• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉರ್ದುವಿನಲ್ಲಿ ರಾಮಾಯಣ ಬರೆದ ಈ ಮುಸ್ಲಿಂ ಮಹಿಳೆ ಹಿಂದೂಗಳ ಹೃದಯವನ್ನೂ ಗೆದ್ದಳು!

TNN Correspondent Posted On July 1, 2018
0


0
Shares
  • Share On Facebook
  • Tweet It

ದೇಶದಲ್ಲಿ ಹಿಂದೂಗಳು ಎಂದರೆ ದ್ವೇಷ ಸಾಧಿಸುವ, ಲವ್ ಜಿಹಾದ್ ಮೂಲಕ ಹಿಂದೂ ಧರ್ಮೀಯರನ್ನು ಮತಾಂತರ ಮಾಡುವ, ಗಲಭೆಗೆ ಪ್ರಚೋದಿಸುವ ಇಸ್ಲಾಂ ಮೂಲಭೂತವಾದಿಗಳಿದ್ದಾರೆ. ಅಲ್ಲದೆ ಹಿಂದೂ ಧರ್ಮಗ್ರಂಥಗಳನ್ನು ದ್ವೇಷಿಸುವ, ರಾಮನೇ ಇಲ್ಲ ಎನ್ನುವ, ಹಿಂದೂಗಳು ಕೋಮುವಾದಿಗಳು ಎನ್ನುವ ಮತಿಗೇಡಿಗಳೂ ಇದ್ದಾರೆ.

ಆದರೆ ಕೆಲವು ಮುಸ್ಲಿಮರಿಗೆ ಮಾತ್ರ ಹಿಂದೂ ಧರ್ಮ ಶಾಂತಿಯನ್ನು ಸಾರುವ ಹಾಗೂ ಅದನ್ನೇ ಪಾಲಿಸುವ, ಸೌಹಾರ್ದತೆ ಹೊಂದಿರುವ ರಾಷ್ಟ್ರ ಎಂಬುದು ಗೊತ್ತಾಗಿದೆ. ಅಲ್ಲದೆ ಅವರು ಹಿಂದೂಗಳ ಜತೆ ಉತ್ತಮವಾಗಿಯೂ ಇದ್ದಾರೆ, ನಮ್ಮ ಆಚರಣೆಗಳನ್ನೂ ಆಚರಿಸುತ್ತಾರೆ.

ಈಗ ಹಿಂದೂಗಳು, ಹಿಂದೂ ಧರ್ಮ ಸೌಹಾರ್ದದ ಸಂಕೇತ ಎಂಬುದು ಮತ್ತೊಮ್ಮೆ ಸಾಬೀತಾಗಿದ್ದು, ರಾಮ ಜನಿಸಿದ ನಾಡಾದ ಉತ್ತರ ಪ್ರದೇಶದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ರಾಮಾಯಣವನ್ನು ಉರ್ದು ಭಾಷೆಯಲ್ಲಿ ಬರೆಯುವ ಮೂಲಕ ಕೋಟ್ಯಂತರ ಹಿಂದೂಗಳ ಹೃದಯವನ್ನೂ ಗೆದ್ದಿದ್ದಾರೆ.

ಹೌದು, ಉತ್ತರ ಪ್ರದೇಶದ ಪ್ರೇಮ್ ನಗರದ ಡಾ.ಮಾಹಿ ತಲಾತ್ ಸಿದ್ಧಿಕಿ ಅವರು ಉರ್ದು ಭಾಷೆಯಲ್ಲಿ ರಾಮಾಯಣ ಪುಸ್ತಕ ಬರೆದಿದ್ದು, ಈಗ ಹಿಂದೂಗಳ ಮೆಚ್ಚುಗೆಗೆ ಪಾತ್ರವಾಗಿದೆ. ಮುಸ್ಲಿಮರು ಹಾಗೂ ಉರ್ದು ಭಾಷೆ ಬರುವವರಿಗೂ ರಾಮಾಯಣದ ಸಾರ ತಿಳಿಯಲಿ  ಎಂದು ಸಿದ್ಧಿಕಿ ಪುಸ್ತಕ ಬರೆದಿದ್ದು, ಇವರು ಇದಕ್ಕಾಗಿ ಒಂದೂವರೆ ವರ್ಷ ಸಮಯ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಾತನಾಡಿರುವ ಡಾ.ಮಾಹಿ ತಲಾತ್ ಸಿದ್ಧಿಕಿ, ರಾಮಾಯಣ ಪುಸ್ತಕದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವದ ಕುರಿತು ಉತ್ತಮ ಸಂದೇಶಗಳಿವೆ. ಪುಸ್ತಕ ಬರೆಯಲು ನಾನು ಮೂಲ ಪುಸ್ತಕವನ್ನು ಓದಿದೆ. ನನ್ನ ಮನಸ್ಸಲ್ಲಿ ಶಾಂತಿ ಮೂಡಿತು. ಉತ್ತಮ ಸಂದೇಶಗಳಿವೆ ಎನಿಸಿತು. ಹಾಗಾಗಿ ಉರ್ದುವಿನಲ್ಲಿ ಬರೆದೆ. ಎಲ್ಲರೂ ಪುಸ್ತಕ ಓದಬೇಕು ಎಂದಿದ್ದಾರೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search