• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾರ್ವಜನಿಕರ ದೂರಿಗೆ ಸೂಕ್ಷ್ಮವಾಗಿ ಪ್ರತಿಕ್ರಿಯಿಸಿ ಎಂದು ಪೊಲೀಸರಿಗೆ ಉತ್ತಮ ಸಲಹೆ ನೀಡಿದ ಫಡ್ನವೀಸ್!

TNN Correspondent Posted On June 28, 2018
0


0
Shares
  • Share On Facebook
  • Tweet It

ಮುಂಬೈ: ಪೊಲೀಸರು ಎಂದರೆ ಸಾರ್ವಜನಿಕರ ದೂರುಗಳಿಗೆ ಕಿವಿಗೊಡದವರು, ರಾಜಕಾರಣಿಗಳು ಹಾಗೂ ಹಿರಿಯ ಅಧಿಕಾರಿಗಳು ಹೇಳಿದ ಹಾಗೆ ಕೇಳಿಕೊಂಡು ಇರುವವರು ಹಾಗೂ ಸಾರ್ವಜನಿಕರ ರಕ್ಷಣೆ ಎಂದರೆ ಅಸಡ್ಡೆಯಾಗಿ ವರ್ತಿಸುವವರು ಎಂಬುದು ತುಂಬ ಜನರ ಆರೋಪ ಹಾಗೂ ಸಾರ್ವಕಾಲಿಕ ಟೀಕೆ.

ಆದರೆ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ ಪೊಲೀಸರಿಗೆ ಕಿವಿಮಾತು ಹೇಳಿದ್ದು, ಸಾರ್ವಜನಿಕರು ನೀಡು ದೂರುಗಳಿಗೆ ಸೂಕ್ಷ್ಮವಾಗಿ ವರ್ತಿಸಿ. ಅವರಿಗೆ ಸೂಕ್ತವಾಗಿ ಭದ್ರತೆ ನೀಡಿ ಎಂದು ಸಲಹೆ ನೀಡುವ ಮೂಲಕ ಮೇಲ್ಪಂಕ್ತಿ ಹಾಕಿದ್ದಾರೆ.

ಮುಂಬೈನ ಕಮಿಷನರ್ ಪೊಲೀಸ್ ಠಾಣೆಯಲ್ಲಿ ಡಯಲ್ 100 ಹಲವು ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಫಡ್ನವೀಸ್, ಸಾರ್ವಜನಿಕರು ಯಾವುದೇ ದೂರು ಹಾಗೂ ಅಭದ್ರತೆ ಕುರಿತು ಮಾಹಿತಿ ನೀಡಲು ಪೊಲೀಸ್ ಠಾಣೆಗೆ ಬಂದಾಗ ಅವರೊಂದಿಗೆ ಕಠೋರವಾಗಿ ವರ್ತಿಸಬೇಡಿ. ಸೂಕ್ಷ್ಮವಾಗಿ ವರ್ತಿಸಿ, ಅವರ ದೂರು ಆಲಿಸಿ ಸಮಸ್ಯೆ ಬಗೆಹರಿಸಿ ಎಂದು ಸಲಹೆ ನೀಡಿದ್ದಾರೆ.

ಡಯಲ್ 100 ಯೋಜನೆಯು ಸಾರ್ವಜನಿಕ ಸ್ನೇಹಿಯಾಗಿ ಕಾರ್ಯನಿರ್ವಹಿಸಲಿದ್ದು, ಪೊಲೀಸ್ ಕಂಟ್ರೋಲ್ ರೂಮ್ ಕಾರ್ಯಕ್ಷಮತೆ ಹೆಚ್ಚಿಸಲಿದೆ. ಯಾರೇ ದೂರು ಹೊತ್ತು ತಂದರೂ, ಕರೆ ಮಾಡಿ ಮಾಹಿತಿ ನೀಡಿದರೂ ಸೂಕ್ಷ್ಮವಾಗಿ ಪರಿಗಣಿಸಿ, ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಫಡ್ನವೀಸ್ ಪೊಲೀಸರಿಗೆ ಸೂಚಿಸಿದ್ದಾರೆ.

ಯಾವಾಗಲೂ ಪೊಲೀಸರು ಎಂದರೆ ತಮ್ಮ ಸೇವಕರೆಂದು ತಿಳಿದುಕೊಂಡಿರುವ, ಅವರ ಜತೆ ಹಾಗೆಯೇ ವರ್ತಿಸುವ ರಾಜಕಾರಣಿಗಳಿದ್ದಾರೆ. ಆದರೆ ಮುಖ್ಯಮಂತ್ರಿಯಂಥ ಮುಖ್ಯಮಂತ್ರಿಯೇ ಪೊಲೀಸರು ಸಾರ್ವಜನಿಕರ ಜತೆ ಸೂಕ್ಷ್ಮವಾಗಿ ವರ್ತಿಸಿ, ಅವರ ಸಮಸ್ಯೆ ಬಗೆಹರಿಸಿ ಎಂದು ಹೇಳಿರುವುದು ಉತ್ತಮ ಬೆಳವಣಿಗೆಯಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search