• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಮೊಸರು ಕುಡಿಕೆ ಉತ್ಸವ

Tulunadu News Posted On September 4, 2018


  • Share On Facebook
  • Tweet It

ಮಂಗಳೂರು: ಮಹಾರಾಷ್ಟ್ರದಲ್ಲಿ ದಹಿಹಾಂಡಿ (ಮೊಸರಿನ ಮಡಿಕೆ ಒಡೆಯುವ) ಗೋವಿಂದರ ಟೋಲಿ ಬಹಳ ಪ್ರಸಿದ್ಧ. ದಹಿಹಾಂಡಿ ಒಡೆಯುವ ಈ ಉತ್ಸವವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶದಿಂದ ಪ್ರವಾಸಿಗರು ಮುಂಬೈನ ಗಲ್ಲಿ ಗಲ್ಲಿಗಳಿಂದ ಬರುತ್ತಾರೆ. ಮಹಾರಾಷ್ಟ್ರದಲ್ಲಿ ಆಯೋಜಿಸಲಾಗುವ ದಹಿಹಾಂಡಿ ಒಡೆಯುವ ಉತ್ಸವದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ‘ಮೊಸರು ಕುಡಿಕೆ’ ಉತ್ಸವ ಆಯೋಜಿಲಾಗುತ್ತದೆ. ಮಂಗಳೂರಿನಲ್ಲಿ ನಡೆಯುವ ಈ ಮೊಸರು ಕುಡಿಕೆ ಉತ್ಸವವನ್ನು ನೋಡುವುದೇ ಕಣ್ಣಿಗೆ ಹಬ್ಬ. ನಗರದಾದ್ಯಂತ ಸೋಮವಾರ ಮೊಸರು ಕುಡಿಕೆ ಉತ್ಸವ ಅತ್ಯಂತ ಶ್ರದ್ಧೆ, ಭಕ್ತಿ, ಸಂಭ್ರಮ, ಸಡಗರದಿಂದ ಆಚರಿಸಲಾಯಿತು.

109ನೇ ವರ್ಷದ ಮೊಸರು ಕುಡಿಕೆ ಉತ್ಸವ ಮೊಸರು ಕುಡಿಕೆ ಕಟ್ಟೆಯಲ್ಲಿ ಜರುಗಿದ್ದು, ಮೊಸರು, ನೀರು, ಹಾಲು, ನಾನಾ ವಸ್ತುಗಳನ್ನು ಎತ್ತರದ ಕಮಾನುಗಳಲ್ಲಿ ಕಟ್ಟಲಾದ ಮಣ್ಣಿನ ಮಡಕೆಯಲ್ಲಿ ಹಾಕಿ ಇಡಲಾಗುತ್ತದೆ. ಆ ನಂತರ ಗೋವಿಂದಾ… ಹಾಡಿನೊಂಡಿಗೆ ಬರುವ ಸಾಹಸಿ ಯುವಕರ ತಂಡ ಇದನ್ನು ಒಡೆದುಕೊಂಡು ಬರುವ ದೃಶ್ಯ ನೋಡುವುದೇ ಮನಮೋಹಕ. ಸಂಜೆ ನಗರದ ಹಲವಾರು ವೃತ್ತಗಳಲ್ಲಿ ವೈಭವಪೂರ್ಣ ದೃಶ್ಯಾವಳಿ, ಕಲಾ ರೂಪಕಗಳು, ನಾನಾ ಸಂಘ ಸಂಸ್ಥೆಗಳ ಟ್ಯಾಬ್ಲೋಗಗಳಿಂದ ಕೂಡಿದ ಶ್ರೀಕೃಷ್ಣ ಪರಮಾತ್ಮನ ಶೋಭಾಯಾತ್ರೆ ನಡೆಯಿತು.

ನಗರದ ಅತ್ತಾವರ , ಕದ್ರಿ, ಮಣ್ಣಗುಡ್ಡ, ಉರ್ವಾ, ಕಾವೂರು ಸೇರದಂತೆ ಇತರೆಡೆ ಮೊಸರು ಕುಡಿಕೆ ಕಟ್ಟೆಯಲ್ಲಿ ಪ್ರದರ್ಶನ ಹಾಗೂ ಗೌರವಾರ್ಪಣೆಗಳೊಂದಿಗೆ ಸಮಾಪನಗೊಂಡಿತು. ನಗರದಲ್ಲಿ ವೈಭವ ಪೂರ್ಣ ಮೊಸರು ಕುಡಿಕೆ ಮೆರವಣಿಗೆ, ಕೊಟ್ಟಾರ, ಉರ್ವಸ್ಟೋರ್ ಮಾರ್ಗವಾಗಿ ಅಶೋಕನಗರದವರೆಗೆ ನಡೆಯಿತು. ದಾರಿ ನಡುವೆ ಭಕ್ತಿ ಸಂಗೀತ ಸಂಜೆ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ ಸಾಂಪ್ರದಾಯಿಕವಾಗಿ ನಡೆಯಿತು.

ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಮೊಸರು ಕುಡಿಕೆ ಉತ್ಸವ ಆಯೋಜಿಸಲಾಗಿತ್ತು. ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಿಂದ ಭವ್ಯಾಲಂಕೃತವಾದ ಮಂಟಪದಲ್ಲಿ ಶ್ರೀ ಕೃಷ್ಣನ ವಿಗ್ರಹವನ್ನು ನಾನಾ ವೇಷ ಭೂಷಣಗಳಿಂದೊಡಗೂಡಿದ ವಿದ್ಯುದ್ದೀಪಾಲಂಕೃತವಾದ ಟ್ಯಾಬ್ಲೋಗಳೊಂದಿಗೆ ಮೊಸರು ಕುಡಿಕೆಯ ವೈಭವದ ಮೆರವಣಿಗೆ ಕಾವೂರು ಕೇಂದ್ರ ಮೊಸರು ಕುಡಿಕೆ ಮೈದಾನಕ್ಕೆ ಆಗಮಿಸಿತು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search