• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

 ವಿವಾಹೇತರ ಸಂಬಂಧದ ಬಗ್ಗೆ ಡಿಗ್ರಿ ಪಾಠ, ಸುದ್ದಿಯಲ್ಲಿದೆ ಮಂಗಳೂರು ವಿವಿ

Tulunadu News Posted On July 11, 2018
0


0
Shares
  • Share On Facebook
  • Tweet It

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಪಠ್ಯಪುಸ್ತಕ ಪಾಠವೊಂದರ ವಿಚಾರದಲ್ಲಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದೆ. ದ್ವಿತೀಯ ಬಿಕಾಂ ವಿದ್ಯಾರ್ಥಿಗಳ ಕನ್ನಡ ಪಠ್ಯದಲ್ಲಿ ಅಶ್ಲೀಲತೆ ಬಿಂಬಿಸುವ ಕಥೆಯೊಂದನ್ನು ಪಠ್ಯವಾಗಿ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ.

ದ್ವಿತೀಯ ಬಿಕಾಂ ಪದವಿಗೆ ಅಳವಡಿಸಿರುವ ಕನ್ನಡ ಪಠ್ಯ ಪುಸ್ತಕ ‘ನುಡಿ ನೂಪುರ’ದಲ್ಲಿ ‘ಮಗುವಿನ ತಂದೆ ‘ ಎಂಬ ಪಾಠ ಈಗ ವಿವಾದಕ್ಕೆ ಗುರಿಯಾಗಿದೆ. ಇದರಲ್ಲಿ ಆಶ್ಲೀಲತೆಯನ್ನು ಬಿಂಬಿಸಲಾಗಿದೆ ಎಂದು ಭಾರೀ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ಈ ಪಾಠದಲ್ಲಿ ಅಕ್ರಮ ಸಂಬಂಧದಲ್ಲಿ ತಪ್ಪಿಲ್ಲ ಎಂಬಂತೆ ಬಿಂಬಿಸುವ ಕಥೆಯನ್ನು ಸೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ, ಈ ಪಾಠದಲ್ಲಿ ವಿವಾಹೇತರ ಸಂಬಂಧವನ್ನು ಲಘು ಭಾಷೆಯಲ್ಲಿ ವಿವರಿಸಿದ್ದು, ಇದನ್ನು ಬೋಧಿಸುವ ಉಪನ್ಯಾಸಕರಿಗೆ ಮುಜುಗರ ಸೃಷ್ಟಿಸುವಂತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ .ವೈದ್ಯರೊಬ್ಬರ ಪತ್ನಿಗೆ ಪತಿಯಿಂದ ಶಾರೀರಿಕ ಸುಖ ದೊರೆಯದ ಕಾರಣ ಅನ್ಯ ಯುವಕನೊಂದಿಗೆ ಅನೈತಿಕ ಸಂಬಂಧವನ್ನು ಹೊಂದುತ್ತಾಳೆ. ಬಳಿಕ ಈ ಅನೈತಿಕ ಸಂಬಂಧದಿಂದ ಮಗುವೊಂದನ್ನು ಪಡೆಯುತ್ತಾಳೆ. ಆ ಮಗು ತನ್ನ ಗಂಡನದೇ ಅಥವಾ ಅನೈತಿಕ ಸಂಬಂಧದಿಂದ ಹುಟ್ಟಿದ್ದೇ ಎನ್ನುವ ಗೊಂದಲದಲ್ಲಿರುವ ಹೆಣ್ಣಿನ ಕಥೆ ಇದಾಗಿದೆ.

ಈ ಕಥೆಯಲ್ಲಿ ಯುವಕ ಮತ್ತು ವೈದ್ಯನ ಪತ್ನಿ ಮಧ್ಯೆ ನಡೆಯುವ ಮಿಲನ ಕ್ರಿಯೆಯನ್ನು ಅಸಹ್ಯ ರೀತಿಯಲ್ಲಿ ವಿವರಿಸಲಾಗಿದೆ. ಹದಿಹರೆಯದ ವಿದ್ಯಾರ್ಥಿಗಳ ಮುಂದೆ ಇದನ್ನು ಪಾಠ ಮಾಡಬೇಕಾದ ಅನಿವಾರ್ಯ ಉಪನ್ಯಾಸಕರದ್ದಾಗಿದೆ. ಮಟ್ಟಾರು ವಿಠಲ ಹೆಗ್ಡೆ ಎಂಬುವವರು 1939ರಲ್ಲಿ ಬರೆದ ಈ ಕಥೆಯನ್ನು ಈಗ ಪಠ್ಯವಾಗಿ ಸೇರಿಸಿಕೊಂಡಿದ್ದರ ಉದ್ದೇಶವೇನು ಅನ್ನೋ ಪ್ರಶ್ನೆಯನ್ನು ಉಪನ್ಯಾಸಕರು ಮುಂದಿಟ್ಟಿದ್ದಾರೆ.
ವಿವಾಹೇತರ ಸಂಬಂಧದ ಚಿತ್ರಣ ತಿಳಿಸಿ, ಯಾವ ರೀತಿ ವಿಕೃತಿಯನ್ನು ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಹೇರುತ್ತಿದ್ದಾರೆಂದು ಪ್ರಶ್ನಿಸಿದ್ದಾರೆ. ವಿಶ್ವ ವಿದ್ಯಾನಿಲಯದ ಪಠ್ಯ ಈಗಷ್ಟೆ ಮುದ್ರಣ ಆಗಿ ವಿದ್ಯಾರ್ಥಿಗಳ ಕೈ ಸೇರಿದ್ದು, ಕೂಡಲೇ ಅದನ್ನು ಹಿಂಪಡೆಯಬೇಕೆಂಬ ಆಗ್ರಹ ವ್ಯಕ್ತವಾಗಿದೆ.ಗಂಡು- ಹೆಣ್ಣಿನ ಸಂಬಂಧದ ಚಿತ್ರಣದ ಜೊತೆಗೆ ಅಪರಿಚಿತನಿಂದ ಆದ ಗರ್ಭದಾನವನ್ನು ಒಬ್ಬ ವೈದ್ಯನಾಗಿ ಒಪ್ಪಿಕೊಳ್ಳುವ ಪ್ರಗತಿಪರ ಚಿಂತನೆ ಮತ್ತು ಆಧುನಿಕ ಮನೋಭಾವವನ್ನು ಲೇಖಕರು ವಿವರಿಸಿದ್ದಾರೆ ಎಂದು ಪುಸ್ತಕದಲ್ಲಿ ತಿಳಿಸಲಾಗಿದೆ.

ಈ ಹಿಂದೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ‘ಯುದ್ಧ’ ಎನ್ನುವ ಲೇಖನವನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸಲಾಗಿತ್ತು. ಅದರಲ್ಲಿ ಸೈನಿಕರನ್ನು ಶತ್ರುಗಳಂತೆ ಬಿಂಬಿಸಿದ ಆರೋಪ ಬಂದು, ಮಂಗಳೂರು ವಿಶ್ವವಿದ್ಯಾನಿಲಯ ವಿವಾದಕ್ಕೆ ಕಾರಣವಾಗಿತ್ತು. ಈಗ ‘ಮಗುವಿನ ತಂದೆ’ ಎಂಬ ಲೇಖನವನ್ನು ಪಠ್ಯವಾಗಿ ಅಳವಡಿಸಿ, ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search