• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಊಟವಿಲ್ಲದೆ ಪರದಾಡಿದ ಜನರಿಗೆ ಆಹಾರ ವಿತರಿಸಿದ ಶಾಸಕ ವೇದವ್ಯಾಸ ಕಾಮತ್

Tulunadu News Posted On September 13, 2018


  • Share On Facebook
  • Tweet It

ಮಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ಮಂಗಳೂರಿನಲ್ಲಿ ಪರಿಣಾಮ ಬೀರಿದೆ. ಮುಂಜಾನೆಯಿಂದಲೇ ಖಾಸಗಿ ಹಾಗೂ ಸರಕಾರಿ ಬಸ್ ಸಂಚಾರ ಸ್ಥಗಿತಗೊಂಡ ಕಾರಣ ಜನರು ಪರದಾಡುವಂತಾಗಿತ್ತು. ನಗರದಲ್ಲಿ ಹೆಚ್ಚಿನ ಹೋಟೆಲ್ ಬಂದ್ ಆಗಿರುವ ಕಾರಣ ಪರವೂರುಗಳಿಂದ ಮಂಗಳೂರಿಗೆ ಬಂದ ಪ್ರಯಾಣಿಕರಿಗೆ ಸಮಸ್ಯೆಯುಂಟಾಯಿತು. ಬಸ್ ಸಂಚಾರ ಸ್ಥಗಿತಗೊಂಡ ಕಾರಣ ನಗರದಾದ್ಯಂತ ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಯಿತು.

ನಗರದ ಲಾಲ್ ಬಾಗ್ ಪ್ರದೇಶದಲ್ಲಿ ಅಂಗಡಿ ಮುಂಗಟ್ಟು, ಹೋಟೆಲ್ ಇಲ್ಲದ ಕಾರಣ ಜನರು ಆಹಾರ ಪದಾರ್ಥಗಳಿಗಾಗಿ ಸಮಸ್ಯೆ ಎದುರಿಸಿದರು. ಈ ಹಿನ್ನೆಲೆಯಲ್ಲಿ ಸಮಸ್ಯೆ ಎದುರಿಸುತ್ತಿದ್ದ ಜನರಿಗಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ್ ಕಾಮತ್ ಆಹಾರ ಮತ್ತು ಪಾನೀಯಗಳ ವ್ಯವಸ್ಥೆ ಮಾಡಿದರು.

ಶಾಸಕರ ಈ ಕಾರ್ಯದ ಬಗ್ಗೆ ಈಗ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಹೌದು, ಆಹಾರ ಸಮಸ್ಯೆ ಎದುರಿಸಿದ ಜನರಿಗಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಸುಮಾರು ಒಂದೂವರೆ ಸಾವಿರ ಜನರಿಗಾಗುವಷ್ಟು ಪುಲಾವ್ ಮತ್ತು ನೀರಿನ ಬಾಟಲುಗಳನ್ನು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ, ಹಂಪನಕಟ್ಟೆಯಲ್ಲಿರುವ ಖಾಸಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳ ಸಹಿತ ವಿವಿಧೆಡೆ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಿ ವೇದವ್ಯಾಸ ಕಾಮತ್, ಹಲವು ಕಡೆ ಹೋಟೆಲ್ ಗಳನ್ನು ಬಲವಂತವಾಗಿ ಕಾಂಗ್ರೆಸ್ಸಿಗರು ಬಂದ್ ಮಾಡಿದ್ದಾರೆ. ಕಲ್ಲು ತೂರಿದ್ದಾರೆ. ಇದರಿಂದ ಜನರಿಗೆ ಮಧ್ಯಾಹ್ನದ ಊಟಕ್ಕೂ ತೊಂದರೆಯಾಗಿದೆ. ತೊಂದರೆಗೆ ಒಳಗಾದ ಜನರಿಗೆ ಆಹಾರ ಮತ್ತು ಶುದ್ಧ ನೀರನ್ನು ಒದಗಿಸಿರುವುದಾಗಿ ಅವರು ತಿಳಿಸಿದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search