• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕೇರಳ ಹಾಗು ಕೊಡಗಿನ ಸಂತ್ರಸ್ತರಿಗೆ ಪಿಗ್ಗಿ ಬ್ಯಾಂಕ್ ಮುಡುಪಿಟ್ಟ ಕಂದಮ್ಮಗಳು

Tulunadu News Posted On August 26, 2018
0


0
Shares
  • Share On Facebook
  • Tweet It

ಮಂಗಳೂರು: ಕೇರಳ ಹಾಗು ಕೊಡಗಿನಲ್ಲಿನಿರಂತರವಾಗಿ ಸುರಿದ ಮಳೆ ಅಪಾರ ನಷ್ಟವನ್ನು ಉಂಟು ಮಾಡಿದೆ. ಭೂ ಕುಸಿತ ಸೇರಿದಂತೆ ಸುರಿದ ಭಾರೀ ಮಳೆ ದುರಂತ ಪರಿಸ್ಥಿತಿಯನ್ನೇ ಸೃಷ್ಠಿಸಿದೆ. ಮಳೆಯ ತೀವ್ರತೆಗೆ ಕೊಡಗಿನಲ್ಲಿ ಭೂಮಿ ಕುಸಿಯುತ್ತಿದೆ. ಹಲವು ರಸ್ತೆಗಳು ಮುಚ್ಚಿ ಹೋಗಿವೆ , ಮನೆಗಳು ತರಗೆಲೆಗಳಂತೆ ಧರೆಗುರುಳಿವೆ. ಕೇರಳ ಸೇರದಂತೆ ಕೊಡಗಿನಲ್ಲಿ ಸಾವಿರಾರು ಜನ ಮನೆ ಮಠ ಕಳೆದುಕೊಂಡು ಅಕ್ಷರಸಹ ದಾರಿಗೆ ಬಿದ್ದಿದ್ದಾರೆ. ಸಂಭವಿಸಿರುವ ದುರಂತಕ್ಕೆ ಕೊಡಗು ಹಾಗು ಕೇರಳದ 13 ಜಿಲ್ಲೆಗಳು ನಲುಗಿ ಹೋಗಿದೆ.

ಭಾರೀ ಮಳೆ ಹಾಗು ಬೂ ಕುಸಿತ ದಿಂದಾದ ನಷ್ಟಗಳ ಬಗ್ಗೆ ಲೆಕ್ಕಾಚಾರ ಆರಂಭವಾಗಿದೆ. ಕೊಡಗು ಹಾಗು ಕೇರಳದ ಸಂತ್ರಸ್ತರಿಗಾಗಿ ದೇಶದ ಮೂಲೆ ಮೂಲೆ ಯಿಂದ ಸಹಾಯ ಹಸ್ತ ಹರಿದು ಬರುತ್ತಿದೆ. ಸ್ವಯಂ ಸೇವಾ ಸಂಸ್ಥೆಗಳು ,ಸಂಘಟನೆಗಳು ಟ್ರಸ್ಟ್ ಗಳು ನೆರೆ ಸಂತ್ರಸ್ತರ ನೆರವಿಗೆ ದಾವಿಸುತ್ತಿವೆ. ಎಲ್ಲೆಡೆಯಿಂದ ಸಹಾಯದ ಮಹಾಪೂರವೇ ಹರಿದು ಬರುತ್ತಿದೆ. ಈ ಮಧ್ಯೆ ಇಬ್ಬರು ಮುದ್ದು ಕಂದಮ್ಮಗಳ ಹೃದಯ ಈ ನೆರೆ ಸಂಗ್ರಸ್ತರಿಗಾಗಿ ಮಿಡಿದಿದೆ. ಈ ಮುದ್ದು ಕಂದಮ್ಮಗಳು ತಮ್ಮ ದೇಣಿಗೆ ಯನ್ನು ನೆರೆ ಸಂತೃಸ್ತರಿಗೆ ಅರ್ಪಿಸಿದ್ದಾರೆ. ಈ ಕಂದಮ್ಮಗಳ ನೆರವು ಸಾಮಜಿಕ ಜಾಲತಾಣಗಳಲ್ಲಿ ಬಾರಿ ಪ್ರಶಂಸೆಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ನೆಲೆಸಿರುವ , ಕರಾವಳಿ ಮೂಲದ ಇಬ್ಬರು ಎಲ್ ಕೆ ಜಿ ಓದುತ್ತಿರುವ ಕಂದಮ್ಮಗಳು ತಮ್ಮ ಪಿಗ್ಗಿ ಬ್ಯಾಂಕ್ ನಲ್ಲಿ ಕೂಡಿಟ್ಟ ಹಣವನ್ನು ನೆರೆ ಪೀಡಿತರಿಗಾಗಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಸಿವಿಲ್ ಎಂಜೀನಿಯರ್ ಅಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಡ್ಪಿನಂಗಡಿಯ ಪ್ರಶಾಂತ್ ರೈ ಯವರ ಪುತ್ರಿ ಪ್ರಾಪ್ತಿ ರೈ ಹಾಗೂ ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿ ಕಾರ್ಕಳ ಮೂಲದ ಗೋಪಾಲ ಪೂಜಾರಿಯವರ ಮಗಳು ಜೀವಿತಾ ತಾವು ಉಳಿಸಿದ ಪಿಗ್ಗಿ ಬ್ಯಾಂಕಿನ ಹಣವನ್ನು ನೆರೆ ಸಂತ್ರಸ್ತರಿಗೆ ಕೊಡುವ ಮೂಲಕ ಕೇರಳ ಹಾಗು ಕೊಡಗಿನ ದುರಂತಕ್ಕೆ ಮಿಡಿದಿದ್ದಾರೆ. ಅಪ್ಪ, ಅಮ್ಮ, ಅಕ್ಕ,ಅಜ್ಜಾ, ಅಜ್ಜಿ , ಅಣ್ಣ, ಮಾಮ, ಹೀಗೆ ಪ್ರೀತಿಯಿಂದ ನೀಡಿದ ಚಿಕ್ಕ ಚಿಕ್ಕ ಮೊತ್ತವನ್ನು ಪಿಗ್ಗಿ ಬ್ಯಾಂಕ್ ನಲ್ಲಿ ಸಂಗ್ರಹಿಸಿದ್ದ ಈ ಪೋರಿಯರು ಹಣವನ್ನು ನೆರೆ ಸಂತ್ರಸ್ತರ ಪರವಾಗಿ ಧನ ಸಂಗ್ರಹ ಕ್ಕೆ ನೀಡಿದ್ದಾರೆ. ಈ ಮುದ್ದು ಮರಿಗಳ ಈ ಉದಾರತೆ ಇತರರಿಗೂ ಮಾದರಿ ಯಾಗಿದ್ದು ಸಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆ ವ್ಯಕ್ತ ವಾಗಿದೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search