• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸಿಎಂ ಕುಮಾರಸ್ವಾಮಿಯವರೇ, ದೇವಾಲಯ ಸುತ್ತುತ್ತಲೇ ಇರುತ್ತೀರೋ? ಅಭಿವೃದ್ಧಿಯತ್ತ ಗಮನಹರಿಸುತ್ತೀರೋ?

ನವೀನ್ ಶೆಟ್ಟಿ ಮಂಗಳೂರು Posted On August 15, 2018
0


0
Shares
  • Share On Facebook
  • Tweet It

ಮೊದಲೇ ಹೇಳಿಬಿಡುತ್ತೇನೆ. ಯಾವುದೇ ರಾಜ್ಯದ ಮುಖ್ಯಮಂತ್ರಿಯಾದವರು ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ದೇವಾಲಯಗಳಿಗೆ ಭೇಟಿ ನೀಡುವುದೇ ಮುಖ್ಯಮಂತ್ರಿಯವರ ಕಾರ್ಯವಾಗಬಾರದು ಎಂಬುದು ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದು ಹಾಗೂ ಅದು ಆಡಳಿತಗಾರನ ಲಕ್ಷಣವೂ ಅಲ್ಲ.

ಅಷ್ಟಕ್ಕೂ ದೇವಾಲಯಗಳಿಗೆ ಭೇಟಿ ನೀಡುವುದನ್ನೂ ರಾಜಕೀಯ ಮಾಡಿದ್ದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು. ಬಿಡುವು ಸಿಕ್ಕಾಗಲೆಲ್ಲ ವಿದೇಶಕ್ಕೆ ಹೋಗುತ್ತಿದ್ದ ರಾಹುಲ್ ಗಾಂಧಿ ಗುಜರಾತ್ ಹಾಗೂ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೇ ಘೋಷಣೆಯಾಗುತ್ತಲೇ ದೇವಾಲಯ, ಮಸೀದಿ, ಚರ್ಚ್ ಹಾಗೂ ಮಠಗಳಿಗೆ ಭೇಟಿ ನೀಡುವ ಮೂಲಕ ಮತಬ್ಯಾಂಕ್ ರಾಜಕಾರಣ ಮಾಡಿದ್ದರು.

ಆದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದ ಬಳಿಕ ದೇವಾಲಯ ಸುತ್ತುತ್ತಿದ್ದಾರೆ. ಅದೂ ಎಡೆಬಿಡದೆ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಮೇ 23ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ ಇದುವರೆಗೆ ಸುಮಾರು 34 ದೇವಾಲಯಗಳಿಗೆ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕುಕ್ಕೇ ಸುಬ್ರಹ್ಮಣ್ಯ, ಧರ್ಮಸ್ಥಳ ಮಂಜುನಾಥೇಶ್ವರ, ಹರದನಹಳ್ಳಿಯ ಈಶ್ವರ ದೇವಾಲಯ ಸೇರಿ ಕುಮಾರಸ್ವಾಮಿಯವರು 34 ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠ, ಮಂಡ್ಯದ ಆಚಿ ಚುಂಚನಗಿರಿ, ಮೈಸೂರಿನ ಸುತ್ತೂರು ಮಠ ಸೇರಿ ಹಲವು ಮಠಗಳಿಗೆ ಕನಿಷ್ಠ ಆರು ಬಾರಿ ಭೇಟಿ ನೀಡಿದ್ದಾರೆ.

ಖಂಡಿತ ಮುಖ್ಯಮಂತ್ರಿಯವರು ಎಲ್ಲ ದೇವಾಲಯ ಹಾಗೂ ಮಠಗಳಿಗೆ ಭೇಟಿ ನೀಡಿ, ದೇವರ ಹಾಗೂ ಹಿರಿಯ ಆಶೀರ್ವಾದ ತೆಗೆದುಕೊಂಡು ಬರುವುದರಲ್ಲಿ ಯಾವುದೇ ಹುಳುಕಿಲ್ಲ. ಆದರೆ, ರಾಜ್ಯಾದ್ಯಂತ ಮಳೆ ಆವರಿಸಿದೆ. ಮಂಗಳೂರು, ಮಡಿಕೇರಿ, ಉತ್ತರ ಕನ್ನಡದ ಜನವಂತೂ ಅಕ್ಷರಶಃ ಮಳೆಯಿಂದ ನಲಗುತ್ತಿದ್ದಾರೆ. ಬೆಳೆ, ಮನೆ ಕಳೆದುಕೊಂಡು, ವಿದ್ಯುತ್ ಸಂಪರ್ಕವೂ ಇಲ್ಲದೆ ಪರದಾಡುತ್ತಿದ್ದಾರೆ. ಹೀಗಿದ್ದರೂ ಕುಮಾರಸ್ವಾಮಿಯವರು ಕ್ರಮ ಕೈಗೊಳ್ಳದೆ, ಬರೀ ದೇವಾಲಯ ಸುತ್ತಿದರೆ ಹೇಗೆ ಎಂಬ ಮಾತು ಕೇಳಿಬರುವುದು ಸಹಜ.

ಅಷ್ಟೇ ಅಲ್ಲ, ಸಾಲಮನ್ನಾ ಘೋಷಣೆಯಾದರೂ ಹಲವು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಬಹುದೊಡ್ಡ ಜವಾಬ್ದಾರಿ ಮುಖ್ಯಮಂತ್ರಿ ಮೇಲಿದೆ. ಅಲ್ಲದೆ, ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಬಹುತೇಕ ಕಡೆ ಬರ ಆವರಿಸಿದೆ. ಹಣಕಾಸು ಸ್ಥಿತಿ ಸರಿಯಿಲ್ಲ ಎಂದು ಮುಖ್ಯಮಂತ್ರಿಯವರೇ ಹೇಳಿದ್ದಾರೆ.

ಹಾಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರೇ, ಮುಂದೆ ಎಂದಾದರೂ ಬಿಡುವಿದ್ದಾಗ ರಾಜ್ಯದ ಎಲ್ಲ ದೇವಾಲಯಗಳಿಗೂ ಭೇಟಿ  ನೀಡುವಿರಿ. ಈಗ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ನೆರೆ, ಬರ, ಸಾಲದಿಂದ ತತ್ತರಿಸಿ ಹೋಗಿದ್ದು, ನೀವು ಆ ಸಮಸ್ಯೆಯತ್ತ ಗಮನಹರಿಸಿ. ರಾಜ್ಯದ ಜನರ ಕಷ್ಟಕ್ಕೆ ಸ್ಪಂದಿಸಿ. ಇಲ್ಲದಿದ್ದರೆ, ಅಭಿವೃದ್ಧಿ ಹೆಸರಲ್ಲಿ ಆಡಳಿತಕ್ಕೆ ಬಂದ ನಿಮ್ಮನ್ನು ಆ ತಾಯಿ ಚಾಮುಂಡೇಶ್ವರಿಯೂ ಕ್ಷಮಿಸುವುದಿಲ್ಲ.

 

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
ನವೀನ್ ಶೆಟ್ಟಿ ಮಂಗಳೂರು February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
ನವೀನ್ ಶೆಟ್ಟಿ ಮಂಗಳೂರು February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search