• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರಿನ ಪಿಂಕಿ ‘ಕ್ಯೂಟೆಸ್ಟ್ ಇಂಡಿಯನ್ ಡಾಗ್ ಅಲೈವ್’ ಫೈನಲಿಸ್ಟ್

Tulunadu News Posted On August 28, 2018
0


0
Shares
  • Share On Facebook
  • Tweet It

ಮಂಗಳೂರು: ಮಂಗಳೂರಿನ ಒಂದು ನಾಯಿ ಇದೀಗ ದೇಶದ ಗಮನ ಸೆಳೆದಿದೆ. ಪೇಟಾ ಇಂಡಿಯಾ ನಡೆಸುವ ಬೀದಿಯಿಂದ ರಕ್ಷಿಸಲಾಗುವ ಶ್ವಾನಗಳಿಗಾಗಿ ನಡೆಸುವ ಕ್ಯೂಟೆಸ್ಟ್ ಇಂಡಿಯನ್ ಡಾಗ್ ಅಲೈವ್ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದೆ. ಈ ಸ್ಪರ್ಧೆಯ ಅಂತಿಮ ಹಂತಕ್ಕೆ ದೇಶದಿಂದ ಆಯ್ಕೆಯಾಗಿರುವ ಹತ್ತು ಶ್ವಾನಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಏಕೈಕ ನಾಯಿ ಇದು. ಪೇಟಾ ಇಂಡಿಯಾ ಈ ಬಾರಿ ದೇಶದ ವಿವಿಧ ಭಾಗಗಳ ಒಟ್ಟು ಹತ್ತು ಶ್ವಾನಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ ನಗರದ ಜೀನ್ ಕ್ರಾಸ್ತಾ ರಕ್ಷಿಸಿ ಪೋಷಿಸಿದ ಪಿಂಕಿ ಹೆಸರಿನ ಶ್ವಾನ ಸ್ಥಾನ ಪಡೆದುಕೊಂಡಿದೆ.

ಕಳೆದ ಎಂಟು ವರ್ಷಗಳಿಂದ ಹಲವು ಶ್ವಾನಗಳನ್ನು ರಕ್ಷಣೆ ಮಾಡುತ್ತಿರುವ ಜೀನ್ ಕ್ರಾಸ್ತಾ ಕಳೆದ ವರ್ಷ ಜುಲೈ ನಲ್ಲಿ ಮಂಗಳಾ ಸ್ಟೇಡಿಯಂ ಬಳಿ ಸಾಗುತ್ತಿರುವಾಗ ನಿರ್ಮಾಣ ಹಂತದ ಕಟ್ಟಡದೊಳಗೆ ನಾಯಿ ಮರಿಯೊಂದು ಸಿಲುಕಿ ಅಳುತ್ತಿದ್ದ ದೃಶ್ಯವನ್ನು ನೋಡಿದ್ದರು. ನಂತರ ನಾಯಿ ಮರಿಯನ್ನು ತಮ್ಮ ಮನೆಗೆ ತೆಗೆದುಕೊಂಡ ಹೋದ ಕ್ರಾಸ್ತಾ ಅವರು ಅದನ್ನು ಉಪಚರಿಸಿದರು. ನಂತರ ಮನೆಯ ಮಂದಿಯ ವಿಶ್ವಾಸಕ್ಕೆ ಪಾತ್ರಳಾಗುವ ನಾಯಿ ಮರಿಯನ್ನು ಮನೆಯಲ್ಲೇ ಸಾಕುತ್ತಿದ್ದಾರೆ.

