• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಊಟವಿಲ್ಲದೆ ಪರದಾಡಿದ ಜನರಿಗೆ ಆಹಾರ ವಿತರಿಸಿದ ಶಾಸಕ ವೇದವ್ಯಾಸ ಕಾಮತ್

Tulunadu News Posted On September 13, 2018
0


0
Shares
  • Share On Facebook
  • Tweet It

ಮಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ಮಂಗಳೂರಿನಲ್ಲಿ ಪರಿಣಾಮ ಬೀರಿದೆ. ಮುಂಜಾನೆಯಿಂದಲೇ ಖಾಸಗಿ ಹಾಗೂ ಸರಕಾರಿ ಬಸ್ ಸಂಚಾರ ಸ್ಥಗಿತಗೊಂಡ ಕಾರಣ ಜನರು ಪರದಾಡುವಂತಾಗಿತ್ತು. ನಗರದಲ್ಲಿ ಹೆಚ್ಚಿನ ಹೋಟೆಲ್ ಬಂದ್ ಆಗಿರುವ ಕಾರಣ ಪರವೂರುಗಳಿಂದ ಮಂಗಳೂರಿಗೆ ಬಂದ ಪ್ರಯಾಣಿಕರಿಗೆ ಸಮಸ್ಯೆಯುಂಟಾಯಿತು. ಬಸ್ ಸಂಚಾರ ಸ್ಥಗಿತಗೊಂಡ ಕಾರಣ ನಗರದಾದ್ಯಂತ ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಯಿತು.

ನಗರದ ಲಾಲ್ ಬಾಗ್ ಪ್ರದೇಶದಲ್ಲಿ ಅಂಗಡಿ ಮುಂಗಟ್ಟು, ಹೋಟೆಲ್ ಇಲ್ಲದ ಕಾರಣ ಜನರು ಆಹಾರ ಪದಾರ್ಥಗಳಿಗಾಗಿ ಸಮಸ್ಯೆ ಎದುರಿಸಿದರು. ಈ ಹಿನ್ನೆಲೆಯಲ್ಲಿ ಸಮಸ್ಯೆ ಎದುರಿಸುತ್ತಿದ್ದ ಜನರಿಗಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ್ ಕಾಮತ್ ಆಹಾರ ಮತ್ತು ಪಾನೀಯಗಳ ವ್ಯವಸ್ಥೆ ಮಾಡಿದರು.

ಶಾಸಕರ ಈ ಕಾರ್ಯದ ಬಗ್ಗೆ ಈಗ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಹೌದು, ಆಹಾರ ಸಮಸ್ಯೆ ಎದುರಿಸಿದ ಜನರಿಗಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಸುಮಾರು ಒಂದೂವರೆ ಸಾವಿರ ಜನರಿಗಾಗುವಷ್ಟು ಪುಲಾವ್ ಮತ್ತು ನೀರಿನ ಬಾಟಲುಗಳನ್ನು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ, ಹಂಪನಕಟ್ಟೆಯಲ್ಲಿರುವ ಖಾಸಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳ ಸಹಿತ ವಿವಿಧೆಡೆ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಿ ವೇದವ್ಯಾಸ ಕಾಮತ್, ಹಲವು ಕಡೆ ಹೋಟೆಲ್ ಗಳನ್ನು ಬಲವಂತವಾಗಿ ಕಾಂಗ್ರೆಸ್ಸಿಗರು ಬಂದ್ ಮಾಡಿದ್ದಾರೆ. ಕಲ್ಲು ತೂರಿದ್ದಾರೆ. ಇದರಿಂದ ಜನರಿಗೆ ಮಧ್ಯಾಹ್ನದ ಊಟಕ್ಕೂ ತೊಂದರೆಯಾಗಿದೆ. ತೊಂದರೆಗೆ ಒಳಗಾದ ಜನರಿಗೆ ಆಹಾರ ಮತ್ತು ಶುದ್ಧ ನೀರನ್ನು ಒದಗಿಸಿರುವುದಾಗಿ ಅವರು ತಿಳಿಸಿದರು.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search