• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸರ್ಜಿಕಲ್ ಸ್ಟ್ರೈಕ್ ಸಾಕ್ಷ್ಯ ಕೇಳಿದ ಅರವಿಂದ ಕೇಜ್ರಿವಾಲ್ ಎಲ್ಲಿ ಅಡಗಿ ಕುಳಿತಿದ್ದಾರೆ? ಏನೆನ್ನುತ್ತಾರೆ?

ವಿಶಾಲ್ ಗೌಡ ಕುಶಾಲನಗರ Posted On June 28, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ, ಎನ್ಡಿಎ ಸರ್ಕಾರ ಹಾಗೂ ಭಾರತೀಯ ಸೈನ್ಯ ಎಂದರೆ ಈ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮುಲಾಯಂ ಸಿಂಗ್ ಯಾದವ್, ಲಾಲೂ ಪ್ರಸಾದ್ ಯಾದವ್, ಅಖಿಲೇಶ್ ಯಾದವ್, ಸಿದ್ದರಾಮಯ್ಯ, ದೇವೇಗೌಡ, ಪಿಣರಾಯಿ ವಿಜಯನ್… ಒಬ್ಬರಲ್ಲ ಇಬ್ಬರಲ್ಲ, ಇವರೆಲ್ಲರಿಗೂ ಏನೋ ಒಂದು ಅಸಡ್ಡೆ. ಹಾಗಾಗಿ ಇವರು ಈ ಮೇಲಿನ ಎಲ್ಲ ಅಂಶಗಳ ಕುರಿತು ವಿರೋಧ ವ್ಯಕ್ತಪಡಿಸುತ್ತಾರೆ. ಕೊಂಕು ನುಡಿಯುತ್ತಾರೆ.

2016ರಲ್ಲಿ ನರೇಂದ್ರ ಮೋದಿ ಅವರು ನೋಟು ನಿಷೇಧ ನಿರ್ಧಾರ ಕೈಗೊಂಡಾಗ ಇಡೀ ದೇಶದ ಜನ ನಿರ್ಧಾರ ಕೈಗೊಂಡು ಬ್ಯಾಂಕ್ ಎದುರು ನಿಂತಿದ್ದರೆ. ಈ ಸೋ ಕಾಲ್ಡ್ ಮುಖಂಡರು ಮಾತ್ರ ನಿರ್ಧಾರ ವಿರೋಧಿಸಿದರು. ದೇಶಾದ್ಯಂತ 17 ತೆರಿಗೆ ಇದ್ದವು. ದಲ್ಲಾಳಿಗಳ ಉಪಟಳ ಇತ್ತು. ಇದನ್ನು ತಡೆಯಲು ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ಜಾರಿಗೊಳಿಸಿತು. ಇದಕ್ಕೂ ವಿರೋಧಿಸಿದರು ಈ ಮುಖಂಡರು. ಆದರೆ ಪ್ರಸ್ತುತ ಈ ನಿರ್ಧಾರಗಳಿಂದಲೇ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತಿದೆ.

ಇನ್ನು ಸೈನ್ಯದ ಬಗ್ಗೆಯೂ ಇವರು ಮಾತನಾಡುತ್ತಾರೆ. ಭಾರತೀಯ ಸೈನಿಕರು ಅತ್ಯಾಚಾರಿಗಳು ಎನ್ನುತ್ತಾರೆ. ಮನೆಯ ಬಡತನ ಸಹಿಸದೆ, ನೌಕರಿಗಾಗಿ ಮಾತ್ರ ಸೇನೆ ಸೇರುತ್ತಾರೆ ಅಂತಾರೆ. ಭಾರತೀಯ ಸೈನಿಕರ ನಿಷ್ಠೆಯನ್ನೇ ಪ್ರಶ್ನಿಸುವವರಿದ್ದಾರೆ.

