• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ದಕ್ಷಿಣ ಕನ್ನಡದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ನೆಲ ಕಚ್ಚಿದ ಅಡಿಕೆ ಬೆಳೆ, ಸಂಕಷ್ಟಕ್ಕೊಳಗಾದ ರೈತರು

Tulunadu News Posted On August 29, 2018
0


0
Shares
  • Share On Facebook
  • Tweet It

ಮಂಗಳೂರು: ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಈ ಬಾರಿ ಅಡಿಕೆ ಬೆಳೆಗಾರರನ್ನು ಸಾಕಷ್ಟು ಕಾಡಿದೆ. ಮೇ ತಿಂಗಳ ಅಂತ್ಯದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಅಡಿಕೆ ಬೆಳೆಗೆ ಕೊಳೆ ರೋಗ ಬಾಧಿಸಿದ್ದು, ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸುಮಾರು ಶೇಕಡ 70 ರಷ್ಟು ಅಡಿಕೆ ಬೆಳೆ ಹಾನಿಗೊಂಡಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲೂ ಶೇಕಡ 80 ರಷ್ಟು ಅಡಿಕೆ ಬೆಳೆ ನೆಲಕಚ್ಚಿದ್ದು, ಅಡಿಕೆ ಬೆಳೆಗಾರರು ಈ ಬಾರಿ ಕೊಳೆ ರೋಗದಿಂದ ಜರ್ಜರಿತರಾಗಿದ್ದಾರೆ. ತೋಟಗಾರಿಕೆ ಇಲಾಖೆಯ ಬೋರ್ಡೋ ದ್ರಾವಣಕ್ಕೂ ಈ ಬಾರಿ ರೋಗ ಜಗ್ಗುತ್ತಿಲ್ಲ.

ಪ್ರತಿವರ್ಷ ಮಳೆಗಾಲದಲ್ಲಿ ಅಡಿಕೆ ಬೆಳೆಗಾರರು ಅಡಿಕೆಗೆ 2 ರಿಂದ 3 ಬಾರಿ ಬೋರ್ಡೋ ದ್ರಾವಣ ಸಿಂಪಡಿಸುವ ಮೂಲಕ ಅಡಿಕೆಗೆ ಕೊಳೆ ರೋಗ ಬಾರದಂತೆ ತಡೆಯುತ್ತಿದ್ದರು. ಆದರೆ ಈ ಬಾರಿಯ ಮಳೆ ಬೋರ್ಡೋ ದ್ರಾವಣ ಸಿಂಪಡಿಸುವುದಕ್ಕೂ ಅವಕಾಶ ನೀಡಲೇ ಇಲ್ಲ. ಆದರೂ ಕೆಲವು ಮಳೆಯ ನಡುವೆಯೂ ಬೋರ್ಡೋ ದ್ರಾವಣ ಸಿಂಪಡಿಸಿದ್ದರು. ಆದರೆ ಅದು ಫಲಕಾರಿಯಾಗಲಿಲ್ಲ. ಪರಿಣಾಮ ಎಳೆ ಅಡಿಕೆಗಳು ಉದುರಿ ಬೀಳುತ್ತಿದ್ದು, ಅಡಿಕೆಯನ್ನೇ ನಂಬಿದ್ದ ಕೃಷಿಕರು ಕಂಗಾಲಾಗಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುಮಾರು 34,977 ಹೆಕ್ಟೇರ್‌ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದ್ದು, ಸುಮಾರು 45,000 ಮೆಟ್ರಿಕ್‌ ಟನ್‌ನಷ್ಟು ಅಡಿಕೆ ಉತ್ಪಾದನೆಯಾಗುತ್ತಿದೆ. ಆದರೆ ಈ ಬಾರಿಯ ನಿರಂತರ ಮಳೆಯಿಂದಾಗಿ ಶೇಕಡ 80 ರಷ್ಟು ಅಡಿಕೆ ಬೆಳೆಗೆ ಕೊಳೆ ರೋಗ ಬಾಧೆ ತಗುಲಿದೆ. ಬೆಳ್ತಂಗಡಿ ತಾಲೂಕಿನ 81 ಗ್ರಾಮಗಳಲ್ಲಿ 8000 ಹೆಕ್ಟೇರ್ ಅಡಿಕೆ ಬೆಳೆಯಲಾಗುತ್ತಿದ್ದು, ತೋಟಗಾರಿಕಾ ಇಲಾಖೆಯ ಪ್ರಕಾರ 4,150 ಹೆಕ್ಟೇರ್ ಪ್ರದೇಶದಲ್ಲಿ ಕೊಳೆ ರೋಗ ಬಾಧಿಸಿದೆ. ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಸಹಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ 17 ಸಾವಿರಕ್ಕೂ ಅಧಿಕ ಹೆಕ್ಟೇರ್ ತೋಟ ಕೊಳೆ ರೋಗಕ್ಕೆ ಒಳಗಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಉಡುಪಿ ಜಿಲ್ಲೆಯಲ್ಲೂ ಸುಮಾರು 8,100 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದ್ದು, ಸುಮಾರು 5600 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆಗೆ ಕೊಳೆರೋಗ ಬಂದು ನಾಶವಾಗಿದೆ. ಅಡಿಕೆ ಸೇರಿದಂತೆ ಎಲ್ಲಾ ರೀತಿಯ ಕೃಷಿ ಉತ್ಪನ್ನಗಳು ಪ್ರಾಕೃತಿಕ ವಿಕೋಪದಿಂದ ಹಾನಿಗೀಡಾದಾಗ ಸರಕಾರ ನೀಡುವ ಪರಿಹಾರ ಧನವು ಅತ್ಯಲ್ಪವಾಗಿದ್ದು, ಇದು ಮಾರುಕಟ್ಟೆ ದರಕ್ಕಿಂತಲೂ ಕಡಿಮೆ ಇರುತ್ತದೆ. ಈ ಹಿಂದೆ 2013-14ನೇ ಸಾಲಿನಲ್ಲಿ ಅಡಿಕೆಗೆ ಕೊಳೆರೋಗ ಬಂದಾಗ ಹೆಕ್ಟೇರಿಗೆ ಕೇವಲ 12 ಸಾವಿರ ರೂಪಾಯಿ ಪರಿಹಾರ ಧನ ವಿತರಿಸಲಾಗಿತ್ತು. ಈಗ ಅದನ್ನು 18 ಸಾವಿರ ರೂಪಾಯಿಗೆ ಏರಿಸಲಾಗಿದೆ. ಆದರೆ ಅದು ಅಡಿಕೆ ಬೆಳೆಯ ಮೌಲ್ಯಕ್ಕಿಂತ ತೀರಾ ಕನಿಷ್ಠ ಪರಿಹಾರ. ಒಂದು ಹೆಕ್ಟೇರ್ ಗೆ ವರ್ಷಕ್ಕೆ ಸುಮಾರು 25 ಕ್ವಿಂಟಾಲ್ ಅಡಿಕೆ ಬೆಳೆ ತೆಗೆಯಲಾಗುತ್ತದೆ.

