• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ಮುಸ್ಲಿಂ ಯುವತಿಯ ಕ್ರೀಡಾ ಸಾಧನೆಗೆ 5 ಲಕ್ಷ ರೂಪಾಯಿ ಕೊಡದೆ ಅನ್ಯಾಯ ಮಾಡಿತಲ್ಲ ಪಿಣರಾಯಿ ಸರ್ಕಾರ!

TNN Correspondent Posted On July 5, 2018
0


0
Shares
  • Share On Facebook
  • Tweet It

ದೇಶದಲ್ಲಿ ಮುಸ್ಲಿಮರು ಏಳಿಗೆ ಹೊಂದುತ್ತಿದ್ದಾರೆ. ಪರಿಸ್ಥಿತಿ ಬದಲಾಗಿದೆ. ಸಿನಿಮಾ, ಕ್ರೀಡೆ ಸೇರಿ ಹಲವು ಕ್ಷೇತ್ರಗಳಲ್ಲಿ ಮುಸ್ಲಿಂ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ತೊಂದರೆ ಆಗಬಾರದು ಎಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ನಿಷೇಧ ಕಾಯಿದೆ ಜಾರಿಗೆ ತರಲು ಸಹ ಮುಂದಾಗಿದೆ.

ಆದರೆ ಕೇರಳದ ಪಿಣರಾಯಿ ವಿಜಯನ್ ನೇತೃತ್ವದ ರಾಜ್ಯ ಸರ್ಕಾರ ಮಾತ್ರ ರಾಜ್ಯದಲ್ಲಿ ಕ್ರೀಡಾ ಸಾಧನೆ ಮೆರೆಯಲು ಉತ್ಸಾಹ ತೋರಿಸುತ್ತಿರುವ ಮುಸ್ಲಿಂ ಮಹಿಳೆಗೆ ಧನಸಹಾಯ ಮಾಡದೆ, ಅವರ ಕನಸನ್ನೇ ಕಮರಿಸುವ ಹಂತಕ್ಕೆ ತಂದುಬಿಟ್ಟಿದೆ. ಆ ಮೂಲಕ ಯುವತಿಯ ಅಸಮಾಧಾನಕ್ಕೆ ಕಾರಣವಾಗಿದೆ.

ಹೌದು, ಕೇರಳದಲ್ಲಿ ಭಾರತ ಎತ್ತುವ ಸ್ಪರ್ಧೆಯಲ್ಲಿ ಉತ್ತಮ ಹೆಸರು ಮಾಡಿರುವ ಮಜಿಜಿಯಾ ಭಾನು ಅವರು ಕಳೆದ ಮಾರ್ಚ್ ನಲ್ಲಿ ಕೇರಳದಲ್ಲಿ ಆಯೋಜಿಸಿದ್ದ ಆರ್ಮ್ ರೆಸ್ಲಿಂಗ್ ಸ್ಪರ್ಧೆಯಲ್ಲಿ ವಿಜೇತರಾಗಿದ್ದು, ಅಕ್ಟೋಬರ್ ನಲ್ಲಿ ಟರ್ಕಿಯಲ್ಲಿ ನಡೆಯಲಿರುವ ವಿಶ್ವ ಆರ್ಮ್ ರೆಸ್ಲಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.

ಅಷ್ಟೇ ಅಲ್ಲ, ಕಳೆದ ಮೇ ತಿಂಗಳಲ್ಲಿ ನಡೆದ ರಾಷ್ಟ್ರೀಯ ಆರ್ಮ್ ರೆಸ್ಲಿಂಗ್ ಚಾಂಪಿಯನ್ ಶಿಪ್ ನಲ್ಲೂ ಚಿನ್ನದ ಪದಕ ಪಡೆದಿದ್ದಾರೆ. ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಹಂಬಲ ಹೊಂದಿರುವ ಭಾನು, ಟರ್ಕಿಯಲ್ಲಿ ನಡೆಯುವ ಪಂದ್ಯಾವಳಿಗೆ ತೆರಳುವ ಇಚ್ಛೆ ವ್ಯಕ್ತಪಡಿಸಿದ್ದಾರೆ.

ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲು ಭಾನು ಅವರಿಗೆ 5 ಲಕ್ಷ ರೂಪಾಯಿ ಖರ್ಚಾಗುತ್ತದೆ, ಅಲ್ಲದೆ, ಜುಲೈ 10ರೊಳಗೆ ಅವರು ಟರ್ಕಿಗೆ 2 ಲಕ್ಷ ರೂಪಾಯಿ ಪಾವತಿ ಮಾಡಬೇಕು. ಈ ಕುರಿತು ಕೇರಳ ಕ್ರೀಡಾ ಸಚಿವರಿಗೆ ಮನವಿ ಮಾಡಿದರೆ, ಅವರು ಶೀಘ್ರದಲ್ಲೇ ಇಷ್ಟು ಹಣ ನೀಡಲು ಆಗುವುದಿಲ್ಲ ಎಂದು ಹೇಳಿದ್ದಾರೆ, ಐದಾರು ಕಂಪನಿಗಳು ಹಣ ನೀಡಲು ಮುಂದೆ ಬಂದವಾದರೂ, ಕೊನೇ ಕ್ಷಣದಲ್ಲಿ ನೀಡಲಿಲ್ಲ, ಅತ್ತ ಸರ್ಕಾರವೂ ನೆರವಾಗುತ್ತಿಲ್ಲ ಎಂದು ಅಳಲು ತೋಡಿಕೊಳ್ಳುತ್ತಾರೆ ಭಾನು.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search