• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇರಳ ಹಾಗು ಕೊಡಗಿನ ಸಂತ್ರಸ್ತರಿಗೆ ಪಿಗ್ಗಿ ಬ್ಯಾಂಕ್ ಮುಡುಪಿಟ್ಟ ಕಂದಮ್ಮಗಳು

Tulunadu News Posted On August 26, 2018


  • Share On Facebook
  • Tweet It

ಮಂಗಳೂರು: ಕೇರಳ ಹಾಗು ಕೊಡಗಿನಲ್ಲಿನಿರಂತರವಾಗಿ ಸುರಿದ ಮಳೆ ಅಪಾರ ನಷ್ಟವನ್ನು ಉಂಟು ಮಾಡಿದೆ. ಭೂ ಕುಸಿತ ಸೇರಿದಂತೆ ಸುರಿದ ಭಾರೀ ಮಳೆ ದುರಂತ ಪರಿಸ್ಥಿತಿಯನ್ನೇ ಸೃಷ್ಠಿಸಿದೆ. ಮಳೆಯ ತೀವ್ರತೆಗೆ ಕೊಡಗಿನಲ್ಲಿ ಭೂಮಿ ಕುಸಿಯುತ್ತಿದೆ. ಹಲವು ರಸ್ತೆಗಳು ಮುಚ್ಚಿ ಹೋಗಿವೆ , ಮನೆಗಳು ತರಗೆಲೆಗಳಂತೆ ಧರೆಗುರುಳಿವೆ. ಕೇರಳ ಸೇರದಂತೆ ಕೊಡಗಿನಲ್ಲಿ ಸಾವಿರಾರು ಜನ ಮನೆ ಮಠ ಕಳೆದುಕೊಂಡು ಅಕ್ಷರಸಹ ದಾರಿಗೆ ಬಿದ್ದಿದ್ದಾರೆ. ಸಂಭವಿಸಿರುವ ದುರಂತಕ್ಕೆ ಕೊಡಗು ಹಾಗು ಕೇರಳದ 13 ಜಿಲ್ಲೆಗಳು ನಲುಗಿ ಹೋಗಿದೆ.

ಭಾರೀ ಮಳೆ ಹಾಗು ಬೂ ಕುಸಿತ ದಿಂದಾದ ನಷ್ಟಗಳ ಬಗ್ಗೆ ಲೆಕ್ಕಾಚಾರ ಆರಂಭವಾಗಿದೆ. ಕೊಡಗು ಹಾಗು ಕೇರಳದ ಸಂತ್ರಸ್ತರಿಗಾಗಿ ದೇಶದ ಮೂಲೆ ಮೂಲೆ ಯಿಂದ ಸಹಾಯ ಹಸ್ತ ಹರಿದು ಬರುತ್ತಿದೆ. ಸ್ವಯಂ ಸೇವಾ ಸಂಸ್ಥೆಗಳು ,ಸಂಘಟನೆಗಳು ಟ್ರಸ್ಟ್ ಗಳು ನೆರೆ ಸಂತ್ರಸ್ತರ ನೆರವಿಗೆ ದಾವಿಸುತ್ತಿವೆ. ಎಲ್ಲೆಡೆಯಿಂದ ಸಹಾಯದ ಮಹಾಪೂರವೇ ಹರಿದು ಬರುತ್ತಿದೆ. ಈ ಮಧ್ಯೆ ಇಬ್ಬರು ಮುದ್ದು ಕಂದಮ್ಮಗಳ ಹೃದಯ ಈ ನೆರೆ ಸಂಗ್ರಸ್ತರಿಗಾಗಿ ಮಿಡಿದಿದೆ. ಈ ಮುದ್ದು ಕಂದಮ್ಮಗಳು ತಮ್ಮ ದೇಣಿಗೆ ಯನ್ನು ನೆರೆ ಸಂತೃಸ್ತರಿಗೆ ಅರ್ಪಿಸಿದ್ದಾರೆ. ಈ ಕಂದಮ್ಮಗಳ ನೆರವು ಸಾಮಜಿಕ ಜಾಲತಾಣಗಳಲ್ಲಿ ಬಾರಿ ಪ್ರಶಂಸೆಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ನೆಲೆಸಿರುವ , ಕರಾವಳಿ ಮೂಲದ ಇಬ್ಬರು ಎಲ್ ಕೆ ಜಿ ಓದುತ್ತಿರುವ ಕಂದಮ್ಮಗಳು ತಮ್ಮ ಪಿಗ್ಗಿ ಬ್ಯಾಂಕ್ ನಲ್ಲಿ ಕೂಡಿಟ್ಟ ಹಣವನ್ನು ನೆರೆ ಪೀಡಿತರಿಗಾಗಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಸಿವಿಲ್ ಎಂಜೀನಿಯರ್ ಅಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಡ್ಪಿನಂಗಡಿಯ ಪ್ರಶಾಂತ್ ರೈ ಯವರ ಪುತ್ರಿ ಪ್ರಾಪ್ತಿ ರೈ ಹಾಗೂ ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿ ಕಾರ್ಕಳ ಮೂಲದ ಗೋಪಾಲ ಪೂಜಾರಿಯವರ ಮಗಳು ಜೀವಿತಾ ತಾವು ಉಳಿಸಿದ ಪಿಗ್ಗಿ ಬ್ಯಾಂಕಿನ ಹಣವನ್ನು ನೆರೆ ಸಂತ್ರಸ್ತರಿಗೆ ಕೊಡುವ ಮೂಲಕ ಕೇರಳ ಹಾಗು ಕೊಡಗಿನ ದುರಂತಕ್ಕೆ ಮಿಡಿದಿದ್ದಾರೆ. ಅಪ್ಪ, ಅಮ್ಮ, ಅಕ್ಕ,ಅಜ್ಜಾ, ಅಜ್ಜಿ , ಅಣ್ಣ, ಮಾಮ, ಹೀಗೆ ಪ್ರೀತಿಯಿಂದ ನೀಡಿದ ಚಿಕ್ಕ ಚಿಕ್ಕ ಮೊತ್ತವನ್ನು ಪಿಗ್ಗಿ ಬ್ಯಾಂಕ್ ನಲ್ಲಿ ಸಂಗ್ರಹಿಸಿದ್ದ ಈ ಪೋರಿಯರು ಹಣವನ್ನು ನೆರೆ ಸಂತ್ರಸ್ತರ ಪರವಾಗಿ ಧನ ಸಂಗ್ರಹ ಕ್ಕೆ ನೀಡಿದ್ದಾರೆ. ಈ ಮುದ್ದು ಮರಿಗಳ ಈ ಉದಾರತೆ ಇತರರಿಗೂ ಮಾದರಿ ಯಾಗಿದ್ದು ಸಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆ ವ್ಯಕ್ತ ವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search