• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಣಿವೆಯಲ್ಲಿ ಕೇಂದ್ರ ಸರ್ಕಾರದ ಎಫೆಕ್ಟ್: ದಶಕದಲ್ಲೇ ಅಮರನಾಥ ಯಾತ್ರಿಗಳ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆ

TNN Correspondent Posted On June 27, 2018


  • Share On Facebook
  • Tweet It

ದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿರುವ ಬಿಗಿ ಭದ್ರತಾ ಕ್ರಮಗಳ ಮೇಲೆ ದೇಶದ ಜನರ ವಿಶ್ವಾಸ ಇಮ್ಮಡಿಯಾಗಿದ್ದು, ಅದಕ್ಕೆ ಸಾಕ್ಷಿಯಾಗಿ ಪ್ರಸಕ್ತ ಸಾಲಿನಲ್ಲಿ ಕಳೆದ ದಶಕದಲ್ಲೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಅಮರನಾಥ ಯಾತ್ರೆಗೆ ಹೋಗಲು ಸಿದ್ಧರಾಗಿದ್ದಾರೆ ಎಂಬ ಶುಭ ಸುದ್ದಿ ಹೊರ ಬಿದ್ದಿದೆ.

ಅಮರನಾಥ ಯಾತ್ರೆಗೆ ಹೋಗುವ ಯಾತ್ರಿಕ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಜೂನ್ 28ಕ್ಕೆ ಅಮರನಾಥ ಯಾತ್ರೆಗೆ 2,11,994 ಜನರು ನೋಂದಣಿ ಮಾಡಿಕೊಂಡಿದ್ದಾರೆ. ಬ್ಯಾಂಕ್ ಗಳ ಮೂಲಕ ನೇರವಾಗಿ ನೋಂದಣಿ ಮಾಡಿಕೊಂಡಿದ್ದು, ಹೆಲಿಕಾಪ್ಟರ್ ಪ್ರಯಾಣಕ್ಕೂ ಬಹುತೇಕ ಜನರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಜಮ್ಮು ಕಾಶ್ಮೀರ ರಾಜ್ಯಪಾಲ ಎನ್ ಎನ್ ವೋವ್ರಾ ನೇತೃತ್ವದಲ್ಲಿ ನಡೆದ ಸಭೆ ನಂತರ ಅಧಿಕಾರಿಗಳು ಈ ಮಾಹಿತಿ ಹೊರ ಹಾಕಿದ್ದಾರೆ.

ಮಾರ್ಚ್ 1ರಂದು ನೋಂದಣಿ ಕಾರ್ಯ ಆರಂಭವಾಗಿತ್ತು. ಪಂಜಾಬ್ ನ್ಯಾಷನಲ್ ಬ್ಯಾಂಕ್, ಜಮ್ಮು ಆ್ಯಂಡ್ ಕಾಶ್ಮೀರ ಬ್ಯಾಂಕ್ ಮತ್ತು ವಾಯ್ ಇಎಸ್ ಬ್ಯಾಂಕ್ ನ ಬ್ರ್ಯಾಂಚಸ್ ಗಳ ಮೂಲಕ ದೇಶದ 32 ರಾಜ್ಯಗಳಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು ಎಂದು ರಾಜ್ಯಪಾಲರ ಕಚೇರಿ ವಕ್ತಾರ ತಿಳಿಸಿದ್ದಾರೆ. ಪ್ರತಿದಿನ 1,200 ಜನರು ನೋಂದಣಿ ಮಾಡಿಕೊಂಡಿದ್ದು, ಉತ್ತರ ಪ್ರದೇಶ, ಮಹಾರಾಷ್ಟ್ರ, ಪಂಜಾಬ್, ಮಧ್ಯಪ್ರದೇಶ, ಗುಜರಾತ್, ದೆಹಲಿ, ರಾಜಸ್ಥಾನ ಮತ್ತು ಹರ್ಯಾಣದಿಂದ ಹೆಚ್ಚಿನ ಜನರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಯಾತ್ರಿಕರಿಗೆ ಎಲ್ಲ ರೀತಿಯಿಂದಲೂ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ, ಯಾತ್ರಿಕರು ಯಾವುದೇ ಕಾರಣಕ್ಕೂ ಎಜೆಂಟರ್ ಬಳಿ ನೋಂದಣಿ ಮಾಡಿಕೊಂಡು ಮೋಸ ಹೋಗಬಾರದು. ಅಧಿಕೃತವಾಗಿ ಗುರುತಿಸಿರುವ ಬ್ಯಾಂಕ್ ಬ್ರ್ಯಾಂಚ್ ಗಳಲ್ಲಿ ಮಾತ್ರ ಯಾತ್ರೆಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಅಮರನಾಥ ದೇವಸ್ಥಾನ ಕಮೀಟಿ ಸಿಇಒ ಉಮಂಗ್ ನರೂಲ್ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search