• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ಮೋದಿ ಫಿಟ್ನೆಸ್ ವೀಡಿಯೋಗೆ ಸರ್ಕಾರದಿಂದ ಹಣ ಖರ್ಚು ಮಾಡಿಲ್ಲ ಎಂದು ಸ್ಪಷ್ಟನೆ, ಶಶಿ ತರೂರ್ ಗೆ ಮುಖಭಂಗ!

TNN Correspondent Posted On July 3, 2018
0


0
Shares
  • Share On Facebook
  • Tweet It

ಈ ಕಾಂಗ್ರೆಸ್ಸಿಗರೇ ಹೀಗೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಬೇಕು ಎಂದರೆ ಯಾವ ದಾರಿಯನ್ನು ಬೇಕಾದರೂ ಅನುಸರಿಸುತ್ತಾರೆ. ಯಾವ ಮಟ್ಟಕ್ಕೂ ಇಳಿಯುತ್ತಾರೆ. ಇದಕ್ಕೆ ನೋಟು ನಿಷೇಧ, ಜಿಎಸ್ಟಿ ಜಾರಿ, ಮೋದಿ ಅವರ ವಿದೇಶ ಪ್ರವಾಸ, ತೊಡುವ ಬಟ್ಟೆ… ಹೀಗೆ ಎಲ್ಲ ವಿಷಯದಲ್ಲೂ ಕಾಂಗ್ರೆಸ್ಸಿಗರು ಮೋದಿ ಅವರನ್ನು ಸುಖಾಸುಮ್ಮನೆ ಟೀಕಿಸುತ್ತಾರೆ ಹಾಗೂ ವಾಸ್ತವ ಅರಿತಾಗ ಮುಖಭಂಗ ಅನುಭವಿಸುತ್ತಿದ್ದಾರೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ, ವ್ಯಾಯಾಮ ಮಾಡುವ ವೀಡಿಯೋ ಒಂದನ್ನು ಟ್ವಿಟರ್ ನಲ್ಲಿ ಅಪ್ ಲೋಡ್ ಮಾಡುವ ಮೂಲಕ ಹಲವರಿಗೆ ಫಿಟ್ನೆಸ್ ಚಾಲೆಂಜ್ ಹಾಕಿದ್ದರು. ವ್ಯಾಯಾಮ, ಯೋಗ ಮಾಡುವುದು ಒಳ್ಳೆಯದು ಎಂಬ ದೃಷ್ಟಿಯಿಂದ ಮೋದಿ ಅವರು ವೀಡಿಯೋ ಅಪ್ಲೋಡ್ ಮಾಡಿದ್ದರು. ಹಮ್ ಫಿಟ್ ತೋ ಇಂಡಿಯಾ ಫಿಟ್ ಅಭಿಯಾನಕ್ಕೆ ಮೋದಿ ಅವರು ಬೆಂಬಲಿಸಿದ್ದು ಸರಿಯಾಗಿಯೇ ಇತ್ತು.

ಆದರೆ ಮೋದಿ ಅವರು ಖ್ಯಾತಿ ಗಳಿಸುವುದು, ಜನರ ಮೆಚ್ಚುಗೆಗೆ ಪಾತ್ರರಾದರೆ ಕಾಂಗ್ರೆಸ್ಸಿಗರಿಗೆ ಸಹಿಸಲು ಆಗಲಿಲ್ಲ. ಇದೇ ಕಾರಣಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಅವರು ಮೋದಿ ವಿರುದ್ಧ ಮಾತನಾಡಿದರು. ನರೇಂದ್ರ ಮೋದಿ ಅವರು ಸರ್ಕಾರದ ಹಣದಲ್ಲಿ ಯೋಗ, ವ್ಯಾಯಾಮ ಮಾಡಿದ್ದಾರೆ. ಇದಕ್ಕೆ 35 ಲಕ್ಷ ರೂಪಾಯಿ ಖರ್ಚಾಗಿದೆ ಎಂದು ಆರೋಪಿಸಿದ್ದರು.

ಆದರೆ ಇದಕ್ಕೆ ಕೇಂದ್ರ ಕ್ರೀಡಾ ಖಾತೆ ರಾಜ್ಯ ಸಚಿವ ರಾಜ್ಯವರ್ಧನ್ ಸಿಂಗ್ ರಾಠೋಡ್ ಅವರು ಸ್ಪಷ್ಟನೆ ನೀಡಿದ್ದು, ಮೋದಿ ಅವರ ವೀಡಿಯೋಕ್ಕಾಗಿ ಸರ್ಕಾರ ಒಂದು ನಯಾಪೈಸೆಯೂ ಖರ್ಚು ಮಾಡಿಲ್ಲ. ಪ್ರಧಾನಮಂತ್ರಿ ಕಚೇರಿಯ ಫೋಟೋಗ್ರಾಫರ್ ಈ ವೀಡಿಯೋ ಮಾಡಿದ್ದು, 35 ಲಕ್ಷ ರೂಪಾಯಿ ಅಲ್ಲ, ಒಂದು ಲಕ್ಷ ರೂಪಾಯಿ ಸಹ ಖರ್ಚು ಮಾಡಿಲ್ಲ. ಶಶಿ ತರೂರ್ ಸತ್ಯದ ಮೇಲೆ ಹೊಡೆಯುವ ಹಾಗೆ ಸುಳ್ಳು ಹೇಳಿದ್ದಾರೆ ಎಂದು ಸಿಂಗ್ ಜಾಡಿಸಿದ್ದಾರೆ. ಇದು ಶಶಿ ತರೂರ್ ಅವರಿಗೆ ಮುಖಭಂಗವಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search