• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಳೆರಾಯನ ಆರ್ಭಟ ಮತ್ತೆ ಶುರು, ಮನೆಪಕ್ಕದಲ್ಲೇ ಗುಡ್ಡ ಕುಸಿತ: ಕುದುರೆಮುಖ ಸಂಪೂರ್ಣ ಬಂದ್

Tulunadu News Posted On August 19, 2018


  • Share On Facebook
  • Tweet It

ಚಿಕ್ಕಮಗಳೂರು: ಮಲೆನಾಡಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದ್ದು, ಮೂರು ಗ್ರಾಮಗಳಲ್ಲಿ ಮನೆಪಕ್ಕದಲ್ಲೇ ಗುಡ್ಡ ಕುಸಿದಿದೆ. ಕೊಪ್ಪ ತಾಲೂಕಿನ ಹುಲುಗರಡಿ, ಬೈರೇದೇವರು, ಸಂಪಾನೆ ಗ್ರಾಮದಲ್ಲಿ ಗುಡ್ಡ ಕುಸಿದು ಮಣ್ಣು ಮನೆಗೆ ಅಪ್ಪಳಿಸಿದೆ. ರವಿಶಂಕರ್, ಶ್ರೀಪಾಲ್, ವರ್ಧಮಾನಯ್ಯಾನವರ ನಿವಾಸಕ್ಕೆ ಮಣ್ಣು ಅಪ್ಪಳಿಸಿದ್ದು, ಮನೆಯವರಲ್ಲಿ ಆತಂಕ ಉಂಟಾಗಿದೆ.

ರಾಜ್ಯ ಹೆದ್ದಾರಿ 66ರಲ್ಲಿ ನಾಲ್ಕು ಕಡೆ ರಸ್ತೆಯ ಮೇಲೆ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ಕುಸಿತದಿಂದಾಗಿ ರಾಜ್ಯ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದೆ. ಪರಿಣಾಮ ಕಳಸ ಸಂಚಾರ ಕೂಡ ಬಂದ್ ಆಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಕುದುರೆಮುಖ ಸಮೀಪದ ರಸ್ತೆಯಲ್ಲಿ ಗುಡ್ಡ ಕುಸಿದು ಬೀಳುತ್ತಿದೆ. ಹಾಗಾಗಿ ಸ್ಥಳಕ್ಕೆ ಕುದುರೆಮುಖ ಪೊಲೀಸರು ಭೇಟಿ ನೀಡಿ ವಾಹನ ಸಂಚಾರ ಮಾಡದಂತೆ ತಡೆಯುತ್ತಿದ್ದಾರೆ. ಚಾರ್ಮಾಡಿ ಘಾಟ್ ನಲ್ಲಿ ಲಾರಿಗಳಿಗೆ ನಿಷೇಧವಾದ ಹಿನ್ನೆಲೆಯಲ್ಲಿ ಶನಿವಾರದಿಂದ ಭಾರೀ ಗಾತ್ರದ ವಾಹನಗಳು ಈ ಮಾರ್ಗವಾಗಿ ಮಂಗಳೂರು ತಲುಪುತ್ತಿದ್ದವು. ಆದರೆ ಆದರೆ ಈಗ ಗುಡ್ಡ ಕುಸಿದು ಬೀಳುತ್ತಿರುವ ಕಾರಣ ಕುದುರೆಮುಖ ಮಾರ್ಗವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search