• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉರ್ದುವಿನಲ್ಲಿ ರಾಮಾಯಣ ಬರೆದ ಈ ಮುಸ್ಲಿಂ ಮಹಿಳೆ ಹಿಂದೂಗಳ ಹೃದಯವನ್ನೂ ಗೆದ್ದಳು!

TNN Correspondent Posted On July 1, 2018


  • Share On Facebook
  • Tweet It

ದೇಶದಲ್ಲಿ ಹಿಂದೂಗಳು ಎಂದರೆ ದ್ವೇಷ ಸಾಧಿಸುವ, ಲವ್ ಜಿಹಾದ್ ಮೂಲಕ ಹಿಂದೂ ಧರ್ಮೀಯರನ್ನು ಮತಾಂತರ ಮಾಡುವ, ಗಲಭೆಗೆ ಪ್ರಚೋದಿಸುವ ಇಸ್ಲಾಂ ಮೂಲಭೂತವಾದಿಗಳಿದ್ದಾರೆ. ಅಲ್ಲದೆ ಹಿಂದೂ ಧರ್ಮಗ್ರಂಥಗಳನ್ನು ದ್ವೇಷಿಸುವ, ರಾಮನೇ ಇಲ್ಲ ಎನ್ನುವ, ಹಿಂದೂಗಳು ಕೋಮುವಾದಿಗಳು ಎನ್ನುವ ಮತಿಗೇಡಿಗಳೂ ಇದ್ದಾರೆ.

ಆದರೆ ಕೆಲವು ಮುಸ್ಲಿಮರಿಗೆ ಮಾತ್ರ ಹಿಂದೂ ಧರ್ಮ ಶಾಂತಿಯನ್ನು ಸಾರುವ ಹಾಗೂ ಅದನ್ನೇ ಪಾಲಿಸುವ, ಸೌಹಾರ್ದತೆ ಹೊಂದಿರುವ ರಾಷ್ಟ್ರ ಎಂಬುದು ಗೊತ್ತಾಗಿದೆ. ಅಲ್ಲದೆ ಅವರು ಹಿಂದೂಗಳ ಜತೆ ಉತ್ತಮವಾಗಿಯೂ ಇದ್ದಾರೆ, ನಮ್ಮ ಆಚರಣೆಗಳನ್ನೂ ಆಚರಿಸುತ್ತಾರೆ.

ಈಗ ಹಿಂದೂಗಳು, ಹಿಂದೂ ಧರ್ಮ ಸೌಹಾರ್ದದ ಸಂಕೇತ ಎಂಬುದು ಮತ್ತೊಮ್ಮೆ ಸಾಬೀತಾಗಿದ್ದು, ರಾಮ ಜನಿಸಿದ ನಾಡಾದ ಉತ್ತರ ಪ್ರದೇಶದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ರಾಮಾಯಣವನ್ನು ಉರ್ದು ಭಾಷೆಯಲ್ಲಿ ಬರೆಯುವ ಮೂಲಕ ಕೋಟ್ಯಂತರ ಹಿಂದೂಗಳ ಹೃದಯವನ್ನೂ ಗೆದ್ದಿದ್ದಾರೆ.

ಹೌದು, ಉತ್ತರ ಪ್ರದೇಶದ ಪ್ರೇಮ್ ನಗರದ ಡಾ.ಮಾಹಿ ತಲಾತ್ ಸಿದ್ಧಿಕಿ ಅವರು ಉರ್ದು ಭಾಷೆಯಲ್ಲಿ ರಾಮಾಯಣ ಪುಸ್ತಕ ಬರೆದಿದ್ದು, ಈಗ ಹಿಂದೂಗಳ ಮೆಚ್ಚುಗೆಗೆ ಪಾತ್ರವಾಗಿದೆ. ಮುಸ್ಲಿಮರು ಹಾಗೂ ಉರ್ದು ಭಾಷೆ ಬರುವವರಿಗೂ ರಾಮಾಯಣದ ಸಾರ ತಿಳಿಯಲಿ  ಎಂದು ಸಿದ್ಧಿಕಿ ಪುಸ್ತಕ ಬರೆದಿದ್ದು, ಇವರು ಇದಕ್ಕಾಗಿ ಒಂದೂವರೆ ವರ್ಷ ಸಮಯ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಾತನಾಡಿರುವ ಡಾ.ಮಾಹಿ ತಲಾತ್ ಸಿದ್ಧಿಕಿ, ರಾಮಾಯಣ ಪುಸ್ತಕದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವದ ಕುರಿತು ಉತ್ತಮ ಸಂದೇಶಗಳಿವೆ. ಪುಸ್ತಕ ಬರೆಯಲು ನಾನು ಮೂಲ ಪುಸ್ತಕವನ್ನು ಓದಿದೆ. ನನ್ನ ಮನಸ್ಸಲ್ಲಿ ಶಾಂತಿ ಮೂಡಿತು. ಉತ್ತಮ ಸಂದೇಶಗಳಿವೆ ಎನಿಸಿತು. ಹಾಗಾಗಿ ಉರ್ದುವಿನಲ್ಲಿ ಬರೆದೆ. ಎಲ್ಲರೂ ಪುಸ್ತಕ ಓದಬೇಕು ಎಂದಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search