• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರೇಕೆ ಆರೆಸ್ಸೆಸ್ ಮುಖಂಡರನ್ನು ಭೇಟಿ ಮಾಡಿದ್ದು ಗೊತ್ತಾ?

TNN Correspondent Posted On June 27, 2018
0


0
Shares
  • Share On Facebook
  • Tweet It

ಲಖನೌ: ಯೋಗಿ ಆದಿತ್ಯನಾಥರು ಯಾವುದಾದರೂ ನಿರ್ಧಾರ ಕೈಗೊಳ್ಳಲು ಮುಂದಾದರೆ, ಯಾವುದೇ ನಡೆ ಇಡಲು ಮನಸ್ಸು ಮಾಡಿದರೆ ಇಡೀ ರಾಜ್ಯ ಏಕೆ, ದೇಶವೇ ಗಮನಹರಿಸುತ್ತದೆ. ಇತ್ತೀಚಿಗಷ್ಟೇ ಯೋಗಿ ಆದಿತ್ಯನಾಥರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದು ಖಚಿತ ಎಂದು ಹೇಳಿದ್ದು ಹಿಂದೂಗಳಲ್ಲಿ ಆಸೆ ಚಿಗುರಿತ್ತು.

ಈಗ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಭೈಯಾಜಿ ಜೋಷಿ, ಜಂಟಿ ಪ್ರಧಾನ ಕಾರ್ಯದರ್ಶಿ ಕೃಷ್ಣಗೋಪಾಲ್ ಅವರನ್ನು ಯೋಗಿ ಆದಿತ್ಯನಾಥರು ಭೇಟಿಯಾಗಿ ಚರ್ಚೆ ಮಾಡಿದ್ದಾರೆ. ಅಲ್ಲದೆ ಹಲವು ವಿಷಯಗಳ ಕುರಿತಾಗಿ ಚರ್ಚೆ ಮಾಡಿದ್ದಾರೆ ಎಂದು ತಿಳಿದುಬಂದಿದ್ದು ಕುತೂಹಲ ಮೂಡಿಸಿದೆ.

ಮುಂದಿನ ವರ್ಷ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಘಟನೆ, ಸಹಕಾರ, ದಲಿತರು ಹಾಗೂ ಮುಸ್ಲಿಮರ ಒಗ್ಗೂಡಿಸಿ ಪಕ್ಷಕ್ಕೆ ಬೆಂಬಲ ಯಾಚನೆ ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೆ ಮುಂದಿನ ವರ್ಷ ಅಲಹಾಬಾದ್ ನಲ್ಲಿ ಕುಂಭಮೇಳ ನಡೆಯುವುದರಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ ಸುಮಾರು 100ಕ್ಕೂ ಅಧಿಕ ಮುಖಂಡರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದ್ದಾರೆ. ಈ ಬಾರಿ ಕುಂಭಮೇಳ ಅದ್ಧೂರಿಯಾಗಿ ಸಹ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ರಾಮಮಂದಿರ ನಿರ್ಮಾಣದ ಕುರಿತು ಯೋಗಿ ಆದಿತ್ಯನಾಥರು ಉಲ್ಲೇಖಿಸಿದ್ದು, ಈಗ ಆರೆಸ್ಸೆಸ್ ಮುಖಂಡರನ್ನು ಸಹ ಭೇಟಿಯಾಗಿರುವುದು ಕುತೂಹಲ ಕೆರಳಿಸಿದೆ. ರಾಮಮಂದಿರ ನಿರ್ಮಾಣದ ಕುರಿತು ಸಹ ಯೋಗಿ ಆದಿತ್ಯನಾಥರು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search