• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಕ್ಷಿಣ ಕನ್ನಡ ಜಿಪಂನಲ್ಲಿ ಧೂಳು ಹಿಡಿಯುತ್ತಿವೆ ಅಂಗವಿಕಲರ ವಾಹನಗಳು!

Tulunadu News Posted On July 11, 2018
0


0
Shares
  • Share On Facebook
  • Tweet It

ಮಂಗಳೂರು: ರಾಜ್ಯ ಸರ್ಕಾರದಿಂದ ಅಂಗವಿಕಲರಿಗಾಗಿ ಮಂಜೂರಾಗಿರುವ ವಾಹನಗಳು ವಿತರಣೆಯಾಗದೇ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಧೂಳು ಹಿಡಿಯುತ್ತಿರುವುದು ಬೆಳಕಿಗೆ ಬಂದಿದೆ. ಜಿಲ್ಲೆಯ 91 ಅಂಗವಿಕಲರಿಗಾಗಿ ರಾಜ್ಯ ಸರ್ಕಾರದಿಂದ ವಾಹನಗಳೂ ಬಂದಿದ್ದರೂ ಅಧಿಕಾರಿಗಳ ಬೇಜವಾಬ್ದಾರಿಂದಾಗಿ ವಾಹನಗಳು ವಿತರಣೆಯಾಗದೇ ತುಕ್ಕು ಹಿಡಿಯುತ್ತಿವೆ.

ಜಿಲ್ಲೆಯ 91 ಫಲಾನುಭವಿಗಳಿಗೆ 2017-18 ರ ಸಾಲಿನಲ್ಲಿ 91 ದ್ವಿಚಕ್ರ ವಾಹನಗಳು ಮಂಜೂರಾಗಿ ಕಳೆದ ಮಾರ್ಚ್ ತಿಂಗಳಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಗೆ ಬಂದಿವೆ . ಆದರೆ ಅವುಗಳನ್ನು ಈ ವರೆಗೆ ವಿತರಿಸಲಾಗಿಲ್ಲ.ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದ ಕೆಳ ಅಂತಸ್ಥಿನಲ್ಲಿ ಈ ವಾಹನಗಳು ಧೂಳು ಹಿಡಿಯುತ್ತಿದ್ದು, ಮಳೆಗಾಲದ ಹಿನ್ನೆಲೆಯಲ್ಲಿ ಕೆಲ ವಾಹನಗಳು ತುಕ್ಕು ಹಿಡಿಯುತ್ತಿವೆ.

ಈ ದ್ವಿಚಕ್ರ ವಾಹನಗಳು ಇಲಾಖೆಗೆ ಬಂದ ಕಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಅವುಗಳ ವಿತರಣೆ ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ. ವಿಧಾನ ಸಭಾ ಚುನಾವಣೆಯ ಬಳಿಕ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ವಾಹನ ವಿತರಣೆಗೆ ಅಡ್ಡಿಯಾಗಿತ್ತು.ಆದರೆ ಎಲ್ಲಾ ಚುನಾವಣಾ ಪ್ರಕ್ರಿಯೆ ಮುಗಿದಿದೆ.ನೂತನ ಮೈತ್ರಿ ಸರ್ಕಾರ ರಚನೆಯಾಗಿದೆ ಆದರೂ ಫಲಾನುಭವಿಗಳಿಗೆ ಈ ದ್ವಿಚಕ್ರ ವಾಹನಗಳು ವಿತರಣೆಯಾಗಿಲ್ಲ. ಈ ವಾಹನಗಳನ್ನು ಜಿಲ್ಲಾ ಉಸ್ತುವಾರಿ ಸಚಿವರೇ ಫಲಾನುಭವಿಗಳಿಗೆ ವಿತರಿಸಬೇಕೆಂಬ ಅಧಿಕಾರಿಗಳ ಧೋರಣೆಯಿಂದಾಗಿ ಈ ವಾಹನಗಳು ಉಪಯೋಗಕ್ಕಿಲ್ಲದೇ ಧೂಳು ಹಿಡಿಯುತ್ತಿವೆ.

ಆದರೆ ಈ ವಾಹನಗಳತ್ತ ಅಧಿಕಾರಿಗಳೂ ತಲೆ ಕೆಡಿಸಿಕೊಂಡಿಲ್ಲ. ಜಿಲ್ಲಾಉಸ್ತುವಾರಿ ಸಚಿವರಿಗೆ ಈ ವಿಚಾರವೇ ಗೊತ್ತಿಲ್ಲ. ಅದರೆ ಅಂಗವಿಕಲ ಫಲಾನುಭವಿಗಳು ಮಾತ್ರ ವಾಹನಗಳಿಗಾಗಿ ಜಾತಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ. ಇನ್ನಾದರೂ ಸರ್ಕಾರ ಈ ವಾಹನಗಳ ವಿತರಣೆಗೆ ಗಮನ ಹರಿಸುವುದೋ ಕಾದು ನೋಡಬೇಕಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search