• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಬೆಟ್ಟ ಕುಸಿದು ಅವಾಂತರ ಸೃಷ್ಟಿ; ಕೂಜುಮಲೆ, ಕಲ್ಮಕಾರಿನಲ್ಲಿ ನಡೆದ ದುರಂತವನ್ನು ಜಿಲ್ಲಾಡಳಿತ ಮುಚ್ಚಿಟ್ಟಿದ್ದೇಕೆ?

Tulunadu News Posted On August 22, 2018
0


0
Shares
  • Share On Facebook
  • Tweet It

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೊಡಗಿನ ಜೋಡುಪಾಳ ಮತ್ತು ಮದೆನಾಡಿನಲ್ಲಿ ಸಂಭವಿಸಿದ ಭೂ ಕುಸಿತಕ್ಕೆ ಸಿಲುಕಿ ಅಪಾಯದಲ್ಲಿದ್ದ ಎಲ್ಲರನ್ನು ಎನ್ ಡಿ ಆರ್ ಎಫ್ ಹಾಗು ದಕ್ಷಿಣ ಕನ್ನಡ ಪೊಲೀಸರ ತಂಡ ರಕ್ಷಿಸಿ ಸುರಕ್ಷಿತ ಪ್ರದೇಶಗಳಿಗೆ ಸಾಗಿಸಿದೆ.  ಈ ದುರಂತದಲ್ಲಿ ಮನೆ ಕಳೆದುಕೊಂಡ 800ಕ್ಕೂ ಹೆಚ್ಚು ಜನರನ್ನು ಸಂಪಾಜೆ, ಅರಂತೋಡಿನ ಸಂತ್ರಸ್ತರ ಶಿಬಿರದಲ್ಲಿ ಇರಿಸಲಾಗಿದೆ. ಈ ನಡುವೆ ಜೋಡುಪಾಳ ಮತ್ತು ಮದೆನಾಡಿನಲ್ಲಿ ಭೂಕುಸಿತಕ್ಕಿಂತಲೂ ದೊಡ್ಡ ಪ್ರಮಾಣದ ದುರಂತಗಳು ಸಂಭವಿಸಿರುವುದು ಈಗ ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಮತ್ತೊಂದು ಕಡೆ ಬೃಹತ್ ಬೆಟ್ಟ ಕುಸಿದು ಅವಾಂತರ ಸೃಷ್ಟಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಟ್ಟಕಡೆಯ ಗ್ರಾಮ ಸುಳ್ಯ ತಾಲೂಕಿನ ಕಲ್ಮಕಾರಿನ ಬಳಿಯಿರುವ ಕಡಮಕಲ್ ಎಸ್ಟೇಟ್ ವ್ಯಾಪ್ತಿಯಲ್ಲಿ ಬೃಹತ್ ಬೆಟ್ಟ ಕುಸಿದಿರುವುದು ಬೆಳಕಿಗೆ ಬಂದಿದೆ. ಎಸ್ಟೇಟ್ ಒಳಗಿರುವ ಹೊಳೆಯ ಸೇತುವೆ ಕೊಚ್ಚಿ ಹೋಗಿದ್ದು, ಭಾರೀ ಗಾತ್ರದ ಬೃಹತ್ ಮರಗಳೂ ಛಿದ್ರಗೊಂಡು ಬಿದ್ದಿವೆ. ಮೂರು ದಿನಗಳ ಹಿಂದೆ ಈ ಭಾಗದಲ್ಲಿ ಭಾರೀ ಸ್ಫೋಟ ಸಂಭವಿಸಿದ ಸದ್ದು ಕೇಳಿಸಿತ್ತು. ಇದರಿಂದ ಎಸ್ಟೇಟ್ ಕಾರ್ಮಿಕರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ನಿವಾಸಿಗಳು ಭಯಭೀತರಾಗಿದ್ದರು. ಹಾಗೆಯೇ ಕೂಜುಮಲೆ ಅರಣ್ಯ ವ್ಯಾಪ್ತಿಯಲ್ಲಿ ಭೂಮಿ ಬಿರುಕು ಬಿಟ್ಟಿರುವುದು ಗೋಚರಿಸಿದೆ. ಅಲ್ಲೇ ಆಸುಪಾಸಿನ ಕಲ್ಮಕಾರು, ಬಾಳುಗೋಡು ಗ್ರಾಮಗಳ 30ಕ್ಕೂ ಹೆಚ್ಚು ಮನೆಗಳ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಅಲ್ಲದೆ, ಎಸ್ಟೇಟ್ ನಲ್ಲಿರುವ 40ಕ್ಕೂ ಹೆಚ್ಚು ತಮಿಳು ಕಾರ್ಮಿಕರು ಭಯದಿಂದ ಸ್ಥಳ ಬಿಟ್ಟು ಓಡಿಹೋಗಿದ್ದಾರೆ.

ಪಶ್ಚಿಮ ಘಟ್ಟ ಸ್ಫೋಟಗೊಂಡು ಇಡೀ ಪ್ರದೇಶವೇ ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ಭಯದಿಂದ ಕಾರ್ಮಿಕರು ಓಡಿದ್ದಾರೆ. ಇಲ್ಲಿ ಈ ಪ್ರಮಾಣದ ಭಾರೀ ದುರಂತ ನಡೆದಿದ್ದರೂ ಜನಸಂಚಾರ ವಿರಳವಾಗಿರುವ ಕಾರಣ ಘಟನೆಯನ್ನು ಜಿಲ್ಲಾಡಳಿತ ಮುಚ್ಚಿಟ್ಟಿತ್ತು ಎಂದು ಆರೋಪಿಸಲಾಗಿದೆ. ಈ ಪ್ರದೇಶ ಅತ್ಯಂತ ಕುಗ್ರಾಮ ಆಗಿರುವ ಕಾರಣ ಯಾವುದೇ ಅಧಿಕಾರಿ ವರ್ಗ ಸ್ಥಳಕ್ಕೆ ತೆರಳಿರಲಿಲ್ಲ. ಸ್ಥಳೀಯರ ಮಾಹಿತಿ ಮೇರೆಗೆ ಮಾಧ್ಯಮದಲ್ಲಿ ವರದಿಯಾಗಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಪುತ್ತೂರು ವಿಭಾಗಾಧಿಕಾರಿ ಕೃಷ್ಣಮೂರ್ತಿ ಸ್ಥಳಕ್ಕೆ ತೆರಳಿದ್ದು, ಬೆಟ್ಟಗಳ ಮೇಲೆ ಏನೋ ದುರಂತ ಸಂಭವಿಸಿರುವ ಸಾಧ್ಯತೆಯಿದೆ ಅಂತ ಒಪ್ಪಿಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search