• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಟೋರಿಯಸ್ ಕೈದಿಯನ್ನು ಪೊಲೀಸರೇ ರಸ್ತೆ ಮಧ್ಯೆ ಮನೆಯವರನ್ನು ಭೇಟಿ ಮಾಡಿಸಿದ್ಯಾಕೆ?

Tulunadu News Posted On September 4, 2018


  • Share On Facebook
  • Tweet It

ಮಂಗಳೂರು: ಜೈಲಿನಲ್ಲಿರುವ ಕೈದಿಗಳನ್ನು ಭೇಟಿಯಾಗಲು ಕಾರಾಗೃಹದ ಎದುರು ಕುಟುಂಬಸ್ಥರು ದಿನವಿಡೀ ಕಷ್ಟಪಡುತ್ತಾರೆ. ಆದರೆ ನಟೋರಿಯಸ್ ಕೈದಿಯೊಬ್ಬನನ್ನು ಪೊಲೀಸರೇ ರಸ್ತೆ ಮಧ್ಯೆ ಕುಟುಂಬಸ್ಥರಿಗೆ ಭೇಟಿ ಮಾಡಿಸಿ ಕಾನೂನು ಉಲ್ಲಂಘಿಸಿದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಫರಂಗಿಪೇಟೆಯ ಡಬಲ್ ಮರ್ಡರ್ ಪ್ರಕರಣದ ಪ್ರಮುಖ ಆರೋಪಿ ನಟೋರಿಯಸ್ ರೌಡಿ ನೌಫಾಲ್ ಯಾನೆ ಡೀಲ್ ನೌಫಾಲ್ ನನ್ನು ಪ್ರಕರಣ ಒಂದಕ್ಕೆ ಸಂಬಂಧಿಸಿ ತುಮಕೂರು ಪೊಲೀಸರು ಮಂಗಳೂರು ಜೈಲಿನಿಂದ ಕರೆದೊಯ್ದಿದ್ದರು.

ತುಮಕೂರಿನ ಕೋರ್ಟಿಗೆ ಹಾಜರುಪಡಿಸಿ, ಮಂಗಳೂರಿಗೆ ಹಿಂತಿರುಗುತ್ತಿದ್ದಾಗ ದಾರಿ ಮಧ್ಯೆ ತುಮಕೂರು ಪೊಲೀಸ್ ವಾಹನ ನಿಲ್ಲಿಸಿ ನೌಫಾಲ್ ಕುಟುಂಬಸ್ಥರ ಭೇಟಿಗೆ ಅವಕಾಶ ಮಾಡಿದ್ದಾರೆ. ಮಂಗಳೂರಿನ ಕದ್ರಿ ಪೊಲೀಸ್ ಠಾಣೆ ಮುಂಭಾಗದಲ್ಲಿ ಘಟನೆ ನಡೆದಿದ್ದು, ನೌಫಾಲ್ ಪತ್ನಿ, ಮಗು ಸೇರಿ ಕುಟುಂಬಸ್ಥರು ಪೊಲೀಸ್ ವಾಹನದಲ್ಲಿಯೇ ಭೇಟಿ ಮಾಡಿದ್ದಾರೆ. ಪೊಲೀಸರು ಜೊತೆಗಿದ್ದರೂ, ವಿಚಾರಣಾಧೀನ ಕೈದಿಯನ್ನು ರಸ್ತೆ ಮಧ್ಯೆ ನಿಲ್ಲಿಸಿ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡಿದ್ದು ಹೇಗೆ ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಇಂಥ ಸಂದರ್ಭದಲ್ಲಿ ಕೈದಿ ತಪ್ಪಿಸಿಕೊಳ್ಳುವ ಅಥವಾ ಅಪಹರಣಕ್ಕೆ ಒಳಗಾಗುವ ಸಾಧ್ಯತೆಗಳೂ ಇರುತ್ತವೆ.

ಆದರೆ, ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಪೊಲೀಸರು ಕೈದಿಯ ಜೊತೆ ಹೊಂದಾಣಿಕೆ ಮಾಡಿಕೊಂಡು ಕುಟುಂಬಸ್ಥರನ್ನು ಭೇಟಿ ಮಾಡಿಸಿದ್ದು ಕರ್ತವ್ಯ ಲೋಪಕ್ಕೆ ನಿದರ್ಶನ ಎಂದು ಅರೋಪಿಸಲಾಗಿದೆ. ಪೊಲೀಸರು ಎಸಗಿರುವ ಈ ಲೋಪ ಪ್ರಕರಣ ಮೊಬೈಲ್ ನಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search