ಇದೇ ರೀತಿ 2016ರಲ್ಲಿ ಭಾರತೀಯ ಸೈನ್ಯ ಸರ್ಜಿಕಲ್ ಸ್ಟ್ರೈಕ್ ಕೈಗೊಂಡಿತು. ನರೇಂದ್ರ ಮೋದಿ ಅವರು ಇಂಥದ್ದೊಂದು ನಿರ್ಧಾರದ ಹಿಂದೆ ಇದ್ದರು. ಇಡೀ ರಾತ್ರಿ ನರೇಂದ್ರ ಮೋದಿ ನಿದ್ದೆ ಮಾಡದೆ, ಸರ್ಜಿಕಲ್ ಸ್ಟ್ರೈಕ್ ಯಶಸ್ವಿಯಾಯಿತು ಎಂದಾಗಲೇ ಮೋದಿ ಮಲಗಿದ್ದರು ಎಂಬುದು ಬಳಿಕ ತಿಳಿಯಿತು. ಅಂದು ಭಾರತೀಯ ಯೋಧರು ಬರೋಬ್ಬರಿ 38 ಉಗ್ರರನ್ನು ಹತ್ಯೆ ಮಾಡಿ ಬಂದಿದ್ದರು. ಇಡೀ ವಿಶ್ವ ಮೋದಿ ಅವರನ್ನು ಶ್ಲಾಘಿಸಿದ ದಿನ,

ಹೀಗೆ ಒಂದೇ ಒಂದು ಸರ್ಜಿಕಲ್ ಸ್ಟ್ರೈಕ್ ನಿರ್ಧಾರದಿಂದ ಭಾರತೀಯ ಸೈನ್ಯ, ಎನ್ಡಿಎ ಹಾಗೂ ನರೇಂದ್ರ ಮೋದಿ ಅವರಿಗೆ ಖ್ಯಾತಿ ತಂದುಕೊಟ್ಟಿತು. ಆದರೆ ಈ ಮೇಲಿನ ಸೋ ಕಾಲ್ಡ್ ಮುಖಂಡರು ಮಾತ್ರ ಈ ನಿರ್ಧಾರದಿಂದ ಹೊಟ್ಟೆ ಉರಿದುಕೊಂಡರು. ಕುದ್ದು ಹೋದರು, ಹೊಟ್ಟೆ ಕಿಚ್ಚು ಪಟ್ಟರು.

ಇವರಲ್ಲೇ ಅರವಿಂದ ಕೇಜ್ರಿವಾಲ್ ಒಂದು ಹೆಜ್ಜೆ ಮುಂದೆ ಹೋಗಿ, ಸರ್ಜಿಕಲ್ ಸ್ಟ್ರೈಕ್ ನಡೆದೇ ಇಲ್ಲ, ಹಾಗೊಂದು ವೇಳೆ ನಡೆದಿದ್ದರೆ ಕೇಂದ್ರ ಸರ್ಕಾರ ವೀಡಿಯೋ ತೋರಿಸಲಿ ಎಂದು ಬೊಬ್ಬೆ ಹಾಕಿದರು. ಭಾರತೀಯ ಶೌರ್ಯವನ್ನೇ ಪ್ರಶ್ನಿಸಿದರು.

ಆದರೆ ಈಗ ಅಂದು ಭಾರತೀಯ ಸೈನ್ಯ ಮಾಡಿದ ಸರ್ಜಿಕಲ್ ಸ್ಟ್ರೈಕ್ ವೀಡಿಯೋ ಬಹಿರಂಗವಾಗಿದೆ. ಸೇನೆಯ ಪ್ರಮುಖ ಯೋಧರೆ ಇದು ಸರ್ಜಿಕಲ್ ಸ್ಟ್ರೈಕ್ ವೀಡಿಯೋ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಅಂದು ಬಾಯಿಬಿಟ್ಟಿದ್ದ ಅರವಿಂದ ಕೇಜ್ರಿವಾಲ್ ಈಗ ಮಗುಮ್ಮಾಗಿದ್ದಾರೆ. ಒಂದೇ ಒಂದು ಮಾತಾಡಿಲ್ಲ. ಹೇಳಿ ಇಂಥವರ ಇಬ್ಬಂದಿತನಕ್ಕೆ ಏನು ಹೇಳೋದು?

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
ವಿಶಾಲ್ ಗೌಡ ಕುಶಾಲನಗರ November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
ವಿಶಾಲ್ ಗೌಡ ಕುಶಾಲನಗರ October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search