• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

 ವಿವಾಹೇತರ ಸಂಬಂಧದ ಬಗ್ಗೆ ಡಿಗ್ರಿ ಪಾಠ, ಸುದ್ದಿಯಲ್ಲಿದೆ ಮಂಗಳೂರು ವಿವಿ

Tulunadu News Posted On July 11, 2018


  • Share On Facebook
  • Tweet It

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಪಠ್ಯಪುಸ್ತಕ ಪಾಠವೊಂದರ ವಿಚಾರದಲ್ಲಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದೆ. ದ್ವಿತೀಯ ಬಿಕಾಂ ವಿದ್ಯಾರ್ಥಿಗಳ ಕನ್ನಡ ಪಠ್ಯದಲ್ಲಿ ಅಶ್ಲೀಲತೆ ಬಿಂಬಿಸುವ ಕಥೆಯೊಂದನ್ನು ಪಠ್ಯವಾಗಿ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ.

ದ್ವಿತೀಯ ಬಿಕಾಂ ಪದವಿಗೆ ಅಳವಡಿಸಿರುವ ಕನ್ನಡ ಪಠ್ಯ ಪುಸ್ತಕ ‘ನುಡಿ ನೂಪುರ’ದಲ್ಲಿ ‘ಮಗುವಿನ ತಂದೆ ‘ ಎಂಬ ಪಾಠ ಈಗ ವಿವಾದಕ್ಕೆ ಗುರಿಯಾಗಿದೆ. ಇದರಲ್ಲಿ ಆಶ್ಲೀಲತೆಯನ್ನು ಬಿಂಬಿಸಲಾಗಿದೆ ಎಂದು ಭಾರೀ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ಈ ಪಾಠದಲ್ಲಿ ಅಕ್ರಮ ಸಂಬಂಧದಲ್ಲಿ ತಪ್ಪಿಲ್ಲ ಎಂಬಂತೆ ಬಿಂಬಿಸುವ ಕಥೆಯನ್ನು ಸೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ, ಈ ಪಾಠದಲ್ಲಿ ವಿವಾಹೇತರ ಸಂಬಂಧವನ್ನು ಲಘು ಭಾಷೆಯಲ್ಲಿ ವಿವರಿಸಿದ್ದು, ಇದನ್ನು ಬೋಧಿಸುವ ಉಪನ್ಯಾಸಕರಿಗೆ ಮುಜುಗರ ಸೃಷ್ಟಿಸುವಂತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ .ವೈದ್ಯರೊಬ್ಬರ ಪತ್ನಿಗೆ ಪತಿಯಿಂದ ಶಾರೀರಿಕ ಸುಖ ದೊರೆಯದ ಕಾರಣ ಅನ್ಯ ಯುವಕನೊಂದಿಗೆ ಅನೈತಿಕ ಸಂಬಂಧವನ್ನು ಹೊಂದುತ್ತಾಳೆ. ಬಳಿಕ ಈ ಅನೈತಿಕ ಸಂಬಂಧದಿಂದ ಮಗುವೊಂದನ್ನು ಪಡೆಯುತ್ತಾಳೆ. ಆ ಮಗು ತನ್ನ ಗಂಡನದೇ ಅಥವಾ ಅನೈತಿಕ ಸಂಬಂಧದಿಂದ ಹುಟ್ಟಿದ್ದೇ ಎನ್ನುವ ಗೊಂದಲದಲ್ಲಿರುವ ಹೆಣ್ಣಿನ ಕಥೆ ಇದಾಗಿದೆ.

ಈ ಕಥೆಯಲ್ಲಿ ಯುವಕ ಮತ್ತು ವೈದ್ಯನ ಪತ್ನಿ ಮಧ್ಯೆ ನಡೆಯುವ ಮಿಲನ ಕ್ರಿಯೆಯನ್ನು ಅಸಹ್ಯ ರೀತಿಯಲ್ಲಿ ವಿವರಿಸಲಾಗಿದೆ. ಹದಿಹರೆಯದ ವಿದ್ಯಾರ್ಥಿಗಳ ಮುಂದೆ ಇದನ್ನು ಪಾಠ ಮಾಡಬೇಕಾದ ಅನಿವಾರ್ಯ ಉಪನ್ಯಾಸಕರದ್ದಾಗಿದೆ. ಮಟ್ಟಾರು ವಿಠಲ ಹೆಗ್ಡೆ ಎಂಬುವವರು 1939ರಲ್ಲಿ ಬರೆದ ಈ ಕಥೆಯನ್ನು ಈಗ ಪಠ್ಯವಾಗಿ ಸೇರಿಸಿಕೊಂಡಿದ್ದರ ಉದ್ದೇಶವೇನು ಅನ್ನೋ ಪ್ರಶ್ನೆಯನ್ನು ಉಪನ್ಯಾಸಕರು ಮುಂದಿಟ್ಟಿದ್ದಾರೆ.
ವಿವಾಹೇತರ ಸಂಬಂಧದ ಚಿತ್ರಣ ತಿಳಿಸಿ, ಯಾವ ರೀತಿ ವಿಕೃತಿಯನ್ನು ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಹೇರುತ್ತಿದ್ದಾರೆಂದು ಪ್ರಶ್ನಿಸಿದ್ದಾರೆ. ವಿಶ್ವ ವಿದ್ಯಾನಿಲಯದ ಪಠ್ಯ ಈಗಷ್ಟೆ ಮುದ್ರಣ ಆಗಿ ವಿದ್ಯಾರ್ಥಿಗಳ ಕೈ ಸೇರಿದ್ದು, ಕೂಡಲೇ ಅದನ್ನು ಹಿಂಪಡೆಯಬೇಕೆಂಬ ಆಗ್ರಹ ವ್ಯಕ್ತವಾಗಿದೆ.ಗಂಡು- ಹೆಣ್ಣಿನ ಸಂಬಂಧದ ಚಿತ್ರಣದ ಜೊತೆಗೆ ಅಪರಿಚಿತನಿಂದ ಆದ ಗರ್ಭದಾನವನ್ನು ಒಬ್ಬ ವೈದ್ಯನಾಗಿ ಒಪ್ಪಿಕೊಳ್ಳುವ ಪ್ರಗತಿಪರ ಚಿಂತನೆ ಮತ್ತು ಆಧುನಿಕ ಮನೋಭಾವವನ್ನು ಲೇಖಕರು ವಿವರಿಸಿದ್ದಾರೆ ಎಂದು ಪುಸ್ತಕದಲ್ಲಿ ತಿಳಿಸಲಾಗಿದೆ.

ಈ ಹಿಂದೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ‘ಯುದ್ಧ’ ಎನ್ನುವ ಲೇಖನವನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸಲಾಗಿತ್ತು. ಅದರಲ್ಲಿ ಸೈನಿಕರನ್ನು ಶತ್ರುಗಳಂತೆ ಬಿಂಬಿಸಿದ ಆರೋಪ ಬಂದು, ಮಂಗಳೂರು ವಿಶ್ವವಿದ್ಯಾನಿಲಯ ವಿವಾದಕ್ಕೆ ಕಾರಣವಾಗಿತ್ತು. ಈಗ ‘ಮಗುವಿನ ತಂದೆ’ ಎಂಬ ಲೇಖನವನ್ನು ಪಠ್ಯವಾಗಿ ಅಳವಡಿಸಿ, ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search