• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಶಿರಾಡಿ ಘಾಟ್‍ನಲ್ಲಿ ಆ.23ರವರೆಗೆ ಲಘುವಾಹನ, ಆ.25 ವರೆಗೆ ಭಾರೀ ವಾಹನಗಳ ಸಂಚಾರ ನಿರ್ಬಂಧ

Tulunadu News Posted On August 16, 2018
0


0
Shares
  • Share On Facebook
  • Tweet It

ಹಾಸನ: ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್‍ನಲ್ಲಿ ಗುಡ್ಡ ಕುಸಿದಿದ್ದು, ಆಗಸ್ಟ್ 20ರವರೆಗೆ ಲಘು ವಾಹನಗಳ ಸಂಚಾರ ಹಾಗೂ 25ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ರಸ್ತೆ ಮೇಲೆ ಬಿದ್ದಿರುವ ಮಣ್ಣು ಕುಸಿತ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದ್ದರಿಂದ ಕಾರ್ಯಾಚರಣೆಗಾಗಿ ಹತ್ತು ದಿನಗಳ ಕಾಲ ವಾಹನ ಸಂಚಾರ ನಿಷೇಧ ಮಾಡಲಾಗಿದೆ. ಆಗಸ್ಟ್ 20ರವರೆಗೆ ಎಲ್ಲಾ ವಾಹನ ಹಾಗೂ ಆಗಸ್ಟ್ 25 ರವರೆಗೆ ರಾಷ್ಟ್ರೀಯ ಹೆದ್ದಾರಿ-75 ಶಿರಾಡಿಘಾಟ್ ರಸ್ತೆಯಲ್ಲಿ ಭಾರಿ ವಾಹನಗಳು ನಿಷೇಧ ಮಾಡಿ ಈ ಬಗ್ಗೆ ಸಕಲೇಶಪುರ ಉಪವಿಭಾಗಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಪತ್ರದಲ್ಲಿ ಏನಿದೆ?:
ಜಿಲ್ಲೆಯಾದ್ಯಂತ ಮುಂದಿನ ಮೂರು ದಿನಗಳವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಅರಬ್ಬಿ ಸಮುದ್ರದ ಅಲೆಗಳು 3 ರಿಂದ 4 ಮೀಟರ್ ಗಳಷ್ಟು ಎತ್ತರವಿದ್ದು, ಮೀನುಗಾರರು ಸುಮುದ್ರಕ್ಕೆ ಇಳಿಯಬಾರದು. ಸಂಪಾಜೆ, ಶಿರಾಡಿ ಘಾಟ್ ಬಂದ್ ಆಗಿದ್ದು ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ಸಂಚರಿಸಬಹುದು.

ನೇತ್ರಾವತಿ, ಕುಮಾರಧಾರ ನದಿ ಪಾತ್ರದ ತಗ್ಗು ಪ್ರದೇಶದ ಜನರು ಎತ್ತರ ಪ್ರದೇಶಗಳಿಗೆ ತೆರಳುವುದು. ಎಂದಿನಂತೆ ಶಾಲಾ ಕಾಲೇಜುಗಳು ನಡೆಯುತ್ತವೆ. (ಮಳೆಯ ಪ್ರಮಾಣ ಹೆಚ್ಚಾದಲ್ಲಿ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರು ರಜೆ ಫೋಷಿಸಬಹುದು ಎಂದು ಜಿಲ್ಲಾ ವಿಪತ್ತು ಮಿರ್ವಹಣಾ ಪ್ರಾಧಿಕಾರ ಇಲಾಖೆಯಿಂದ ಪತ್ರದ ಮೂಲಕ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

ಚಾರ್ಮಾಡಿ ಘಾಟ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ದೊಡ್ಡತಪ್ಲು ಬಳಿ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದ್ದು, ಲಾರಿಯಲ್ಲಿದ್ದ ಕೆ.ಆರ್.ಪೇಟೆ ಮೂಲದ ಸಂದೀಪ್ ಹಾಗು ಮಾನ್ವಿ ಮೂಲದ ವೆಂಕಟೇಶ್ ಸಾವನ್ನಪ್ಪಿದ್ದಾರೆ. ಟ್ಯಾಂಕರ್ ನೋಡಲು ಹೋದ ಮಂಗಳೂರು ಮೂಲದ ರಾಮದೇವ್ ಅಪಘಾತದಲ್ಲಿ ಸಾವನ್ನಪ್ಪಿದ್ದರು.

ಘಟನೆ ನಡೆದ ಸ್ಥಳಕ್ಕೆ ಸಚಿವ ರೇವಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಹೆತ್ತೂರು ಹೋಬಳಿ ಪಟ್ಲ ಗ್ರಾಮದ ಬಳಿ ರಸ್ತೆ ಬಿರುಕು ಬಿಟ್ಟಿದೆ. ಗುಡ್ಡ ಕುಸಿತಕ್ಕೆ ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತವಾಗಿದೆ. 4 ವರ್ಷಗಳ ಬಳಿಕ ಬೇಲೂರಿನ ಯಗಚಿ ಜಲಾಶಯ ಭರ್ತಿಯಾಗಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search