡಿದೆದ್ದಿದ್ದಾರೆ. ಮಾತ್ರವಲ್ಲದೇ ಈ ಸೇತುವೆ ಕುಸಿತಕ್ಕೆ ಅಧಿಕಾರಿಗಳು ಮತ್ತು ಮಾಜಿ ಸಚಿವರೇ ನೇರ ಕಾರಣ ಎಂದು ಆರೋಪಿಸಿದ್ದಾರೆ. ಪರಿಸರ ಪ್ರೇಮಿಗಳ ಆರೋಪ ಮಾಡಿರುವ ವಿಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಘಟನೆಯ ವಿವರ: ಬಂಟ್ವಾಳ-ಕುಪ್ಪೆಪದವು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಮೂಲರಪಟ್ನ ಎಂಬಲ್ಲಿ ಫಲ್ಗುಣಿ ನದಿಗೆ ಕಟ್ಟಲಾಗಿದ್ದ ಸೇತುವೆ ಏಕಾಏಕಿ ಕುಸಿದು ಬಿದ್ದಿದೆ.ಸುಮಾರು 35 ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಈ ಸೇತುವೆ ಕುಸಿಯುವ ಭೀತಿಯನ್ನು ಸ್ಥಳಿಯ ನಿವಾಸಿಗಳು ವ್ಯಕ್ತಪಡಿಸಿದ್ದರು . ಈ ವಿಚಾರವನ್ನು ಸ್ಥಳೀಯರು ಜಿಲ್ಲಾಡಳಿತದ ಗಮನಕ್ಕೂ ತಂದಿದ್ದರು. ಫಲ್ಗುಣಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯಿಂದ ಸೇತುವೆ ಶಿಥಿಲಗೊಂಡಿದೆ ಎಂದು ಆರೋಪಿಸಲಾಗಿತ್ತು.

ಫಲ್ಲುಣಿ ನದಿಯಲ್ಲಿ ಇಂದು ನೀರಿನ ಹರಿವು ಹೆಚ್ಚಾಗುತ್ತಿದ್ದಂತೆ ಇಂದು ಏಕಾಏಕಿ ಸೇತುವೆ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನಗಳ ಸೇತುವೆಯಲ್ಲಿ ಸಂಚರಿಸದೇ ಇದ್ದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಈ ಸೇತುವೆ ಕೆಳ ಭಾಗದಲ್ಲಿ ಅಕ್ರಮವಾಗಿ ಮರಳುಗಾರಿಕೆಯೂ ನಡೆಯುತ್ತಿದ್ದು, ಹಲವು ಬಾರಿ ಈ ಅಕ್ರಮಕ್ಕೆ ಕಡಿವಾಣ ಹಾಕಲಾಗಿದ್ದರೂ ರಾಜಕೀಯ ಪ್ರಭಾವ ಬಳಸಿ ಅಕ್ರಮ ಮರಲುಗಾರಿಕೆಯನ್ನು‌ ನಡೆಸಲಾಗುತ್ತಿತ್ತು ಎಂದು ದೂರಲಾಗಿದೆ . ಸೇತುವೆ ಕುಸಿದು ಬೀಳಲು ಇದು ಪ್ರಮುಖ ಕಾರಣ ಎನ್ನಲಾಗುತ್ತಿದೆ.
ಸೇತುವೆ ಕುಸಿದಿರುವ ಸ್ಥಳಕ್ಕೆ ಜಿಲ್ಲಾಡಳಿತ ಅಧಿಕಾರಿಗಳು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಸೇತುವೆ ಯ ಎರಡೂ ತುದಿಗಳಲ್ಲಿ ಪೊಲೀಸ್ ಭಧ್ರತೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮುರಿದ ಸೇತುವೆ ಸನಿಹ ಬರದಂತೆ ತಡೆಹಿಡಿಯಲಾಗುತ್ತಿದೆ

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search