• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗಾಳಿಬೀಡು, ವಣಚ್ಚಲ್ ಬೆಟ್ಟದ ತುತ್ತ ತುದಿಯಲ್ಲಿ ಕಿಲೋಮೀಟರ್‌ಗಟ್ಟಲೇ ಭೂಮಿ ಬಿರುಕು; ಭೂಮಿ ಕುಸಿತ!

Tulunadu News Posted On August 26, 2018


  • Share On Facebook
  • Tweet It

ಮಂಗಳೂರು: ಕೊಡಗು ಮಹಾಮಳೆ ಹಾಗೂ ಭಾರೀ ಭೂ ಕುಸಿತದ ಅನಾಹುತದಿಂದ ನಿಧಾನವಾಗಿ ಹೊರ ಬರುತ್ತಿದೆ. ದುರಂತಗಳಿಂದ ಸಂತ್ರಸ್ತರಾದ ಜನ ಮತ್ತೆ ಬದುಕು ಕಟ್ಟಿಕೊಳ್ಳುವ ನಿರ್ಧಾರದೊಂದಿಗೆ ಮುಂದಡಿ ಇಟ್ಟಿದ್ದಾರೆ. ಆದರೆ ಈ ನಡುವೆಯೇ ಬೆಟ್ಟಗಳ ಮೇಲೆ ಹೋದ ರಕ್ಷಣಾ ತಂಡ ಆಘಾತಕಾರಿ ವಿಷ ಹೊರಹಾಕಿದೆ. ಪಶ್ಚಿಮ ಘಟ್ಟದ ಬೆಟ್ಟಗಳಲ್ಲಿ ಬಿರುಕು ಮೂಡಿದ ಆಘಾತಕಾರಿ ಘಟನೆಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಈ ವಿಚಾರಗಳು ಸ್ಥಳೀಯ ಜನರಲ್ಲಿ ಮತ್ತೆ ದುರಂತ ಸಂಭವಿಸುವ ಆತಂಕ ಮೂಡಿಸಿವೆ..

ಬೆಟ್ಟದ ತುತ್ತ ತುದಿಯಲ್ಲಿ ಕಿಲೋಮೀಟರ್‌ಗಟ್ಟಲೇ ಭೂಮಿ ಬಿರುಕು ಬಿಟ್ಟಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಪಶ್ಚಿಮ ಘಟ್ಟದ ಗಿರಿಶಿಖರದ ಮೇಲೆ ಭೂಮಿ ಬಾಯಿ ತೆರೆದಿರುವುದು ಕಂಡುಬಂದಿದೆ. ಭೂ ಕುಸಿತವಾದ ಸಂಧರ್ಭದಲ್ಲಿ ಜೀವ ಭಯದಿಂದ ಬೆಟ್ಟ ಪ್ರದೇಶಗಳಿಂದ ಜನ ಓಡಿ ಹೋಗಿ ಸುರಕ್ಷಿತ ಸ್ಥಳ ಸೇರಿದ್ದರು. ಆದರೆ ಈ ಬೆಟ್ಟಪ್ರದೇಶದ ಮನೆಗಳ ಸಾಕು ಪ್ರಾಣಿಗಳು ಅಲ್ಲಿಯೇ ಉಳಿದು ಬಿಟ್ಟಿದ್ದವು.

ಈ ಹಿನ್ನೆಲೆಯಲ್ಲಿ ಅಲ್ಲಿಯೇ ಸಿಲುಕಿಕೊಂಡು ಕೆಳಗೆ ಇಳಿಯಲಾಗದೆ ಒದ್ದಾಡುತ್ತಿದ್ದ ಸಾಕು ಪ್ರಾಣಿಗಳ ರಕ್ಷಣೆಗೆ ಬೆಟ್ಟದ ಮೇಲೆ ಹೋಗಿದ್ದ ರಕ್ಷಣಾ ತಂಡಕ್ಕೆ ಆಘಾತಕಾರಿ ದೃಶ್ಯ ಕಾಣಿಸಿದೆ. ಬೆಟ್ಟ ಪ್ರದೇಶದಲ್ಲಿ ಆಹಾರ ಇಲ್ಲದೆ ಕಂಗಾಲಾಗಿದ್ದ ಸಾಕು ಪ್ರಾಣಿಗಳನ್ನು ಸುರಕ್ಷಿತವಾಗಿ ಮರಳಿ ತರಲು ರಿಸರ್ವ್ ಪೊಲೀಸ್ ಇನ್ಸ್ ಪೆಕ್ಟರ್ ಗಣೇಶ್ ಮತ್ತು ಕೆಲ ಸ್ವಯಂ ಸೇವಕರ ತಂಡ ಗಿರಿ ಶಿಖರಗಳ ಮೇಲೆ ಹೋಗಿತ್ತು. ಗಿರಿ ಶಿಖರದ ಮೇಲೆ ತಂಡ ಹೋಗುತ್ತಿದ್ದಂತೆಯೇ ಅಪಾಯಕಾರಿಯಾಗಿ ಭೂಮಿ ಬಾಯ್ದೆರೆದಿರುವುದು ಗೋಚರಿಸಿದೆ.

