• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗುರುವಾಯನಕೆರೆಯಲ್ಲೇ ಟ್ರಾಫಿಕ್‌ ಜಾಮ್‌; ಪೊಲೀಸರ ಜತೆ ಸಂಚಾರ ನಿಯಂತ್ರಿಸಿದ ತಹಶೀಲ್ದಾರ್‌

Tulunadu News Posted On August 31, 2018


  • Share On Facebook
  • Tweet It

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಘನ ವಾಹನ ಸಂಚಾರಕ್ಕೆ ಅವಕಾಶ ನೀಡುವ ಕುರಿತು ದ.ಕ.ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಯ ಗೊಂದಲದಿಂದಾಗಿ ಗುರುವಾರ ಬೆಳಗ್ಗೆ ಗುರುವಾಯನಕೆರೆಯಲ್ಲೇ ಟ್ರಾಫಿಕ್‌ ಜಾಮ್‌ ಉಂಟಾಗಿ ಕೊನೆಗೆ ಬೆಳ್ತಂಗಡಿ ತಹಶೀಲ್ದಾರ್‌ ಮದನ್‌ಮೋಹನ್‌ ಅವರೇ ಫೀಲ್ಡಿಗಿಳಿದು ಟ್ರಾಫಿಕ್‌ ನಿಯಂತ್ರಿಸಿದ ಘಟನೆ ಸಂಭವಿಸಿದೆ.

ಟ್ರಾಫಿಕ್‌ ಜಾಮ್‌; ಜಿಲ್ಲಾಧಿಕಾರಿ ಆದೇಶದ ಮಧ್ಯೆಯೂ ಪೊಲೀಸರು ಘನ ವಾಹನಗಳಿಗೆ ಸಂಚಾರಕ್ಕೆ ಅವಕಾಶ ನೀಡುತ್ತಿದ್ದಾರೆ ಎಂದು ಆರೋಪದ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಆ. 29ರಿಂದ ತರಕಾರಿ, ಅಡುಗೆ ಅನಿಲ ಸಿಲಿಂಡರ್‌ ಸಹಿತ ಆಹಾರ ಸಾಮಗ್ರಿಗಳ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲ ಲಾರಿಗಳನ್ನು ಚಾರ್ಮಾಡಿ ಘಾಟಿಯಲ್ಲಿ ತೆರಳದಂತೆ ಗುರುವಾಯನಕೆರೆಯಲ್ಲಿ ತಡೆಹಿಡಿಯಲಾಗಿತ್ತು.

ಹೀಗಾಗಿ ಎಲ್ಲ ಲಾರಿಗಳು ಗುರುವಾಯನಕೆರೆಯಲ್ಲಿ ಬಂದು ನಿಂತಿದ್ದವು. ಇದರಿಂದ ಗುರುವಾರ ಬೆಳಗ್ಗೆ ಇತರ ವಾಹನಗಳು ಹೆಚ್ಚಾಗಿ ಟ್ರಾಫಿಕ್‌ ಜಾಮ್‌ ಉಂಟಾಯಿತು. ಬಳಿಕ ತಹಶೀಲ್ದಾರ್‌ ಸ್ಥಳಕ್ಕೆ ಆಗಮಿಸಿ, ಪೊಲೀಸರಿಗೆ ಮನವರಿಕೆ ಮಾಡಿ 6 ಚಕ್ರಗಳ ಲಾರಿಗಳಿಗೆ ಘಾಟಿ ರಸ್ತೆಯಲ್ಲಿ ಅವಕಾಶ ನೀಡುವಂತೆ ತಿಳಿಸಿದರು.

ಸಹಜ ಸ್ಥಿತಿಗೆ; ಇದರಿಂದ ಗುರುವಾಯನಕೆರೆಯಲ್ಲಿ ನಿಂತಿದ್ದ ಎಲ್ಲ ಲಾರಿಗಳು ಏಕಕಾಲದಲ್ಲಿ ಹೊರಟ ಪರಿಣಾಮ ಬೆಳ್ತಂಗಡಿ, ಉಜಿರೆ ಭಾಗದಲ್ಲೂ ವಾಹನಗಳ ಒತ್ತಡ ಹೆಚ್ಚಾಗಿತ್ತು. ಎಲ್ಲ ಲಾರಿಗಳು ತೆರಳಿದ ಬಳಿಕ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search