ಅದರ ಮಾರುಕಟ್ಟೆ ಬೆಲೆಯೇ ಸುಮಾರು 5 ಲಕ್ಷ ಇರುತ್ತದೆ. ಸರಕಾರ ನೀಡುವ 18 ಸಾವಿರ ರೂಪಾಯಿ ಪರಿಹಾರ ಯಾವ ಲೆಕ್ಕಕ್ಕೂ ಬರುವುದಿಲ್ಲ. ರೈತರ ರಕ್ಷಣೆಗೆ ಕೇಂದ್ರ ಸರಕಾರ ಬೆಳೆ ವಿಮೆ ಜಾರಿಗೆ ತಂದಿದ್ದರೂ ಮಾಹಿತಿಯ ಕೊರೆತೆಯಿಂದಾಗಿ ಮತ್ತು ಅಡಿಕೆ ಬೆಳೆಗಾರರು ಮನಸ್ಸು ಮಾಡದೇ ಇರುವುದರಿಂದ ಅಪಾರ ನಷ್ಟ ತಂದುಕೊಳ್ಳುತ್ತಿದ್ದಾರೆ. ಬೆಳೆ ವಿಮೆ ಮಾಡಿಸಿದ್ದಲ್ಲಿ ಪ್ರಕೃತಿ ವಿಕೋಪಗಳ ಸಂದರ್ಭ ಸಹಾಯಕ್ಕೆ ಬರುತ್ತದೆ. ಆದರೆ ಅಡಿಕೆ ಬೆಳೆಗಾರರು ಬೆಳೆ ವಿಮೆಯತ್ತ ಮನಸ್ಸು ಮಾಡದೇ ಇರುವುದರಿಂದ ಬೆಳೆ ಸಂಪೂರ್ಣ ನಾಶವಾದಾಗ ಯಾವುದೇ ಪರಿಹಾರ ಸಿಗದೆ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search