ಅತೀ ಸೂಕ್ಷ್ಮ ಪ್ರದೇಶ ಎಂದು ಘೋಷಿಸಲಾದ ಪಶ್ಚಿಮ ಘಟ್ಟದಲ್ಲಿ ಮತ್ತೆ ಭಾರೀ ಭೂಕುಸಿತವಾಗುವ ಸಾಧ್ಯತೆಗಳು ಕಂಡು ಬಂದಿದ್ದು, ಮತ್ತೆ ಮಳೆ ಬಂದರೆ ಭಾರೀ ಪ್ರಮಾಣದಲ್ಲಿ ಭೂ ಕುಸಿತವಾಗುವ ಸಾಧ್ಯತೆಗಳ ಬಗ್ಗೆ ರಕ್ಷಣಾ ತಂಡ ಆತಂಕ ವ್ಯಕ್ತಪಡಿಸಿದೆ. ಬೆಟ್ಟದ ತುದಿಗೆ ಪರಿಶೀಲನೆಗೆ ತೆರಳಿದ್ದ ತಂಡ ಈ ಆಘಾತಕಾರಿ ವಿಚಾರ ಪತ್ತೆ ಹಚ್ಚಿದೆ. ಗಾಳಿಬೀಡು ಹಾಗು ಪಕ್ಕದ ವಣಚ್ಚಲ್ ಬೆಟ್ಟದಲ್ಲಿ ಭಾರೀ ಬಿರುಕು ಕಂಡಿದೆ‌. ಅಲ್ಲದೇ ಎಕರೆಗಟ್ಟಲೆ ಭೂಮಿ ಕುಸಿದಿರುವ ಭೀಕರ ದೃಶ್ಯ ಕಂಡು ಬಂದಿದೆ.

ಬೆಟ್ಟದಲ್ಲಿ ಇನ್ನಷ್ಟು ಬಿರುಕು ಬಿಟ್ಟಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಮತ್ತೆ ಮಳೆ ಸುರಿದರೆ ಭಾರೀ ಗುಡ್ಡ ಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಈ ಸಂದರ್ಭದಲ್ಲಿ ಬೆಟ್ಟದ ಮೇಲೆ‌ ತಂಡ ಸಾಕುಪ್ರಾಣಿಗಳ ರಕ್ಷಣೆ ಕೂಡ ಮಾಡಿದೆ.

ಬ್ರಹ್ಮಗಿರಿ, ಕೂಜುಮಲೆ, ಬೆಟ್ಟದಲ್ಲೂ ಬಿರುಕು ಕಂಡು ಬಂದಿದ್ದು, ಈಗ ಗಾಳಿಬೀಡು, ವಣಚ್ಚಲ್ ಬೆಟ್ಟಗಳ ಮೇಲೂ ಕಂಡು ಬಂದಿರುವ ಬಿರುಕು ಜನರನ್ಮು ಮತ್ತಷ್ಟು ಆತಂಕಗೊಳಿಸಿದೆ. ಬೆಟ್ಟದ ಮೇಲೆ ಕಂಡುಬಂದಿರುವ ಈ ಬಿರುಕುಗಳ ಬಗ್ಗೆ ಶೀಘ್ರವಾಗಿ ಅಧ್ಯಯನ ನಡೆಸಬೇಕಾದ ಅವಶ್ಯಕತೆ ಇದೆ. ಈ ಬಿರುಕುಗಳಿಗೆ ಕಾರಣ ಹುಡುಕ ಬೇಕಾದ ತುರ್ತು ಅನಿವಾರ್ಯತೆ ಇದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search