• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಮಾರಸ್ವಾಮಿಯವರೇ, 11 ವರ್ಷದ ಹಿಂದೆ ಈ ಮೈಸೂರು ಮಹಿಳೆಗೆ ನೀವು ನೀಡಿದ ಭರವಸೆ ನೆನಪಿದೆಯಾ?

TNN Correspondent Posted On July 5, 2018
0


0
Shares
  • Share On Facebook
  • Tweet It

ಹಿಂದೆ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ ಸ್ಥಾನಗಳನ್ನು ಪಡೆದರೂ, ಅದರ ಮುಖ್ಯಸ್ಥರೊಬ್ಬರು ಪ್ರಧಾನಿಯಾಗಬಹುದು ಎಂಬುದನ್ನು ಎಚ್.ಡಿ.ದೇವೇಗೌಡರು ತೋರಿಸಿಕೊಟ್ಟಿದ್ದರು. ಅದೇ ರೀತಿ, ತಂದೆಗೆ ತಕ್ಕ ಮಗನಂತೆ ವರ್ತಿಸಿದ ಕುಮಾರಸ್ವಾಮಿಯವರು ಅದೃಷ್ಟ ಹಾಗೂ ಕಾಂಗ್ರೆಸ್ಸಿನ ಬಲದಿಂದ ಜೆಡಿಎಸ್ ಕೇವಲ 38 ವಿಧಾನಸಭೆ ಸ್ಥಾನ ಪಡೆದರೂ ರಾಜ್ಯದಲ್ಲಿ ಚುಕ್ಕಾಣಿ ಹಿಡಿದಿದ್ದಾರೆ.

ಆದರೆ ಪ್ರಜಾಪ್ರಭುತ್ವದಲ್ಲಿ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುತ್ತಿರುವ ಕುಮಾರಸ್ವಾಮಿ ಅವರಿಗೆ ಈ ಹಿಂದೆಯೂ ಮುಖ್ಯಮಂತ್ರಿ ಆಗಿದ್ದಾಗ ನೀಡಿದ ಹಲವು ಭರವಸೆಗಳನ್ನು ನಾವೇ ನೆನಪಿಸಬೇಕಾಗಿರುವುದು ದುರಂತ. ಈಗ ಅಧಿಕಾರದಲ್ಲಿರುವುದರಿಂದ, ಇನ್ನಾದರೂ ಅವರು ನೀಡಿದ ಭರವಸೆ ಈಡೇರಿಸುತ್ತಾರಾ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಹೌದು, 11 ವರ್ಷದ ಹಿಂದೆ, ಅಂದರೆ 2007ರಲ್ಲಿ ಮೈಸೂರಿನ ಮೇದಾರ್ ಬ್ಲಾಕ್ ಗೆ ಕುಮಾರಸ್ವಾಮಿ ತೆರಳಿದ್ದರು. ಈ ವೇಳೆ ಒಂದು ಪುಟ್ಟ ಮನೆಯಲ್ಲಿ 12 ಜನ ವಾಸಿಸುತ್ತಿರುವುದನ್ನು ಕಂಡಿದ್ದ ಕುಮಾರಸ್ವಾಮಿ, ಅವರ ಪರಿಸ್ಥಿತಿ ನೋಡಿ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದರು. ಇದರಿಂದ ಮನೆಯೊಡತಿ ಲಕ್ಷ್ಮಮ್ಮ ಖುಷಿಯಾಗಿದ್ದರು. ಆದರೆ ಭರವಸೆ ನೀಡಿ 11 ವರ್ಷವಾದರೂ ಇದುವರೆಗೆ ಮನೆ ನಿರ್ಮಿಸಿಕೊಟ್ಟಿಲ್ಲ.

ನಾವು ಪುಟ್ಟ ಮನೆಯಲ್ಲಿ 12 ಜನ ವಾಸಿಸುತ್ತಿದ್ದು, ಮನೆಯಿಲ್ಲದೆ ಪರದಾಡುತ್ತಿದ್ದೇವೆ. 2007ರಲ್ಲಿ ಕುಮಾರಸ್ವಾಮಿಯವರು ನಮ್ಮ ಮನೆಗೆ ಬಂದು, ಮನೆ ನಿರ್ಮಿಸಿಕೊಡುವ ಭರವಸೆ ನೀಡಿದ್ದರು. ಇದರಿಂದ ನಾವು ನಮ್ಮ ಕಷ್ಟವೆಲ್ಲ ನೀಗಿತು ಎಂದು ಖುಷಿಪಟ್ಟಿದ್ದೆವು. ಆದರೆ ಇದುವರೆಗೂ ಮನೆ ನಿರ್ಮಿಸಿಕೊಟ್ಟಿಲ್ಲ ಎಂದು ಅಳಲು ತೋಡಿಕೊಳ್ಳುತ್ತಾರೆ ಲಕ್ಷ್ಮಮ್ಮ.

ಕುಮಾರಸ್ವಾಮಿಯವರೇ, 2006ರಲ್ಲಿ ನಿಮ್ಮ ಪಕ್ಷ ಬಹುಮತ ಪಡೆಯದಿದ್ದರೂ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದಿರಿ. ಯಡಿಯೂರಪ್ಪರಿಗೆ ಕೊಟ್ಟ ಮಾತಿನಂತೆ ಅಧಿಕಾರ ನೀಡದೆ ಜನರಿಂದ ತಿರಸ್ಕಾರಕ್ಕೀಡಾದಿರಿ. ಈಗಲೂ ಅದೃಷ್ಟದಿಂದಲೇ ಮುಖ್ಯಮಂತ್ರಿಯಾಗಿದ್ದೀರಿ, ಇನ್ನಾದರೂ ಜನರಿಗೆ ನೀಡಿರುವ ಭರವಸೆ ಈಡೇರಿಸಿ. ಇಲ್ಲವಾದರೆ ಮತ್ತೊಂದು ದಶಕ ನೀವು ಅಧಿಕಾರವಿಲ್ಲದೆ ಸುಮ್ಮನೆ ಕೂರಬೇಕಾದೀತು, ಎಚ್ಚರ!

0
Shares
  • Share On Facebook
  • Tweet It




Trending Now
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
  • Popular Posts

    • 1
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 2
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 3
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search