ಬೀದಿ ಬದಿಯಲ್ಲಿ ಅನ್ನ- ನೀರಿಲ್ಲದೆ ಅಲೆಯುತ್ತಿರುವ , ಕಟ್ಟಡ ಅಥವಾ ಇತರೆಡೆಗಳಲ್ಲಿ ಬಂಧಿಯಾಗಿರುವ, ಮಾಲಕನನ್ನು ಕಳೆದುಕೊಂಡು ಅಲೆದಾಡುವ ಶ್ವಾನಗಳನ್ನು ಅಥವಾ ಜೀವನ್ಮರಣ ಹೋರಾಟದ ಸ್ಥಿತಿಯಲ್ಲಿರುವುದನ್ನು ರಕ್ಷಿಸಿ ಅವುಗಳನ್ನು ಸಾಕಿದವರು, ತಮ್ಮ ಪ್ರೀತಿಯಲ್ಲಿ ಬೆಳೆದ ಶ್ವಾನಗಳ ಭಾವಚಿತ್ರಗಳನ್ನು ಕ್ಯೂಟೆಸ್ಟ್ ಇಂಡಿಯನ್ ಡಾಗ್ ಅಲೈವ್ ಸ್ಪರ್ಧೆಗೆ ಕಳುಹಿಸಿ ಕೊಡಬಹುದು. ಅದರಂತೆ ದೇಶದಾದ್ಯಂತ ಸುಮಾರು ಸಾವಿರಕ್ಕೂ ಹೆಚ್ಚು ದೇಶೀಯ ತಳಿಯ ರಕ್ಷಿಸಲ್ಪಟ್ಟ ಶ್ವಾನಗಳ ಫೋಟೋಗಳು ಪೇಟಾ ಸಂಸ್ಥೆಗೆ ಬಂದಿದ್ದವು.

ಶ್ವಾನಗಳ ರಕ್ಷಣೆಯ ಕಥೆಗಳನ್ನು ಆಲಿಸಿ ಮತ್ತು ಚಿತ್ರಗಳನ್ನು ಪರಿಶೀಲಿಸಿ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ. ಈ ಬಾರಿ ದೇಶದ ವಿವಿಧ ಭಾಗಗಳ ಒಟ್ಟು ಹತ್ತು ಶ್ವಾನಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದ್ದು, ಮಂಗಳೂರಿನ ಪಿಂಕಿ ಫೈನಲಿಸ್ಟ್. ಜೀನ್ ಕ್ರಾಸ್ತಾ ಅವರು ನಾಯಿ ಮರಿಯನ್ನು ರಕ್ಷಿಸುವ ಸಂದರ್ಭದಲ್ಲಿ ಆರು ತಿಂಗಳ ಚಿಕ್ಕ ಮರಿಯಾಗಿತ್ತು. ಈಗ ಸುಮಾರು ಒಂದೂವರೆ ವರ್ಷವಾಗಿದೆ. “ಪಿಂಕಿಯ ಮೂಗು ಮತ್ತು ಬೆರಳಿನ ಕೆಳಭಾಗದಲ್ಲಿ ಪಿಂಕ್ ಬಣ್ಣವಿತ್ತು. ಅದಕ್ಕಾಗಿ ಪಿಂಕಿ ಎಂದು ಹೆಸರಿಟ್ಟಿದ್ದೆವು. ಇದೀಗ ಕ್ಯೂಟೆಸ್ಟ್ ಇಂಡಿಯನ್ ಡಾಗ್ ಅಲೈವ್ ಕಂಟೆಸ್ಟ್ ಸ್ಪರ್ಧೆಯಲ್ಲಿ ಫೈನಲ್ ಗೆ ಆಯ್ಕೆಯಾಗಿರುವುದು ಸಂತಸ ತಂದಿದೆ” ಎನ್ನುತ್ತಾರೆ ನಾಯಿ ಮಾಲಕ ಜೀನ್ ಕ್ರಾಸ್ತಾ. ಕ್ಯೂಟೆಸ್ಟ್ ಇಂಡಿಯನ್ ಡಾಗ್ ಅಲೈವ್ ಕಂಟೆಸ್ಟ್ ಫೈನಲ್ ಸ್ಪರ್ಧೆ ಇಂದು ಮಂಗಳವಾರ ನಡೆಯಲಿದ್ದು, ನಾಳೆ ಅಂತಿಮ ಫಲಿತಾಂಶ ಬರಲಿದೆ.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search